News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

60

ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.

ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,

ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್‍ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • inspirational

    ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು

    ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…