ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………

ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….
ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…

ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……
ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……
ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………
ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..

ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……
ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.
ಹೀಗೆ ಸಾಗುತ್ತಲೇ ಇದೆ ಬದುಕು……
ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…