News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !
ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!
ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ
ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ
ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
ಆಧ್ಯಾತ್ಮ

ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

6005

ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

ರುದ್ರಾಕ್ಷಿಯನ್ನು ಧರಿಸುವುದರಿಂದ ತನು-ಮನಗಳಲ್ಲಿ ಪವಿತ್ರತೆಯ ಸಂಚಾರವಾಗುತ್ತದೆ.ಪಾಪಗಳ ಸಮೂಹವನ್ನೇ ರುದ್ರಾಕ್ಷಿ ನಾಶಪಡಿಸುತ್ತದೆ.ಬಿಳಿ,ಕೆಂಪು,ಹಳದಿ ಹಾಗೂ ಕಪ್ಪುಬಣ್ಣಗಳಲ್ಲಿ ರುದ್ರಾಕ್ಷಿ ಸಿಗುತ್ತದೆ.ಋಷಿಗಳ ನಿರ್ದೇಶನದಂತೇ ಮನುಷ್ಯರು ತಮ್ಮ ದೇಹದ ಬಣ್ಣಗಳ ಪ್ರಕಾರ ರುದ್ರಾಕ್ಷಿಯನ್ನು ಧರಿಸಬೇಕು.ಸುಖ ಹಾಗೂ ಮೋಕ್ಷವನ್ನು ಬಯಸುವ ಜನರು ರುದ್ರಾಕ್ಷದ ಮಾಲೆಯನ್ನು ಧರಿಸಬೇಕು.ವಿಶೇಷವಾಗಿ ಶೈವ ಮತಾವಲಂಬಿಗಳು ತಪ್ಪದೇ ರುದ್ರಾಕ್ಷಮಾಲೆಯನ್ನು ಧರಿಸಬೇಲೇಬೇಕೆಂಬ ನಿಯಮವಿದೆ.

ಹಲವು ಮುಖ ಹಾಗೂ ಆಕಾರಗಳಲ್ಲಿ ರುದ್ರಾಕ್ಷಿ ಲಭ್ಯವಿದೆ.ಏಕಮುಖಿ ರುದ್ರಾಕ್ಷಿಯಲ್ಲಿ ಬಹಳ ಶಕ್ತಿಯಿರುತ್ತದೆಂದು ಹೇಳಲಾಗುತ್ತದೆ.ರುದ್ರಾಕ್ಷಿ ಚಿಕ್ಕದಿದ್ದಂತೆ ಅದರ ಶಕ್ತಿ ಉತ್ತರೋತ್ತರವಾಗಿ ವೃದ್ಧಿಯಾಗುತ್ತಿರುತ್ತದೆ.ದೊಡ್ಡ ರುದ್ರಾಕ್ಷಿಗಿಂತ ಚಿಕ್ಕ ರುದ್ರಾಕ್ಷಿಗೆ ಅಧಿಕಶಕ್ತಿಯಿರುತ್ತದೆ.ಆದರೂ ಎಲ್ಲ ರುದ್ರಾಕ್ಷಿಗಳಲ್ಲೂ ಶಿವಶಕ್ತಿ ಜಾಗೃತವಾಗಿರುತ್ತದೆ,ಸರ್ವಪಾಪಗಳನ್ನು ವಿನಾಶಮಾಡುವ ವಿಶೇಷ ಶಕ್ತಿಯಿರುತ್ತದೆ.ಸುಂದರವಾಗಿರುವ,ಅಖಂಡವಾಗಿರುವ ರುದ್ರಾಕ್ಷಿಯನ್ನು ಧರಿಸಬೇಕು.ತುಂಡಾಗಿರುವ,ಕೀಟದಿಂದ ಕಡಿಯಲ್ಪಟ್ಟಿರುವ,ಗಾಯಗಳಿಂದ ಕೂಡಿರುವ ರುದ್ರಾಕ್ಷಿಯನ್ನು ಧರಿಸಬಾರದು.

