ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ.
ಏನಿದು ಮಾತೃಪೂರ್ಣ ಯೋಜನೆ ?
ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ ಈ ಯೋಜನೆಯಡಿ, ನೊಂದಾಯಿತ ಎಲ್ಲಾ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ದಿನದಂತೆ ವರ್ಷದಲ್ಲಿ 3೦೦ ದಿನ ನಿತ್ಯ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಉಚಿತ ಪೌಷ್ಟಿಕಾಂಶಯುಕ್ತ ಬಿಸಿಯೂಟ ವಿತರಿಸಲಾಗುತ್ತದೆ.
ಮಾತೃಪೂರ್ಣ ಯೋಜನೆಯಲ್ಲಿ ಏನೆಲ್ಲಾ ವಿತರಿಸಲಾಗುತ್ತದೆ…
ಈ ಯೋಜನೆಯಡಿ ನೀಡಲಾಗುವ ಬಿಸಿಯೂಟದಲ್ಲಿ ಅನ್ನ, ಸಾಂಬಾರ್, ಬೇಯಿಸಿದ ಮೊಟ್ಟೆ, ಪಲ್ಯ, 200 ಮಿಲಿ ಹಾಲು, ಶೇಂಗಾ ಚಿಕ್ಕಿ (ಮಿಠಾಯಿ) ಸೇರಿರುತ್ತದೆ. ಮೊಟ್ಟೆ ಸೇವಿಸದವರಿಗೆ ಮೊಳಕೆ ಕಾಳು ನೀಡಲಾಗುತ್ತದೆ. ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ದಿನಕ್ಕೆ ಅಗತ್ಯವಿರುವ ಶೇ 4೦ ರಿಂದ 45 ರಷ್ಟು ಪ್ರೋಟೀನ್, ಕ್ಯಾಲರಿ ಮತ್ತು ಕ್ಯಾಲ್ಸಿಯಂ ಈ ಒಂದು ಹೊತ್ತಿನ ಊಟದಿಂದ ದೊರಕುತ್ತದೆ. ಜೊತೆಗೆ ಕಬ್ಬಿಣಾಂಶಯುಕ್ತ ಮಾತ್ರೆಯನ್ನು ನೀಡಲಾಗುತ್ತಿದ್ದು, ಊಟವಾದ ಬಳಿಕ ಕಡ್ಡಾಯವಾಗಿ ಸೇವಿಸುವಂತೆ ಸೂಚಿಸಲಾಗುತ್ತದೆ.
ಮೂರು ತಿಂಗಳು ತುಂಬಿದ ಗರ್ಭಿಣಿಯರಿಂದ ಮಗು ಜನಿಸಿದ ನಂತರ ಬಾಣಂತಿ ಅವಧಿಯ 6 ತಿಂಗಳವರೆಗೆ ಉಚಿತ ಪೌಷ್ಟಿಕ ಆಹಾರ ಒದಗಿಸಲಾಗುತ್ತದೆ. ಅಂದರೆ ಒಟ್ಟು 12 ತಿಂಗಳು ಉಚಿತ ಊಟ ನೀಡಲಾಗುತ್ತದೆ. ಹೆಸರು ನೊಂದಾಯಿಸಿ ಗರ್ಭಿಣಿಯರು 3ನೇ ತಿಂಗಳಿನಿಂದ 8ನೇ ತಿಂಗಳ ಅಂತ್ಯದವರೆಗೂ ಅಂಗನವಾಡಿ ಕೇಂದ್ರಕ್ಕೆ ಬಂದು ಆಹಾರ ಸೇವಿಸಬೇಕು. 9ನೇ ತಿಂಗಳಿನಿಂದ ಬಾಣಂತಿ ಅವಧಿಯ 45 ದಿನದವರೆಗೂ ಸಹಾಯಕಿಯರು ಮನೆ ಬಾಗಿಲಿಗೆ ಊಟದ ಡಬ್ಬಿ ತಲುಪಿಸುತ್ತಾರೆ. ಉಳಿದ 41/2 ತಿಂಗಳು ಬಾಣಂತಿಯರು ಕೇಂದ್ರಕ್ಕೆ ಬರಬೇಕಾಗುತ್ತದೆ.
ಗರ್ಭಿಣಿಯರ ನೊಂದಣಿಯಿಂದ ಅವರಿಗೆ ಪ್ರಸವಪೂರ್ವ ಆರೈಕೆ ಸೇವೆಗಳು ದೊರಕುತ್ತದೆ. ಇಲ್ಲಿ ಹೆರಿಗೆಯ ಅನುಭವ ಹೊಂದಿರುವವರು ಮತ್ತು ಅನುಭವಿಗಳು ಒಂದೆಡೆ ಸೇರುವುದರಿಂದ ಅನುಭವ ಹಂಚಿಕೆ ಸಾಧ್ಯವಾಗುತ್ತದೆ. ಈ ವೇಳೆ ಅವರಿಗೆ ಆಪ್ತ ಸಮಾಲೋಚನೆ ಮಾಡಲಾಗುತ್ತದೆ. ಸ್ತನ್ಯ ಪಾನದ ಮಹತ್ವ, ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಿಕೊಳ್ಳುವುದು, ನಿಯಮಿತ ವೈದ್ಯಕೀಯ ತಪಾಸಣೆ, ವಿಶ್ರಾಂತಿ ಮುಂತಾದ ಅಗತ್ಯ ಮಾಹಿತಿ ನೀಡಲಾಗುತ್ತದೆ. ಪ್ರಸ್ತುತ ಗರ್ಭಿಣಿಯರು ಇರುವ ಮನೆಗೆ ಅಕ್ಕಿ, ಗೋಧಿ ಮುಂತಾದ ಧಾನ್ಯ ಪದಾರ್ಥಗಳನ್ನು ನೀಡುವ ಯೋಜನೆ ಜಾರಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಶಿಲ್ಪಿ ರವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ,ಇವರು ಕಲ್ಯಾಣಿ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ.
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…