ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಆದರೀಗ ಉತ್ತರ ಪ್ರದೇಶದಲ್ಲಿ ಬಿನ್ನವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಾರಾಂಬರಿ ಜಿಲ್ಲೆಯಲ್ಲಿ ಮದುವೆಯೊಂದು ನಡೆದಿದ್ದು, ಇಲ್ಲಿದ್ದ ವರ 80ರ ಹರೆಯದವರು ಹಾಗೂ ವಧುವಿಗೆ 70 ವರ್ಷ.
ಆದರೆ ಈ ಮದುವೆ ಇಷ್ಟೊಂದು ಚರ್ಚೆಗೀಡಾಗಲು ಕಾರಣವಾಗಿದ್ದೇನೆಂದರೆ ವಧು- ವರರಿಬ್ಬರೂ ಪ್ರೇಮಿಗಳಾಗಿದ್ದು, ಕಳೆದ 50 ವರ್ಷಗಳಿಂದ ಜೊತೆಗಿದ್ದರು ಅಂದರೆ ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದರು.
ವರದಿಯನ್ವಯ ಬಾನುಪುರದಲ್ಲಿ ವಾಸವಿರುವ ಸುಕುಮಾರ್ ಹಾಗೂ ರಜ್’ಪತಾ ದೇವಿ ಇಬ್ಬರ ನಡುವೆ ಯುವ ಪ್ರಾಯದಲ್ಲೇ ಪ್ರೇಮಾಂಕುರವಾಗಿತ್ತು. ಆದರೆ ಆ ಸಮಯದಲ್ಲಿ ಸುಕುಮಾರ್ ತುಂಬಾ ಬಡವನಾಗಿದ್ದು, ರಜ್’ಪತಾಳೊಂದಿಗೆ ಮದುವೆಯಾಗುವಷ್ಟು ಹಣವೂ ಆತನ ಬಳಿ ಇರಲಿಲ್ಲ. ಹೀಗಾಗಿ ಇಬ್ಬರೂ ಮದುವೆಯಾಗದೆ ಜೊತೆಗಿರಲು ನಿರ್ಧರಿಸಿದ್ದಾರೆ. ಬಳಿಕ ದಿನಗೂಲಿ ಕೆಲಸ ಮಾಡಿ ಬಹಳ ಕಷ್ಟದಿಂದ ಜೀವನ ಸಾಗಿಸಿದ್ದಾರೆ. ಈ ವೇಳೆ ಇವರ ಕುಟುಂಬ ವೃದ್ಧಿಸಿದ್ದು, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಮಕ್ಕಳು ಕುಟುಂಬದ ಭಾಗವಾಗಿದ್ದಾರೆ.
ಬಿಡುವಿಲ್ಲದ ಜೀವನದಲ್ಲಿ ಇಬ್ಬರಿಗೂ ತಾವಿನ್ನೂ ಮದುವೆಯಾಗಿಲ್ಲ ಎಂಬ ವಿಚಾರವೇ ಮರೆತು ಹೋಗಿದೆ. ಇಂದು ಇವರ ಮಕ್ಕಳಿಗೂ ಮಕ್ಕಳಾಗಿವೆ, ಅಂದರೆ ಸುಕುಮಾರ್ ಹಾಗೂ ರಾಜ್’ಪತಾ ದೇವಿ ಇಬ್ಬರೂ ಅಜ್ಜ- ಅಜ್ಜಿ ಆಗಿದ್ದಾರೆ.
ತಮ್ಮ ಜೀವನದ ಬಗ್ಗೆ ಮಾತನಾಡಿರುವ ಸುಕುಮಾರ್ ‘ತನ್ನ ಹಾಗೂ ರಾಜ್’ಪತಾ ನಡುವಿನ ಸಂಬಂಧ ಅದೆಷ್ಟು ಗಟ್ಟಿಯಾಗಿದೆ ಎಂದರೆ ಯಾವತ್ತೂ ನಮ್ಮ ಜೀವನದ ಹಾಗೂ ಸಮಾಜದಲ್ಲೆದುರಾದ ಸಮಸ್ಯೆಗಳು ನೆನಪಿಲ್ಲ’ ಎಂದಿದ್ದಾರೆ.
ಕೆಲ ತಿಂಗಳ ಹಿಂದೆ ಇಬ್ಬರೂ ತಮ್ಮ ಪರಿವಾರದೊಂದಿಗೆ ಕುಳಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ರಾಜ್’ಪತಾ ‘ಈಗ ನಮ್ಮ ಕುಟುಂಬ ಪೂರ್ಣವಾಗಿದೆ, ಜೀವನದ ಅಂತಿಮ ಹಂತದಲ್ಲಿದ್ದೇವೆ ಹೀಗಿರುವಾಗ ನಾವ್ಯಾಕೆ ಮದುವೆಯಾಗಿ ನಮ್ಮ ಪ್ರೀತಿಯನ್ನು ಸಮಾಜದೆದುರು ತೆರೆದಿಡಬಾರದು ಎಂದು ತಮ್ಮ ಮನದ ಮಾತನ್ನು’ ತಿಳಿಸಿದ್ದಾರೆ.
ಇದನ್ನು ಆಲಿಸಿದ ಮಕ್ಕಳು ತಾಯಿಯ ಇಚ್ಛೆಯನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದಾರೆ. ಮಕ್ಕಳೆಲ್ಲಾ ಸೇರಿ ತಂದೆ ಸುಕುಮಾರ್’ನನ್ನು ಜೀವನದ ಈ ಹಂತದಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಸಿ, ಅದ್ಧೂರಿಯಾಗಿ ತಂದೆ ತಾಯಿಗೆ ಮದುವೆ ಮಾಡಿಸಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರೂ ಪಾಲ್ಗೊಂಡಿದ್ದರು.
ಇನ್ನು ಇವರಿಬ್ಬರ ಕುರಿತಾಗಿ ಮಾತನಾಡಿದ ಗ್ರಾಮಸ್ಥರು ‘ಇಬ್ಬರೂ ನಿಜವಾದ ಪ್ರೇಮಿಗಳು. ಇವರು ಜೀವನ ನಡೆಸಿದ ರೀತಿ ನೋಡಿದರೆ ಇವರಿಬ್ಬರಿಗೆ ಮದುವೆಯಾಗಿಲ್ಲ ಎಂಬುವುದು ಗೊತ್ತೇ ಆಗುತ್ತಿರಲಿಲ್ಲ. ನಿಜಕ್ಕೂ ಇವರ ಪ್ರೀತಿ ಎಲ್ಲಾ ಪ್ರೇಮಿಗಳಿಗೆ ಆದರ್ಶವಾಗಿದೆ’ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!