ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ದೇಹದ ಮೇಲಿನ ಮಚ್ಚೆ, ನಿಮ್ಮ ಜಾತಕವನ್ನೇ ಬಿಚ್ಚಿಡುತ್ತದೆ! ಹುಟ್ಟಿದ ದಿನಾಂಕ, ಸಮಯ ಗೊತ್ತಾದರೆ ಜ್ಯೋತಿಷಿಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಇತರ ವಿಷಯಗಳ ಬಗ್ಗೆ ಸೂಕ್ತ ವಿವರ ನೀಡಬಲ್ಲರು. ಇಂದಿನ ಲೇಖನದಲ್ಲಿ ಹುಟ್ಟಿದ ದಿನ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ನೋಡೋಣ: ಈ ವಿವರಗಳ ಬಗ್ಗೆ ಅರಿತರೆ ನಿಮ್ಮ ಅಥವಾ ನೀವು ತಿಳಿದುಕೊಳ್ಳಬೇಕಾದ ವ್ಯಕ್ತಿಯ ವ್ಯಕ್ತಿತ್ವ ಮತ್ತು ನಿಮ್ಮ ಗುಣಗಳು ಹೇಗೆ ಎಂಬುದನ್ನು ಕಂಡುಕೊಳ್ಳಬಹುದು.

ಈ ದಿನದಂದು ಹುಟ್ಟಿದವರು ಸಾಮಾನ್ಯವಾಗಿ ಸ್ವಪ್ರಶಂಸಕರಾಗಿದ್ದು ಉಳಿದವರನ್ನೆಲ್ಲಾ ದ್ವೇಶಿಸುವ ಮನೋಭಾವ ಹೊಂದಿರುತ್ತಾರೆ. ಆದರೆ ಕೆಲವು ಅಪವಾದ ಎಂಬಂತೆ ಈ ದಿನ ಹುಟ್ಟಿರುವವರಲ್ಲಿ ಕೆಲವರು ಅತ್ಯಂತ ಪ್ರೇಮಮಯಿಗಳಾಗಿರುತ್ತಾರೆ. ಇವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುವವರೂ, ಕ್ರಿಯಾತ್ಮಕರೂ, ತಮ್ಮ ವಿಚಾರಗಳನ್ನು ತಮ್ಮೊಂದಿಗೇ ಇಟ್ಟುಕೊಳ್ಳುವವರೂ ಆಗಿರುತ್ತಾರೆ. ಇವರು ಯಸಸ್ಸನ್ನು ಹಿಂಬಾಲಿಸಿಕೊಂಡು ಹೋಗುವವರೂ, ನಾಯಕತ್ವದ ಗುಣಗಳನ್ನು ಹೊಂದಿರುವವರೂ ಆಗಿದ್ದಾರೆ.

ಇವರು ಕುತೂಹಲಕಾರಿ ವ್ಯಕ್ತಿಗಳಾಗಿದ್ದು ತಮ್ಮ ಬಗ್ಗೆ ಬರುವ ಅಭಿಪ್ರಾಯಗಳನ್ನು ಅತಿ ಗಂಭೀರವಾಗಿ ಪರಿಗಣಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಒಂದು ಗುರಿಯನ್ನು ಹೊಂದಿದ್ದು ಆ ಗುರಿಯನ್ನು ಪಡೆಯಲು ತಮ್ಮ ಪೂರ್ಣ ಸಾಮರ್ಥ್ಯವನ್ನು ಮುಡಿಪಾಗಿಸುತ್ತಾರೆ. ಸಂಬಂಧಗಳಿಗೆ ಹೆಚ್ಚು ಒಲವು ನೀಡುವ ಇವರು ಸಾಮಾನ್ಯವಾಗಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ಅನುಭವಿಸುತ್ತಾರೆ.

