ಉಪಯುಕ್ತ ಮಾಹಿತಿ

ಲೈಫಲ್ಲಿ ಹೇಗೆ ಗೆಲ್ಲಬೇಕು ಅನ್ನೋರು..! ಮಿಸ್ ಮಾಡದೇ ಈ ಲೇಖನ ಓದಿ…

1429

ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

    ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​…