News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

48

ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್‌ಸಿ / ಎಸ್‌ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019

ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

    ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
    ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…

  • ಮನರಂಜನೆ

    ಇಲ್ಲಿಂದ ಹೋದ ನಾಲ್ಕೇ ದಿನಕ್ಕೆ ನನ್ನ ಮದ್ವೆ ಮಾಡ್ತಾರೆ ಎಂದ, ಬಿಗ್ ಬಾಸ್ ಮನೆಯ ಭೂಮಿ ಶೆಟ್ಟಿ.

    ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್‍ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್‍ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್‍ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ  ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…

  • ರಾಜಕೀಯ

    ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

    ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

  • ಜ್ಯೋತಿಷ್ಯ

    ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

    ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…

  • ಸುದ್ದಿ

    ಯುವಕನ ಕಣ್ಣೀರು ನೋಡಿ ಕರಗಿದ ಕಳ್ಳರು, ಕಿತ್ತುಕೊಂಡ ಹಣ ಮತ್ತು ವಸ್ತುಗಳು ವಾಪಸ್.

    ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…