ಉಪಯುಕ್ತ ಮಾಹಿತಿ

ಲೈಫಲ್ಲಿ ಹೇಗೆ ಗೆಲ್ಲಬೇಕು ಅನ್ನೋರು..! ಮಿಸ್ ಮಾಡದೇ ಈ ಲೇಖನ ಓದಿ…

1437

ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…

  • ಸುದ್ದಿ

    ಇಡೀ ಇಂಡಿಯಾ ಗಮನ ಸೆಳೆದಿದ್ದ ಮಂಡ್ಯ ಚುನಾವಣೆಯಲ್ಲಿ ಸುಮಲತಾ ಮತ್ತು ನಿಖಿಲ್ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ..?

    ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…

  • ದೇವರು-ಧರ್ಮ

    ಸಂತಾನ ಭಾಗ್ಯ,ಸರ್ಪ ದೋಷ ಇನ್ನೂ ಹತ್ತು ಹಲವು ದೋಷಗಳು ನಿವಾರಣೆಯಾಗುವ ಜಗತ್ತಿನ ಏಕೈಕ ಗರುಡ ದೇವಾಲಯ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಎಲ್ಲರಿಗೂ ದರ್ಶನ ಭಾಗ್ಯ ಸಿಗಲಿ..

    ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…

  • ಸುದ್ದಿ

    ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದ ರಾಕಿಂಗ್ ಸ್ಟಾರ್ ಯಶ್,.!

    ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ  ಫಾಲೋ ವರ್ಸ್ ತುಂಬಾನೇ ಜಾಸ್ತಿ  ಈಗ ಅವರಿಗೆ  ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…

  • ಸುದ್ದಿ

    ಬ್ರಹ್ಮಾವರದಲ್ಲಿ ಮಹಾಮಳೆಯ ಅಬ್ಬರ : ಜನಜೀವನ ಅಸ್ತವ್ಯಸ್ತ…..!

    ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….