ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ. ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.
ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…
ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….
ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-
ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.
ಚರ್ಮ ಹೊಳೆಯುತ್ತೆ :-
ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.
ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-
ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.
ಚರ್ಮದ ಬಣ್ಣ ಹೆಚ್ಚಿಸುವುದು :-
ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.
ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…