bank, ಬ್ಯಾಂಕ್, ಸಾಲ, ಹಣ

ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

51110

ಯಾರುಬೇಕಾದ್ರು ಈ ಸಾಲ ಪಡೆಯಬಹುದು ಆದರೆ ಈ ನಿಯಮ ಪಾಲಿಸಬೇಕು.

ಪ್ರಧಾನಿಮಂತ್ರಿಯವರು `ಮುದ್ರಾ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

ಏನಿದು `ಮುದ್ರಾ ಯೋಜನೆ’..?

ಸ್ವ ಉದ್ಯೋಗ ಮಾಡ್ಬೇಕು ಅಂತ ಆಸಕ್ತಿ ಹೊಂದಿರೋರಿಗೆ ಈ ಯೋಜನೆ ಅಡಿಯಲ್ಲಿ ಸಾಲ ನೀಡಲಾಗುತ್ತೆ. ಈ ಯೋಜನೆಯ ಫಲಾನುಭವಿಗಳು ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಆರ್ಥಿಕ ಚಟುವಟಿಕೆಗಳಿಗೆ ಅಥವಾ ಕಿರು ಉದ್ಯಮಕ್ಕೆ ಸಾಲ ನೀಡಲಾಗುತ್ತೆ. ಇದಕ್ಕಾಗಿಯೇ ಕೇಂದ್ರ ಸರ್ಕಾರ “ಮುದ್ರಾ” ಬ್ಯಾಂಕ್ ಸ್ಥಾಪಿಸಿ, ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಣ್ಣ ಉದ್ಯಮದಾರರಿಗೆ ಸಾಲವನ್ನು ನೀಡುತ್ತಿದೆ. ಈ ಸಾಲ ನೀಡೋ ಯೋಜನೆಯನ್ನು ಮೊತ್ತದ ಆಧಾರದ ಮೇಲೆ ಮೂರು ವಿಧಗಳಾಗಿ ವಿಂಗಡಿಸಿದ್ದಾರೆ.

1. ಶಿಶು ಸಾಲ : 50,000 ರೂವರೆಗಿನ ಸಾಲವನ್ನು ಶಿಶು ಸಾಲ ಅಂತಾರೆ.

2. ಕಿಶೋರ ಸಾಲ : 50,000 ರೂಪಾಯಿಗಳಿಗಿಂತ ಮೇಲ್ಪಟ್ಟು 5ಲಕ್ಷ ರೂಪಾಯಿಗಳ ತನಕದ ಸಾಲವನ್ನು `ಕಿಶೋರ’ ಸಾಲವೆಂದು ಕರೀತಾರೆ.

3. ತುರುಣ್ ಸಾಲ : 5ಲಕ್ಷ ದಿಂದ 10 ಲಕ್ಷದವರೆಗಿನ ಸಾಲವನ್ನು ತರುಣ್ ಸಾಲ ಅಂತಾರೆ.

ಫಲಾನುಭವಿಯ ಅರ್ಹತೆ
ಪ್ರಧಾನಮಂತ್ರಿ ಮುದ್ರಾಯೋಜನೆಯಡಿ ಉತ್ಪಾದನೆ, ವ್ಯಾಪಾರ, ಸೇವಾ ವಲಯ, ಕೃಷಿಯೇತರ ವಾಣಿಜ್ಯ ಚಟುವಟಿಕೆ ಕೈಗೊಳ್ಳುವವರಿಗೆ ಕನಿಷ್ಟ 50 ಸಾವಿರದಿಂದ 10 ಲಕ್ಷ ರೂ ವರೆಗೆ ಸಾಲ ನೀಡಲಾಗುತ್ತಿದೆ. ಮೊದಲೇ ಹೇಳಿದಂತೆ ದೇಶದ ಪ್ರತಿಯೊಂದು ವಾಣಿಜ್ಯ ಬ್ಯಾಂಕ್ ಮತ್ತು ಗ್ರಾಮೀಣ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕವಲಯದ ಬ್ಯಾಂಕ್ಗಳೂ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು, ರಾಜ್ಯ ಸಹಕಾರಿ ಬ್ಯಾಂಕ್ ಗಳು, ನಗರ ಸಹಕಾರಿ ಬ್ಯಾಂಕ್ ಗಳೂ ಕೂಡ ಮುದ್ರಾದ ಅಡಿಯಲ್ಲಿ ಬರುತ್ತವೆ.

