ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರದಂದು ನಡೆದ ರಾಜ್ಯ ಆರೋಗ್ಯ ಇಲಾಖೆಯ ಸಭೆ ವೇಳೆ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಮಕ್ಕಳು ಮೆದುಳು ಜ್ವರದಿಂದ ಸಾವನ್ನಪ್ಪುತ್ತಿರುವುದರ ಬಗ್ಗೆ ಮಾತನಾಡುವ ಬದಲು ಕ್ರಿಕೆಟ್ ಪಂದ್ಯದ ಕುರಿತು ಪ್ರಶ್ನಿಸುತ್ತಿದ್ದು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುದಕ್ಕೆ ಉದಾಹರಣೆಯಾಗಿದೆ. ‘ಕ್ರಿಕೆಟ್ ಪಂದ್ಯದ ಫಲಿತಾಂಶ ಏನಾಯ್ತು?’ ಎಂದು ಸಚಿವರು ಪ್ರಶ್ನಿಸುತ್ತಿರುವುದು ಮತ್ತು ಮತ್ತೊಬ್ಬ ವ್ಯಕ್ತಿ `4ನೇ ವಿಕೆಟ್ ಹೊಗಿದೆ’ ಎಂದು ಸಭೆಯಲ್ಲಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಕ್ಕಳ ಸಾವಿನ ಕುರಿತು ರಾಜ್ಯದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ್ದು, ಸಚಿವರ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಈ ಹಿಂದೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತೂಕಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಆ ಬಳಿಕ ಈ ಬಗ್ಗೆ ಚೌಬೆ ಅವರು ಸ್ಪಷ್ಟಿಕರಿಸಿ, ‘ನಾನು ನಿದ್ರಿಸುತ್ತಿರಲಿಲ್ಲ, ಪತ್ರಿಕಾಗೋಷ್ಠಿ ಬಗ್ಗೆ ಯೋಚಿಸುತ್ತಿದ್ದೆ’ ಎಂದು ಹೇಳಿದ್ದರು. ಆ ಬಳಿಕ ಸೋಮವಾರ ಸ್ವತಃ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರೇ, ಸಾವಿನ ಬಗ್ಗೆ ಪ್ರತಿದಿನ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದರು.
ಆಸ್ಪತ್ರೆಗೆ ದಾಖಲಾಗಿರುವವರು, ನೀಡಲಾಗುತ್ತಿರುವ ಚಿಕಿತ್ಸೆ, ಮೃತಪಟ್ಟ ಕುಟುಂಬಕ್ಕೆ ನೀಡುವ ಪರಿಹಾರ, ನೆರವುಗಳ ಕುರಿತು ವರದಿ ಸಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗ ಆರೋಗ್ಯ ಸಚಿವಾಲಯಕ್ಕೆ ಕೇಳಿದೆ. ಹಾಗೆಯೇ ಈ ಬಗ್ಗೆ ನಾಲ್ಕು ವಾರದೊಳಗೆ ಉತ್ತರ ನೀಡುವಂತೆ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…