ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ. ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ. ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು,…
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.