ರಾಜಕೀಯ

ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

339

ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.


ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.


ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮೂಗಿನ ಮೇಲಿನ ಬ್ಲಾಕ್ ಹೆಡ್ಸ್ ಅನ್ನು ಸುಲಭವಾಗಿ ಹೋಗಲಾಡಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ವಿಶೇಷ ಲೇಖನ

    ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…

  • ಸುದ್ದಿ

    ಶಿಯೋಮಿ ಕಂಪೆನಿಯಿಂದ ಅದ್ಭುತ ಸ್ಮಾರ್ಟ್​ಫೋನ್ ಬಿಡುಗಡೆ 108 MP ಕ್ಯಾಮೆರಾ, 1 TB ಸ್ಟೋರೇಜ್,12 ಜಿಬಿ RAM…!

    ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್​ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್​ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್​ಫೋನ್​ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್​ನ ಈ ನೂತನ ಸ್ಮಾರ್ಟ್‌ಫೋನ್​ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್​ಗೆ ನೀಡಲಾಗಿರುವ  ಕ್ಯಾಮೆರಾ. ಹೌದು, ಮಿ ಮಿಕ್ಸ್​ 4ನಲ್ಲಿ 108 ಮೆಗಾಪಿಕ್ಸೆಲ್​ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್‌ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…