ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…
ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು ಖಂಡಿತ. ಓದಿ ನೋಡಿ. ಎಷ್ಟು ನೀರು ಕುಡಿದ್ರೂ ಇನ್ನೂ ಕುಡೀತಾನೇ ಇರ್ಬೇಕು ಅನ್ಸುತ್ತೆ :- ನಿಂತು ನೀರು ಕುಡಿದ್ರೆ ಬಾಯಾರಿಕೆ ಹೋಗೋದಿಲ್ಲ. ಆಗಾಗ ನೀರು ಕುಡೀತಾನೇ ಇರ್ಬೇಕು ಅನ್ಸುತ್ತೆ. ಎಷ್ಟು ಕುಡಿದ್ರೂ ಉಪಯೋಗ ಇಲ್ಲ. ಅಜೀರ್ಣ ಆಗುತ್ತೆ :- ಕೂತು ನೀರು ಕುಡೀವಾಗ ನಿಮ್ ದೇಹ ರಿಲ್ಯಾಕ್ಸ್ ಆಗಿರುತ್ತೆ, ಆಗ ತಿಂದಿದ್ದು, ಕುಡ್ದಿದ್ದು ಸುಲಭವಾಗಿ ಜೀರ್ಣ ಆಗುತ್ತೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…