ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………

ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….
ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…

ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……
ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……
ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………
ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..

ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……
ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.
ಹೀಗೆ ಸಾಗುತ್ತಲೇ ಇದೆ ಬದುಕು……
ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…