ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.