ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.

ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.

ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…