ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………

ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….
ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…

ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……
ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……
ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………
ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..

ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……
ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.
ಹೀಗೆ ಸಾಗುತ್ತಲೇ ಇದೆ ಬದುಕು……
ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…