ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ತಮ್ಮ ಮಲ್ಲೇಶ್ಬರಂ ಸ್ಪೋರ್ಟ್ಸ್ ಫೌಂಡೇಷನ್ ಮೂಲಕ ಕೈ ಜೋಡಿಸಿದ್ದಾರೆ.. ಇವರಿಗೆ ಸಾಥ್ ನೀಡಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ರವರು..

ಮಲ್ಲೇಶ್ವರಂನ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಯಾಣ್ ರವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರಲ್ಲಿ ಸದಾ ಮುಂದು.. ಈಗಾಗಲೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿರುವ, ಮಾಡುತ್ತಿರುವ ಇವರು ಇತ್ತೀಚೆಗೆ ರಾಜು ಕನ್ನಡ ಮೀಡಿಯಂ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿದ್ದನ್ನು ಕೂಡ ನಾವಿಲ್ಲಿ ನೆನೆಯಬಹುದು.. ಅದೇ ರೀತಿಯಾಗಿ ಈಗ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೈ ಜೋಡಿಸುವುದರ ಮೂಲಕ ಅನೇಕ ಕ್ರೀಡಾಪಟುಗಳ ಪ್ರತಿಭೆ ಹೊರಬರಲು ಕಾರಣರಾಗಿದ್ದಾರೆ..

ಅಂತರಾಷ್ಟ್ರೀಯ ಮಟ್ಟದ ಬಾಕ್ಸರ್ ಗಳು ಬಾಗಿಯಾಗುವ ಈ ಚಾಂಪಿಯನ್ ಶಿಪ್ ಬಹಳ ವಿಶೇಷವೆನ್ನಬಹುದು.. ಹೌದು ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ವೈಯಾಲಿ ಕಾವಲ್ ಕೋದಂಡ ರಾಮಪುರ ಕಬಡ್ಡಿ ಮೈದಾನದಲ್ಲಿ ಜನವರಿ 24 ರಿಂದ 28 ನೇ ತಾರೀಖಿನ ವರೆಗೆ ಜರುಗುತ್ತಿದೆ.. ಒಟ್ಟು 10 ಕ್ಯಾಟಗರಿಯಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಫೈನಲ್ ಮ್ಯಾಚ್ ಇದೇ 28 ರಂದು ನಡೆಯಲಿದೆ ಎಂದು ಬಾಕ್ಸಿಂಗ್ ಮಂಡಳಿ ತಿಳಿಸಿದೆ..

ದೇಶದಾದ್ಯಂತ ಒಟ್ಟು 30 ರಾಜ್ಯಗಳಿಂದಲೂ ತಂಡಗಳು ಆಗಮಿಸಿರುವುದರ ಜೊತೆಗೆ ನಮ್ಮ ಆರ್ಮಿಯ ಎರಡು ತಂಡಗಳು ಕೂಡ ಇದರಲ್ಲಿ ಭಾಗವಹಿಸಿವೆ..
ಈ ದೊಡ್ಡ ಮಟ್ಟದ ಚಾಂಪಿಯನ್ ಶಿಪ್ ಗೆ ನಮ್ಮ ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ರವರ ಹೆಸರಿಟ್ಟಿರುವುದು ವಿಶೇಷವಾಗಿದೆ..

ಡಾ ರಾಜ್ ಕುಮಾರ್ ಕಪ್ ಪಂದ್ಯಾವಳಿಯ ಕಾರ್ಯಕ್ರಮದಲ್ಲಿ ಖ್ಯಾತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ಹಾಗೂ ನವರಸ ನಾಯಕ ಜಗ್ಗೇಶ್ ಅವರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ….

ತೊಂದರೆಯಲ್ಲಿರುವವರಿಗೆ ಸಹಾಯಹಸ್ತ ಚಾಚುತ್ತಾ ಸದಾ ಒಂದಿಲ್ಲೊಂದು ಪ್ರತಿಭೆಗಳನ್ನು ಹೊರ ತರುತ್ತಿರುವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರಿಗೆ ಕನ್ನಡಿಗರ ಕಡೆಯಿಂದ ಧನ್ಯವಾದಗಳು..



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನವಜಾತ ಶಿಶುಗಳ ತೂಕ 2.5 ಕೆಜಿಯಿಂದ 4.3 ಕೆಜಿಯೊಳಗೆ ಇರುತ್ತದೆ. ಆದರೆ, ಇಲ್ಲೊಬ್ಬಳು ತಾಯಿ ಜನ್ಮ ನೀಡಿದ ಮಗುವಿನ ತೂಕ ಸುಮಾರು 6 ಕೆಜಿ…! ಈ ಕಂದನ ತೂಕ ನೋಡಿ ಸ್ವತಃ ತಾಯಿಯೇ ಅಚ್ಚರಿಗೊಂಡಿದ್ದು, `ನಾನು ಮಿನಿ ರೆರ್ಸ್ಲೆರ್ಗೆ ಜನ್ಮ ನೀಡಿದ್ದೇನೆ’ ಎಂದು ಹೇಳಿಕೊಂಡಿದ್ದಾರೆ. ಸಿಡ್ನಿಯ ಎಮ್ಮಾ ಮಿಲ್ಲರ್ ಮತ್ತು ಡೇನಿಯರ್ ದಂಪತಿ ಕಳೆದ ವಾರ ರೆಮಿ ಫ್ರಾನ್ಸಿಸ್ ಮಿಲ್ಲರ್ನನ್ನು ಮನೆಗೆ ಸ್ವಾಗತಿಸಿದ್ದರು. ಆದರೆ, ರೆಮಿ ಎಲ್ಲಾ ಚಿಣ್ಣರಂತಿಲ್ಲ. ಇವಳ ದೇಹದ ತೂಕ ಸಹಜ ಮಕ್ಕಳ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….
ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್ಬುಕ್, ವಾಟ್ಸಪ್, ಇನ್ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ. ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ. ಗುರುವಾರ ಬೆಳಗ್ಗೆ ಪಕ್ಕದ…