ರಾಜಕೀಯ

ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

356

ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.


ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.


ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ನುಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯಬೇಕೆಂದರೆ ಇದನ್ನು ಪಾಲಿಸಲೇಬೇಕು..!ಏನದು?

    ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್‌ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್  ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • ಸುದ್ದಿ

    ಟೀ ಕುಡಿಯಲು ಬಂದಾಗ ಹುಚ್ಚ ವೆಂಕಟ್ ಮೇಲೆ ಹಲ್ಲೆ. ಯುವಕರ ವಿರುದ್ಧಐಪಿಸಿ ಸೆಕ್ಷನ್ ಪ್ರಕರಣ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…

  • ಸುದ್ದಿ

    ವರುಣನ ಆರ್ಭಟ- ‘ಮಹಾ’ ಮಳೆಗೆ ಸೇತುವೆಗಳು ಮುಳುಗಡೆ

    ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…