ರುದ್ರಾಕ್ಷಿ ಮಾಲೆಯನ್ನು ಧರಿಸುವುದರ ಹಿಂದೆ ಇವೆ ಹಲವು ವೈಜ್ಞಾನಿಕ ಕಾರಣಗಳು :-

ರುದ್ರಾಕ್ಷಿ ಮಾಲೆಯನ್ನು ಧರಿಸುವುದರಿಂದ ಕತ್ತಿನ ಭಾಗದಲ್ಲಿರುವ ನರಗಳು ದೃಢವಾಗಿರುತ್ತವೆ,ಇದು ಗಳಗಂಡ,ಕತ್ತುನೋವು ಮುಂತಾದ ರೋಗಗಳನ್ನು ತಡೆಯುತ್ತದೆ.ರುದ್ರಾಕ್ಷಿಗೆ ವಿಶೇಷವಾದ ಔಷಧೀಯ ಗುಣಗಳಿವೆ.ಸ್ನಾನವನ್ನು ಮಾಡುವಾಗ ರುದ್ರಾಕ್ಷಿಮಾಲೆಯ ನೀರು ಶರೀರದ ಮೇಲೆ ಬೀಳುವುದರಿಂದ ಅನೇಕ ಚರ್ಮರೋಗಗಳ ನಿಯಂತ್ರಣವಾಗುತ್ತದೆ. ಪ್ರಕೃತಿಯು ಮನುಷ್ಯನಿಗೆ ಕೊಟ್ಟ ಶ್ರೇಷ್ಟ ಉಡುಗೊರೆ ರುದ್ರಾಕ್ಷ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!!!

ನಮ್ಮ ಅನೇಕ ಧರ್ಮಗ್ರಂಥಗಳಲ್ಲಿ ರುದ್ರಾಕ್ಷದ ಶ್ರೇಷ್ಟತೆಯನ್ನು ಪ್ರಶಂಸಿಸಲಾಗಿದೆ.ರುದ್ರಾಕ್ಷಿಮಾಲೆಯನ್ನು ಹಾಕಿಕೊಂಡು ದೇವಪೂಜೆ ಮಾಡಿದರೆ ಹರಿದ್ವಾರ,ಕಾಶೀ,ಗಂಗೆ ಮುಂತಾದ ಪುಣ್ಯತೀರ್ಥಗಳಲ್ಲಿ ಪೂಜೆ ಮಾಡಿದ ಫಲ ಸಿಗುತ್ತದೆ.ರುದ್ರಾಕ್ಷಿ ಮಾಲೆಯನ್ನು ಧರಿಸಿ ಮಂತ್ರೋಚ್ಚಾರಣೆ,ಜಪ ಮಾಡಿದರೆ ಫಲಪ್ರಾಪ್ತಿ ದ್ವಿಗುಣವಾಗುತ್ತದೆ.ರುದ್ರಾಕ್ಷಿಮಾಲೆಯನ್ನು ಧರಿಸಿದವರ ಶರೀರದಲ್ಲಿ ಸಕಾರಾತ್ಮಕ ಶಕ್ತಿ ಜಾಗೃತವಾಗುತ್ತದೆ.ಮನಸ್ಸಿನ ನಿಯಂತ್ರಣ ರುದ್ರಾಕ್ಷಿಮಾಲೆಯಿಂದ ಸಾಧ್ಯ.ರುದ್ರಾಕ್ಷಿಮಾಲೆಯಲ್ಲಿ ನೂರಾಎಂಟು ಅಥವಾ ಐವತ್ತನಾಲ್ಕು ರುದ್ರಾಕ್ಷಿಗಳಿದ್ದರೆ ಪರಿಣಾಮಕಾರಿ.

ರುದ್ರಾಕ್ಷಿಮಾಲೆಯನ್ನು ಧರಿಸಿ ಭಗವಾನ್ ಶಿವನ ಪೂಜೆ,ಜಪಗಳನ್ನಾಚರಿಸಿದರೆ ಶುಭವಾಗುತ್ತದೆ.ಬೇರೆ ಬೇರೆ ಮುಖಗಳಿರುವ ರುದ್ರಾಕ್ಷಿಮಾಲೆಯನ್ನು ಧರಿಸುವುದರಿಂದ ವಿಭಿನ್ನ ಇಚ್ಚೆಗಳು ನೆರವೇರುತ್ತವೆ.ರುದ್ರಾಕ್ಷಿಯನ್ನು ಧರಿಸಿದವರಿಗೆ ಶಿವಲೋಕ ಸಿಗುತ್ತದೆಂದು ಪದ್ಮಪುರಾಣ,ಶಿವಪುರಾಣಗಳಲ್ಲಿ ತಿಳಿಸಲಾಗಿದೆ.

