ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ….
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.