News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

2716

ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.

ತ್ರಿವರ್ಣ ಧ್ವಜದ ವೈಶಿಷ್ಟ್ಯ:-

  • ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ.

  • ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರು 1947 ಜುಲೈ 22 ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ.

  • ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.

  • ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

  • ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-

  • ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
  • ಬಿಳಿಬಣ್ಣ:-ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
  • ಹಸಿರು ಬಣ್ಣ:- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ. ರಾಷ್ಟ್ರಧ್ವಜವನ್ನು ಹಾರಿಸಿದ ನಂತರರಾಷ್ಟ್ರ ಗೀತೆ  ಜನಗಣ ಮನವನ್ನು ಹಾಡಲೇಬೇಕು.

ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-

  1. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
  2. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  3. ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
  4. ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
  5. ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
  6. ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
  7. ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
  8. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು
  9. ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು
  10. ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.

ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-

ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!

ಹೌದು, ಸುಪ್ರೀಂಕೋರ್ಟ್‌ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್‌ 2016ರಲ್ಲಿ ಸುಪ್ರೀಂ ಕೋರ್ಟ್‌ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್‌ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.

ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

    ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • ಉಪಯುಕ್ತ ಮಾಹಿತಿ

    ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…