ಪ್ರಕ್ರಿಯೆ ಏನು..?
ಶಿಶು ಸಾಲವೇ., ಕಿಶೋರ್ ಸಾಲವೇ ಅಥವಾ ತರುಣ್ ಸಾಲವೇ ಎಂದು ನೋಡಲಾಗುತ್ತದೆ. ಅಂದರೆ ಫಲಾನುಭವಿಗೆ ಎಷ್ಟು ಸಾಲಬೇಕು..? ಅವನು ಮಾಡಹೊರಟಿರುವ ಉದ್ಯೋಗವೇನು ಅಂತ ತಿಳಿದು ಅದಕ್ಕನುಗುಣವಾಗಿ ಸಾಲವನ್ನು ನೀಡುವ ಪ್ರಕ್ರಿಯೆ ಶುರುವಾಗುತ್ತೆ.
ಫಲಾನಿಭವಿಯು ತನ್ನ ಹತ್ತಿರದ ಬ್ಯಾಂಕ್ ಅನ್ನು ಸಂಪರ್ಕಿಸಿ ಅಲ್ಲಿಂದ ಮುದ್ರಾ ಸಾಲಯೋಜನೆಯ ಅಡಿಯಲ್ಲಿ ಸಾಲ ಪಡೆಯ ತಕ್ಕದ್ದು.

ಪುರಾವೆ ಗುರುತೇನು(ಪ್ರೂಫ್ ಆಫ್ ಐಡೆಂಟಿಟಿ) :
* ಸೆಲ್ಫ್ ಅಟೆಸ್ಟೆಡ್ (ಸ್ವಯಂ ಸಹೀಕೃತ) ಚುನಾವಣ ಗುರುತಿನ ಚೀಟಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅಥವಾ ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ಯಾವುದಾದರೂ ಸರ್ಕಾರ ನೀಡಿದ ಗುರುತಿನ ಚೀಟಿ ಆಗಬಹುದು.

* ವಾಸಸ್ಥಳ ಪುರಾವೆಗಾಗಿ , ಇತ್ತೀಚಿನ ಟೆಲಿಫೋನ್ ಬಿಲ್ ಅಥವಾ ಎಲೆಕ್ಟ್ರಿಸಿಟಿ ಬಿಲ್, ಕಂದಾಯ ರಶೀದಿ( ಎರಡು ತಿಂಗಳಿಗಿಂತ ಹಳೆಯದಾಗಿರಬಾರದು) ಅಥವಾ ಚುನಾವಣ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಾಸ್ ಪೋರ್ಟ್ ಅಥವಾ ವಸತಿ ಪ್ರಮಾಣ ಪತ್ರ ಅಥವಾ ಸ್ಥಳೀಯ ಅಧಿಕಾರಿಯಿಂದ ಕೊಡಲಾದ ಯಾವುದೇ ಗುರುತಿನ ಪತ್ರ