ಈ ದಿನ ಹುಟ್ಟಿದವರು ತಮ್ಮ ಕೆಲಸವನ್ನು ಇಷ್ಟಪಟ್ಟರೂ ಆರಾಮವಾಗಿ ಮಗಿಸುವಂತಹವರಾಗಿದ್ದಾರೆ. ಇವರು ತಾವಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ಕೈಕೆಳಗಿನ ವ್ಯಕ್ತಿಗಳಿಂದ ಪೂರ್ಣಪ್ರಮಾಣದ ಕೆಲಸವನ್ನು ಮಾಡಿಸಿಕೊಳ್ಳುವ ಗುಣ ಹೊಂದಿದ್ದು ಇದಕ್ಕಾಗಿ ತಮ್ಮ ಸ್ನೇಹ ಆದರಗಳನ್ನು ಬಳಸುತ್ತಾರೆ. ಇವರು ಸಮಾಜದ ವಿವಿಧ ಬಗೆಯ ವ್ಯಕ್ತಿಗಳೊಂದಿಗೆ ಇತರರಿಗಿಂತ ಸುಲಭವಾಗಿ ಸ್ನೇಹ ಸಂಪಾದಿಸಿಕೊಳ್ಳುತ್ತಾರೆ.

ಈ ದಿನ ಹುಟ್ಟಿದ ಜನರು ಸಾಮಾನ್ಯವಾಗಿ ಇತರರಿಂದ ಪ್ರಶಂಸೆ ಪಡೆಯುವವರಾಗಿರುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಒಂಟಿಯಾಗಿ ಕೆಲಸ ಮಾಡಲು ಇಚ್ಛಿಸುವವರಾಗಿದ್ದು ಸದಾ ಆಶಾವಾದಿಗಳಾಗಿರುತ್ತಾರೆ. ಇವರು ತಮ್ಮ ಸುತ್ತಮುತ್ತಲಿನ ಜನರಿಗೆ ಅತಿ ಹೆಚ್ಚಿನ ಗೌರವ ನೀಡುತ್ತಾರೆ ಹಾಗೂ ಗೌರವ ಪಡೆಯಲು ಇಚ್ಛಿಸುತ್ತಾರೆ.

ಶುಕ್ರವಾರ ಜನಿಸಿದ ಜನರು ಕ್ರಿಯಾತ್ಮರಾಗಿರುತ್ತಾರೆ. ಇವರು ಅಪಾರ ಬುದ್ಧಿಮತ್ತೆಯುಳ್ಳವರಾಗಿದ್ದು ತಮ್ಮ ಸ್ನೇಹವೃಂದದಲ್ಲಿ ಪ್ರಮುಖ ಪಾತ್ರ ಪಡೆಯುತ್ತಾರೆ. ಇವರಿಗೆ ಅಪಾರವಾದ ದೂರದೃಷ್ಟಿ ಮತ್ತು ಒಳ ಅರಿವು ಸಹಾ ಜನ್ಮತಃ ಬಂದಿರುತ್ತದೆ.

ಈ ದಿನ ಹುಟ್ಟಿದವರು ಅತಿ ಹೆಚ್ಚಿನ ಆತ್ಮವಿಶ್ವಾಸವುಳ್ಳವರಾಗಿರುತ್ತಾರೆ. ಆದರೆ ಕೆಲವೊಮ್ಮೆ ಇವರು ಚಿಕ್ಕಪುಟ್ಟ ಸೋಲುಗಳಿಗೂ ತೀರಾ ಹತಾಶೆ ವ್ಯಕ್ತಪಡಿಸಿ ಹಿಮ್ಮೆಟ್ಟುತ್ತಾರೆ. ಇವರು ಸಾಮಾನ್ಯವಾಗಿ ಹೊಸ ವಿಚಾರಗಳಿಗೆ ಸ್ಪಂದಿಸದೇ ಬದಲಿಗೆ ಋಣಾತ್ಮಕ ಸಲಹೆಗಳನ್ನೇ ನೀಡುತ್ತಾರೆ. ಇವರು ತಮ್ಮ ರೂಪ ಲಾವಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊಂಚ ಕುಟಿಲರೂ ಆಗಿರುತ್ತಾರೆ.

ಈ ದಿನ ಹುಟ್ಟಿದ ವ್ಯಕ್ತಿಗಳು ಅತಿ ಆಶಾವಾದಿಗಳಾಗಿದ್ದು ಭಿನ್ನ ಸಂದರ್ಭಗಳಲ್ಲಿ ಭಿನ್ನವಾಗಿ ಪ್ರತಿಕ್ರಿಯಿಸುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಚಿಂತನೆ ಹೊಂದಿದ್ದು ಸದಾ ನಗುತ್ತಲೇ ಇರುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜದಲ್ಲಿರಲು ಇಷ್ಟಪಡುವಂತೆಯೇ ಕೊಂಚ ಕಾಲ ಏಕಾಂತದಲ್ಲಿಯೂ ಇರಲು ಇಚ್ಛಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.