ರುದ್ರಾಕ್ಷವನ್ನು ಧರಿಸುವ ಬಗೆ :-

ಭದ್ರಾಕ್ಷವೆಂಬುದು ರುದ್ರಾಕ್ಷದ ಇನ್ನೊಂದು ಜಾತಿ..ರುದ್ರಾಕ್ಷದ ಮಧ್ಯದಲ್ಲಿ ಭದ್ರಾಕ್ಷವನ್ನು ಧರಿಸಿದರೆ ಒಳಿತಾಗುತ್ತದೆ. ರುದ್ರಾಕ್ಷವನ್ನು ಧರಿಸುವ ಮುನ್ನ ಅದು ಅಸಲಿಯೋ,ನಕಲಿಯೋ ಎಂದು ಪರೀಕ್ಷಿಸಬೇಕು.ನೇಪಾಳ ಭಾಗದಲ್ಲಿ ಸಿಗುವ ರುದ್ರಾಕ್ಷ ಸಾಮಾನ್ಯವಾಗಿ ಅಸಲಿಯಾಗಿರುತ್ತದೆ.ಅಲ್ಲಿನ ಪಶುಪತಿನಾಥ ದೇವಾಲಯದಲ್ಲಿ ಹಲವು ವಿಧದ ಅಸಲಿ ರುದ್ರಾಕ್ಷಿ ಮಾಲೆಗಳು ಸಿಗುತ್ತವೆ.ತುಂಡಾಗಿರುವ,ಕೀಟಗಳು ತಿಂದಿರುವ ರುದ್ರಾಕ್ಷವನ್ನು ಧರಿಸಬಾರದು.ಜಪಾದಿ ಕರ್ಮಗಳಲ್ಲಿ ಚಿಕ್ಕರುದ್ರಾಕ್ಷಿಯಿರುವ ಮಾಲೆಗಳನ್ನು ಬಳಸಬೇಕು.

ಈ ನಂಬರಿನ ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಿಗುವ ಫಲಗಳು :- 

  • 108 ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಮಸ್ತ ಕಾರ್ಯಗಳಲ್ಲೂ ಯಶಸ್ಸು,ವಂಶವನ್ನು ಉದ್ಧಾರಮಾಡುವ ಸಾಮರ್ಥ್ಯ ಸಿಗುತ್ತದೆ. ಈ ಮಾಲೆಯನ್ನು ಮನೋಕಾಮನೆಗಳು ಈಡೇರಲು ಹಾಗೂ ಜಪ ತಪಾದಿ ಕಾರ್ಯಗಳಲ್ಲಿ ಧರಿಸುತ್ತಾರೆ.
  • 140 ರುದ್ರಾಕ್ಷಿಗಳಿರುವ ಸರವನ್ನು ಧರಿಸುವುದರಿಂದ ಸಾಹಸ,ಪರಾಕ್ರಮ ಹಾಗೂ ಉತ್ತಮ ಆರೋಗ್ಯ ಪ್ರಾಪ್ತಿಯಾಗುತ್ತದೆ. ದೀರ್ಘಾಯುಷ್ಯವನ್ನು ಬಯಸುವವರು ಈ ಮಾಲೆಯನ್ನು ಧರಿಸುತ್ತಾರೆ.
  • ಮೋಕ್ಷವನ್ನು ಬಯಸುವವರು 100 ರುದ್ರಾಕ್ಷಿಗಳುಳ್ಳ ಮಾಲೆ ಧರಿಸುತ್ತಾರೆ.
  • 50 ರುದ್ರಾಕ್ಷಿಗಳುಳ್ಳ ಮಾಲೆಯನ್ನು ಕಂಠದಲ್ಲಿ ಧರಿಸುವುದರಿಂದ ಶುಭಪ್ರಾಪ್ತಿಯಾಗುತ್ತದೆ.
  • ಧನಧಾನ್ಯಗಳನ್ನು ಬಯಸುವವರು 62 ರುದ್ರಾಕ್ಷಿಗಳಿರುವ ಮಾಲೆ ಧರಿಸುತ್ತಾರೆ.
  • 32 ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸುವುದರಿಂದ ಧನಸಂಪತ್ತು ಹಾಗೂ ದೀರ್ಘಾಯುಷ್ಯ ಲಭಿಸುತ್ತದೆ.
  • 26 ರುದ್ರಾಕ್ಷಿಗಳಿರುವ ಮಾಲೆಯನ್ನು ತಲೆಯ ಮೇಲೆ ಧರಿಸುವುದರಿಂದ ಬುದ್ಧಿಶಕ್ತಿ ಹಾಗೂ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
  • 15 ರುದ್ರಾಕ್ಷಿಗಳುಳ್ಳ ಮಾಲೆಯನ್ನು ಮಂತ್ರಸಿದ್ಧಿ ಹಾಗೂ ತಂತ್ರಸಿದ್ಧಿಕಾರ್ಯಗಳಿಗೆ ಬಳಸಲಾಗುತ್ತದೆ.
  • 12 ರುದ್ರಾಕ್ಷಿಗಳುಳ್ಳ ಮಾಲೆಯನ್ನು ಮಣಿಕಟ್ಟಿನಲ್ಲಿ ಧರಿಸುವುದರಿಂದ ವಿಘ್ನಗಳ ಪರಿಹಾರವಾಗುತ್ತದೆ.

