ಸುದ್ದಿ

ವರದಕ್ಷಿಣೆ ಬೇಡವೆಂದ ಹೇಳಿದ ವರನಿಗೆ ಸಿಕ್ಕಿತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ…!

102

ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ ನಿರಾಕರಿಸಿ ಎಲ್ಲರಿಗೂ ಮಾದರಿಯಾದ ವರನಿಗೆ ಈ ಉಡುಗೊರೆ ನೋಡಿ ಸಿಕ್ಕಪಟ್ಟೆ ಖುಷಿಯಾಗಿದೆ. ಈ ವಿಶೇಷ ಉಡುಗೊರೆ ವಿಚಾರ ಸದ್ಯ ಎಲ್ಲೆಡೆ ಬಾರಿ ಸದ್ದು ಮಾಡುತ್ತಿದೆ.

ನಾನು ಯಾವುದೇ ವರದಕ್ಷಿಣೆ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆ. ಆದರೆ ನಾನು ಕಲ್ಯಾಣ ಮಂಟಪಕ್ಕೆ ಬಂದಾಗ, ಪುಸ್ತಕಗಳ ಬೃಹತ್ ರಾಶಿಯನ್ನು ಉಡುಗೊರೆಯಾಗಿ ಕಂಡು ತುಂಬಾ ಆಶ್ಚರ್ಯವಾಯಿತು ಎಂದು ಬರಿಕ್ ಹೇಳಿದ್ದಾರೆ. ಹಾಗೆಯೇ ನನ್ನ ಪತಿಗೆ ಓದುವ ಹಂಬಲ ಹೆಚ್ಚು. ನನಗೂ ಓದುವ ಹವ್ಯಾಸವಿದೆ. ಇದನ್ನು ತಿಳಿದ ನನ್ನ ತಂದೆ ಈ ಗಿಫ್ಟ್ ಕೊಟ್ಟಿದ್ದಾರೆ ಎಂದು ವಧು ತಿಳಿಸಿದ್ದಾರೆ.

ಈ ಬಗ್ಗೆ ವಧುವಿನ ಕುಟುಂಬದವರು ಮಾತನಾಡಿ, ಈ ಪುಸ್ತಕಗಳನ್ನು ಕೊಲ್ಕತ್ತಾ ಕಾಲೇಜು ರಸ್ತೆ, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಪ್ರಕಾಶನವಾದ ಉದ್ಧೋಧನ್ ಪಬ್ಲಿಷ್ ಹೌಸ್‍ನಿಂದ ಖರೀದಿಸಿದ್ದೇವೆ. ಈ ಪುಸ್ತಕ ಸಂಗ್ರಹಣೆಯಲ್ಲಿ ರವೀಂದ್ರನಾಥ ಟ್ಯಾಗೋರ್, ಬಂಕಿಮ ಚಂದ್ರ ಚಟ್ಟೋಪಾಧ್ಯಾಯ, ಮತ್ತು ಶರತ್ ಚಂದ್ರ ಚಟ್ಟೋಪಾಧ್ಯಾಯವರ ಸಂಪೂರ್ಣ ಕೃತಿಗಳು ಇವೆ ಎಂದರು.

ವರದಕ್ಷಿಣೆ ಪಡೆಯುವುದು ಹಾಗೂ ಕೊಡುವುದು ಅಪರಾಧ ಎಂದು ತಿಳಿದಿದ್ದರೂ ಅನೇಕರು ವರದಕ್ಷಿಣೆಯಿಲ್ಲದೆ ಮದುವೆ ಆಗುವುದಿಲ್ಲ. ಇಂತಹ ಜನರ ನಡುವೆಯೂ ಸೂರ್ಯಕಾಂತ್ ಅವರ ತರಹ ವರದಕ್ಷಿಣೆ ನಿರಾಕರಿಸುವವರ ಸಂಖ್ಯೆ ಕಡಿಮೆ. ಸೂರ್ಯಕಾಂತ್ ಅವರು ಇತರರಿಗೆ ಮಾದರಿ ಎಂದು ಎಲ್ಲೆಡೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    “ಭಾರತವೇ ಕ್ರಿಕೆಟ್ನಲ್ಲಿ” ಗೆಲ್ಲಲಿ ಎಂದು ಪ್ರಾರ್ಥಿಸುವ ‘ಪಾಕಿಸ್ತಾನಿ ಕ್ರಿಕೆಟ್’ ಅಭಿಮಾನಿ !!! ನೀವು ನಂಬಲೇಬೇಕು?

    ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…

  • ಸೌಂದರ್ಯ

    ‘ಮೊಡವೆ’ ಸಮಸ್ಯೆಗೆ ಇಲ್ಲಿದೆ ಮನೆಮದ್ದು…!

    ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….

  • ಸುದ್ದಿ, ಸ್ಪೂರ್ತಿ

    ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ 19ರ ಯುವಕ ಟ್ರಂಪ್ ಆಹ್ವಾನಿಸಿದರೂ ಅಮೆರಿಕಕ್ಕೆ ತೆರಳಲಿಲ್ಲ, ಭಾರತದಲ್ಲೇ ರಿಸರ್ಚ್ ಮಾಡ್ತೇನೆ ಎಂದ ಗೋಪಾಲ್.

    ಬಿಹಾರದ ಬಾಗಲ್‍ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….