* ಅರ್ಜಿದಾರನ ಇತ್ತೀಚಿಗಿನ ಭಾವಚಿತ್ರ

* ಕೊಂಡುಕೊಳ್ಳುವ ಯಂತ್ರೋಪಕರಣಗಳು ಅಥವಾ ವಸ್ತುವಿನ ಕೊಟೇಷನ್

* ಸರಬರಾಜುದಾರರ ಹೆಸರು ಮತ್ತು ವಿವರ
* ವ್ಯಾಪಾರ ಉದ್ಯಮದ ವಿಳಾಸ ( ಸಂಬಂಧಿಸಿದ ಪರವಾನಿಗೆ ಪತ್ರ)
* ವರ್ಗ ಅಥವಾ ಕೆಟಗರಿ ಪುರಾವೆ (ಪ್ರೂಫ್)
ಮುದ್ರಾ ಒಂದು ಬ್ಯಾಂಕ್ ಅಲ್ಲ :
ಇದನ್ನು ನೆನಪಿನಲ್ಲಿಟ್ಟುಕೊಳ್ಳಿ, ಕರ್ನಾಟಕ ಬ್ಯಾಂಕ್, ಎಸ್.ಬಿ.ಎಮ್. ಇವೇ ಮೊದಲಾದ ಬ್ಯಾಂಕ್ ಗಳ ರೀತಿಯಲ್ಲಿ ಮುದ್ರಾ ಅನ್ನೋದು ಪ್ರತ್ಯೇಕ ಬ್ಯಾಂಕ್ ಅಲ್ಲ. ಈ ಮುದ್ರಾ ಯೋಜನೆಯ ಅಡಿಯಲ್ಲಿ ಫಲಾನುಭವಿಗಳು ಮೊದಲೇ ಹೇಳಿದಂತೆ ಸ್ಥಳೀಯ ಬ್ಯಾಂಕ್ ಗಳಿಂದ ಸಾಲ ಪಡೆಯಬಹುದು.

ಮುದ್ರಾ ಕಾರ್ಡ್ :


ಮುದ್ರಾ ಯೋಜನೆ ಅಡಿಯಲ್ಲಿ ಸಾಲ ಮಂಜೂರಾದ ನಂತರ ಅಭ್ಯರ್ಥಿ `ಮುದ್ರಾ ಕಾರ್ಡ್’ ಅನ್ನು ಪಡೆಯುತ್ತಾರೆ. ಈ ಕಾರ್ಡ್ ಕ್ರೆಡಿಟ್ ಕಾರ್ಡ್ ರೀತಿಯದ್ದಾಗಿದೆ. ಈ ಕಾರ್ಡ್ ಮೂಲಕ ಅಭ್ಯರ್ಥಿ ತನ್ನ ವ್ಯವಹಾರಕ್ಕೆ ಸಂಬಂಧಿಸಿದಂತ ಕಚ್ಚಾ ಸಾಮಗ್ರಿಗಳನ್ನು ಪಡೆಬಹುದು. ಆದರೆ ಇದರ ಮಿತಿ ಸಾಲದ ಶೇಕಡ 10ರಷ್ಟು..! ಅಂದರೆ ಹೆಚ್ಚೆಂದರೆ 10000 ಮಾತ್ರ.

ಮುದ್ರಾಯೋಜನೆ ಲಾಭವನ್ನು ಪಡೆಯಿರಿ.. ಸಾಧ್ಯವಾದಷ್ಟು ಸ್ವಯಂ ಉದ್ಯೋಗಿಗಳಾಗಿ..ಇನ್ನೂ ಮಾಹಿತಿ ಬೇಕು ಅಂತಾದ್ರೆ ನಿಮ್ಮ ಸ್ಥಳೀಯ ಬ್ಯಾಂಕ್ ಗಳಿಗೆ ಭೇಟಿ ಕೊಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನಷ್ಟು ಸುರಕ್ಷಿತವಾದ ಎಂ-ಆಧಾರ್‌ ಆ್ಯಪ್‌ ಬಿಡುಗಡೆ,ಇದರ ವಿಶೇಷತೆಯಾದರು ಏನು ಗೊತ್ತಾ,.!

    ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್‌ ಆ್ಯಪ್‌ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಇನ್‌ಸ್ಟಾಲ್‌ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್‌ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್‌ ಕಾರ್ಡ್‌ ಡೌನ್‌ಲೋಡ್‌, ಆಫ್‌ಲೈನ್‌ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್‌ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್‌ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್‌ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್‌ ಆ್ಯಪ್‌ಅನ್ನು ಲಾಕ್‌…

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ಉಪಯುಕ್ತ ಮಾಹಿತಿ

    ಮನುಷ್ಯ ಸತ್ತ ನಂತರ ಮೂಗು ಮತ್ತು ಕಿವಿಗೆ ಹತ್ತಿಯನ್ನು ಇಡುತ್ತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಮತ್ತು ಶೇರ್ ಮಾಡಿ…

    ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…

  • ವಿಚಿತ್ರ ಆದರೂ ಸತ್ಯ

    10 ವರ್ಷಗಳ ಹಿಂದೆ 16 ಕೆಜಿ ತೂಕವಿದ್ದ ಈ ಯುವತಿ ಈಗ ಹೇಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.