26 ರುದ್ರಾಕ್ಶಿಗಳಿರುವ ಮಾಲೆ ಶಿರದಲ್ಲಿ,

50 ರುದ್ರಾಕ್ಷಿಗಳಿರುವ ಮಾಲೆ ಎದೆಯಲ್ಲಿ,

16  ರುದ್ರಾಕ್ಷಿಗಳಿರುವ ಮಾಲೆ ಭುಜದಲ್ಲಿ,

12 ರುದ್ರಾಕ್ಷಿಗಳಿರುವ ಮಾಲೆಯನ್ನು ಮಣಿಕಟ್ಟಿನಲ್ಲಿ ಧರಿಸಬೇಕೆಂದು ಪುರಾಣಗಳು ತಿಳಿಸುತ್ತವೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಜ್ಯೋತಿಷ್ಯ

    ಶ್ರೀ ರಾಮನವಮಿಯ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…

  • ಸುದ್ದಿ

    ಭಾರತದ ಸೋಲಿನ ರಹಸ್ಯ ಬಯಲು…!

    ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಸೋಲು ಕಂಡಿದೆ. ವಿಶ್ವಕಪ್ ನಲ್ಲಿ ಸತತ ಗೆಲುವಿನೊಂದಿಗೆ ಮುನ್ನಡೆದಿದ್ದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದು, ಈ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಸೋತಿದೆ. ಸೋಲಿನ ಕಾರಣ ಕುರಿತಾಗಿ ಭಾರಿ ಚರ್ಚೆಗಳು ನಡೆದಿವೆ. ಹೀಗಿರುವಾಗ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಭಾರತದ ಸೋಲಿಗೆ ಜೆರ್ಸಿ ಕಾರಣ ಎಂದು ಹೇಳಿದ್ದಾರೆ. ಟೀಂ ಇಂಡಿಯಾ ಆಟಗಾರರು ಕೇಸರಿ ಜೆರ್ಸಿ ಧರಿಸಿ ಆಟವಾಡಿದ್ದು, ಸೋಲಿಗೆ…

  • ಕ್ರೀಡೆ

    ಕ್ರಿಕೆಟ್ ವಿಶ್ವಕಪ್’ನಲ್ಲಿ ರನ್ನರ್’ಅಪ್ ಆಗಿದ್ದ ಭಾರತ ತಂಡದ, ಕನ್ನಡದ ಈ ಮಹಿಳೆಯರಿಗೆ ಸಿಕ್ಕಿದ್ದೇನು ಗೊತ್ತಾ?

    ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.

  • ಆರೋಗ್ಯ

    ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

    ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…