ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.

ಮಾರುಕಟ್ಟೆಯಲ್ಲಿ ಹೆಚ್ಚಿನದಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಸಿಗುವಂತವು ಸೊಳ್ಳೆ ಬ್ಯಾಟ್, ಗುಡ್ ನೈಟ್, ಮುಂತಾದವುಗಳು. ಆದರೆ ಇಲ್ಲೊಂದು ವಿಶೇಷವಾದ ಪರಿಹಾರವನ್ನು ಹುಡುಕಿದ್ದಾರೆ ಈ ವಿದ್ಯಾರ್ಥಿಗಳು.

ಉಡುಪಿ ಜಿಲ್ಲೆಯ ಮಣಿಪಾಲ್ ವಿಶ್ವವಿದ್ಯಾಲಯದ ಮಾನ್ಯತೆ ಪಡೆದ ಕಾಲೇಜೊಂದರ ವಿದ್ಯಾರ್ಥಿಗಳು ಈ ಒಂದು ಹೊಸ ವಿಧಾನವನ್ನು ಕಂಡು ಹಿಡಿದಿದ್ದಾರೆ. ಸೊಳ್ಳೆಗಳನ್ನು ನಿಯಂತ್ರಿಸುವುದಕ್ಕೆ ಸ್ವೀಟ್ ಕೇಕ್ ಕಂಡು ಹಿಡಿದಿದ್ದಾರೆ.

ಕೋಳಿ ಪುಕ್ಕಗಳಿಂದ ತಯಾರಿಸಿದ್ದಾರೆ. ವೈಜ್ಞಾನಿಕ ಪದ್ಧತಿಗಳ ಮೂಲಕ ಪುಕ್ಕಗಳನ್ನು ರಾಸಾಯನಿಕಗಳೊಂದಿಗೆ ಬೆರೆಸಿ ಅದನ್ನು ಕೇಕ್ ಆಗಿ ತಯಾರಿಸಿದ್ದಾರೆ. ಅಷ್ಟೇ ಅಲ್ಲದೆ ಈ ಕೇಕ್ ನಿಂದ ಸೊಳ್ಳೆಗಳ ಲಾರ್ವಾ ಬೆಳೆಯದಂತೆ ನಿಯಂತ್ರಿಸುತ್ತದಂತೆ. ಹಾಗು ನೊಣಗಳು ಸುಳಿಯದಂತೆ ಕೆಲಸ ಮಾಡುತ್ತದೆ.

ಸೊಳ್ಳೆಗಳು ಹಾಗು ನೊಣಗಳು ಹೆಚ್ಚಾಗಿ ಇರುವಂತ ಸ್ಥಳದಲ್ಲಿ ಈ ಕೇಕ್ ಅನ್ನು ಇಡಬೇಕು. ಇದರಿಂದ ಬೇರೆ ರೀತಿಯ ಕೀಟಗಳಿಗೆ ಹನಿ ಹಾಗುವುದಿಲ್ಲ. ನಿಜಕ್ಕೂ ಇಂತಹ ಒಂದು ಹೊಸ ವಿಧಾನವನ್ನು ಕಂಡು ಹಿಡಿದ ಆ ವಿದ್ಯಾರ್ಥಿಗಳಿಗೆ ನಮ್ಮ ಕಡೆಯಿಂದ ಶುಭಾಶಯ ತಿಳಿಸುತ್ತೇವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್ ಸ್ಪರ್ಧಿಗಳಲ್ಲಿ ಭೂಮಿ ಶೆಟ್ಟಿ ಸಹ ಒಬ್ಬರು. ಕೊನೆಯ ವಾರ ಆಗಿದ್ದರಿಂದ ಬಿಗ್ಬಾಸ್ ಸ್ಪರ್ಧಿಗಳಿಗೆ ಹೆಚ್ಚು ಟಾಸ್ಕ್ ಗಳು ಸಿಗುತ್ತಿಲ್ಲ. ಬದಲಾಗಿ ಹಳೆಯ ಸ್ಪರ್ಧಿಗಳನ್ನು ಮನೆಗೆ ಕರೆ ತರುವ ಮೂಲಕ ಫೈನಿಲಿಸ್ಟ್ ಗಳಿಗೆ ಸರ್ಪ್ರೈಸ್ ನೀಡಲಾಗುತ್ತಿದೆ. ಗೆಸ್ಟ್ ಬಂದು ಹೋದ ನಂತರ ಸ್ಪರ್ಧಿಗಳು…
ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….