News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

2716

ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.

ತ್ರಿವರ್ಣ ಧ್ವಜದ ವೈಶಿಷ್ಟ್ಯ:-

  • ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ.

  • ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರು 1947 ಜುಲೈ 22 ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ.

  • ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.

  • ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

  • ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-

  • ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
  • ಬಿಳಿಬಣ್ಣ:-ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
  • ಹಸಿರು ಬಣ್ಣ:- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ. ರಾಷ್ಟ್ರಧ್ವಜವನ್ನು ಹಾರಿಸಿದ ನಂತರರಾಷ್ಟ್ರ ಗೀತೆ  ಜನಗಣ ಮನವನ್ನು ಹಾಡಲೇಬೇಕು.

ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-

  1. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
  2. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  3. ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
  4. ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
  5. ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
  6. ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
  7. ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
  8. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು
  9. ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು
  10. ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.

ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-

ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!

ಹೌದು, ಸುಪ್ರೀಂಕೋರ್ಟ್‌ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್‌ 2016ರಲ್ಲಿ ಸುಪ್ರೀಂ ಕೋರ್ಟ್‌ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್‌ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.

ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಉಪಯುಕ್ತ ಮಾಹಿತಿ

    ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

    ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…