ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ತಮ್ಮ ಮಲ್ಲೇಶ್ಬರಂ ಸ್ಪೋರ್ಟ್ಸ್ ಫೌಂಡೇಷನ್ ಮೂಲಕ ಕೈ ಜೋಡಿಸಿದ್ದಾರೆ.. ಇವರಿಗೆ ಸಾಥ್ ನೀಡಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ರವರು..

ಮಲ್ಲೇಶ್ವರಂನ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಯಾಣ್ ರವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರಲ್ಲಿ ಸದಾ ಮುಂದು.. ಈಗಾಗಲೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿರುವ, ಮಾಡುತ್ತಿರುವ ಇವರು ಇತ್ತೀಚೆಗೆ ರಾಜು ಕನ್ನಡ ಮೀಡಿಯಂ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿದ್ದನ್ನು ಕೂಡ ನಾವಿಲ್ಲಿ ನೆನೆಯಬಹುದು.. ಅದೇ ರೀತಿಯಾಗಿ ಈಗ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೈ ಜೋಡಿಸುವುದರ ಮೂಲಕ ಅನೇಕ ಕ್ರೀಡಾಪಟುಗಳ ಪ್ರತಿಭೆ ಹೊರಬರಲು ಕಾರಣರಾಗಿದ್ದಾರೆ..

ಅಂತರಾಷ್ಟ್ರೀಯ ಮಟ್ಟದ ಬಾಕ್ಸರ್ ಗಳು ಬಾಗಿಯಾಗುವ ಈ ಚಾಂಪಿಯನ್ ಶಿಪ್ ಬಹಳ ವಿಶೇಷವೆನ್ನಬಹುದು.. ಹೌದು ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ವೈಯಾಲಿ ಕಾವಲ್ ಕೋದಂಡ ರಾಮಪುರ ಕಬಡ್ಡಿ ಮೈದಾನದಲ್ಲಿ ಜನವರಿ 24 ರಿಂದ 28 ನೇ ತಾರೀಖಿನ ವರೆಗೆ ಜರುಗುತ್ತಿದೆ.. ಒಟ್ಟು 10 ಕ್ಯಾಟಗರಿಯಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಫೈನಲ್ ಮ್ಯಾಚ್ ಇದೇ 28 ರಂದು ನಡೆಯಲಿದೆ ಎಂದು ಬಾಕ್ಸಿಂಗ್ ಮಂಡಳಿ ತಿಳಿಸಿದೆ..

ದೇಶದಾದ್ಯಂತ ಒಟ್ಟು 30 ರಾಜ್ಯಗಳಿಂದಲೂ ತಂಡಗಳು ಆಗಮಿಸಿರುವುದರ ಜೊತೆಗೆ ನಮ್ಮ ಆರ್ಮಿಯ ಎರಡು ತಂಡಗಳು ಕೂಡ ಇದರಲ್ಲಿ ಭಾಗವಹಿಸಿವೆ..
ಈ ದೊಡ್ಡ ಮಟ್ಟದ ಚಾಂಪಿಯನ್ ಶಿಪ್ ಗೆ ನಮ್ಮ ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ರವರ ಹೆಸರಿಟ್ಟಿರುವುದು ವಿಶೇಷವಾಗಿದೆ..

ಡಾ ರಾಜ್ ಕುಮಾರ್ ಕಪ್ ಪಂದ್ಯಾವಳಿಯ ಕಾರ್ಯಕ್ರಮದಲ್ಲಿ ಖ್ಯಾತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ಹಾಗೂ ನವರಸ ನಾಯಕ ಜಗ್ಗೇಶ್ ಅವರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ….

ತೊಂದರೆಯಲ್ಲಿರುವವರಿಗೆ ಸಹಾಯಹಸ್ತ ಚಾಚುತ್ತಾ ಸದಾ ಒಂದಿಲ್ಲೊಂದು ಪ್ರತಿಭೆಗಳನ್ನು ಹೊರ ತರುತ್ತಿರುವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರಿಗೆ ಕನ್ನಡಿಗರ ಕಡೆಯಿಂದ ಧನ್ಯವಾದಗಳು..



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.