ಸುದ್ದಿ

SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

45

ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳ ಸಂಖ್ಯೆ – 306
ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳು
ತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಅಭ್ಯರ್ಥಿಗಳು ಐಟಿಐ ಡಿಪ್ಲೊಮಾ ಕೂಡ ಪಡೆದಿರಬೇಕಾಗುತ್ತದೆ. ಹಾಗೆಯೇ ಇದರೊಂದಿಗೆ ಐಐಟಿಗೆ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ. ಇನ್ನು ವಿಭಿನ್ನ ಹುದ್ದೆಗಳಿಗೆ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿದಾರರ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ 42 ವರ್ಷಗಳ ಒಳಗಿರಬೇಕು. ಗರಿಷ್ಠ ವಯಸ್ಸಿನಲ್ಲಿ, ಒಬಿಸಿಗೆ 3, ಎಸ್‌ಸಿ / ಎಸ್‌ಟಿ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ವೇತನ 19,900 ರೂ. ನೀಡಲಾಗುತ್ತದೆ. ಇದರೊಂದಿಗೆ ತಿಂಗಳ ಬೋನಸ್ ಕೂಡ ಸಿಗಲಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 12, 2019
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 11, 2019

ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಳನ್ನು Www.rrc-wr.com ಗೆ ಭೇಟಿ ನೀಡುವ ಮೂಲ ಪರಿಶೀಲಿಸಬಹುದು. ಹಾಗೆಯೇ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.

  • ಜ್ಯೋತಿಷ್ಯ

    ಶ್ರೀ ಮಂಜುನಾಥಸ್ವಾಮಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ.

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…