ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಎರಡನೂರಕ್ಕೂ ಹೆಚ್ಚು ಎಪಿಸೋಡ್ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.

ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.

2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.

ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.

ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.

ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್ ಸೂಪರ್ಸ್ನ ಫೇಸ್ ಬುಕ್ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್ಗಳ ಸುರಿಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಬಿಹಾರದ ಮುಜಾಫರ್ಪುರದಲ್ಲಿ ಕಂಡುಬಂದ ವಿಚಿತ್ರ ಕಾಯಿಲೆಯಿಂದಾಗಿ ಮೃತರಾದ ಮಕ್ಕಳ ಸಂಖ್ಯೆ 165 ಕ್ಕೇರಿದ್ದು, ಮಕ್ಕಳ ಸಾವಿಗೆ ಮೆದುಳಿನ ಉರಿಯೂತವೇ ಕಾರಣ ಎನ್ನಲಾಗಿದೆ. ಮೆದುಳಿನ ಉರಿಯೂತ ಅಂದರೆ Acute Encephalitis Syndrome ಸಮಸ್ಯೆಯಿಂದ ಮಕ್ಕಳು ಮೃತರಾಗುತ್ತಿದ್ದಾರೆ ಎನ್ನಲಾಗುತ್ತಿದ್ದು, ಈಗಾಗಲೇ ಇಲ್ಲಿನ ಕೃಷ್ಣ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ(ಎಸ್ ಕೆ ಎಂಸಿಎಚ್) ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಮತ್ತು ಸೂಕ್ತ ಚಿಕಿತ್ಸೆ ನೀಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ಆದೇಶಿಸಿದ್ದಾರೆ. ಈಗಾಗಲೇ ಈ ಕಾಯಿಲೆಗೆ ಲಿಚಿ ಹಣ್ಣೂ ಕಾರಣ ಎನ್ನಲಾಗುತ್ತಿದ್ದು, ಬಿಹಾರ ಸರ್ಕಾರವು…
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.