News

bank, ಬ್ಯಾಂಕ್, ಸಾಲ, ಹಣ

ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

51133

ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.

1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.

2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.

3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.

ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.

ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.

ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.

* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ

* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ

* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್

* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.

ಮುದ್ರಾ ಕಾರ್ಡ್ :


ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ನೀವೇನು ಹರಿಶ್ಚಂದ್ರನ ತುಂಡುಗಳಾ?ಕೆಟ್ಟ ದಾಗಿ ಮಾತನಾಡಿದ್ರೆ ಸುಮ್ಮ ನಿರುವುದಿಲ್ಲ ಎಂದು ಟೀಕೆ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟ ರಾಕಿ ಭಾಯ್…

    ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಸ್ಪರ್ಧೆಯಿಂದಾಗಿ ಇಡೀ ದೇಶದ ಗಮನ ಸೆಳೆದಿದೆಮಂಡ್ಯ ಲೋಕಸಭಾ ಕ್ಷೇತ್ರ. ಅದರಲ್ಲೂ ಸುಮಲತಾ ಪರವಾಗಿ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ಪ್ರಚಾರ ನಡೆಸುತ್ತಿದ್ದು ಸಿಎಂ ಸೇರಿದಂತೆ ಜೆಡಿಎಸ್ ನಾಯಕರು ಸುಮಲತಾ ಬೆಂಬಲಿಗರಾದ ಸ್ಟಾರ್ ನಟರ ಮೇಲೆ ವಾಗ್ದಾಳಿಯನ್ನೇ ನಡೆಸಿದ್ದಾರೆ.  ಸ್ಟಾರ್ ನಟರನ್ನು ಕಳ್ಳೆತ್ತು ಎಂದು ಸಿಎಂ ಟೀಕಿಸಿದ್ದಕ್ಕೆ ಯಶ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಯಶ್, ಯಾರ…

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಉಪಯುಕ್ತ ಮಾಹಿತಿ

    ಈರುಳ್ಳಿಯಲ್ಲಿದೆ ಕೂದಲು ದಷ್ಟಪುಷ್ಟವಾಗಿ ಬೆಳೆಯಲು ರಾಮಬಾಣ…! ತಿಳಿಯಲು ಈ ಲೇಖನ ಓದಿ….

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.