inspirational

ವಿಶ್ವಾಸ ಮತ್ತು ಭರವಸೆ ಇದೆ ಜೀವನದಲ್ಲಿ

183

ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….

ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………

ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….

ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…

ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……

ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……

ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………

ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..

ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……

ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.

ಹೀಗೆ ಸಾಗುತ್ತಲೇ ಇದೆ ಬದುಕು……

ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಅಂದು ಈ ಯುವಕನ ಭಾಷಣದಿಂದ,ಪ್ರಧಾನಿ ಮೋದಿ ಮತ್ತು ಗುಜರಾತ್ ಸರ್ಕಾರವೇ ಶೇಕ್ ಆಗಿತ್ತು..!

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

  • ಸುದ್ದಿ

    D K ಶಿವಕುಮಾರ್ ಕಾಕಿ ವಶಕ್ಕೆ:ಇತಿಹಾಸದಲ್ಲಿ ಇಂದು ಕಪ್ಪು ದಿನ….!

    ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…

  • ಸಿನಿಮಾ

    ಇಲ್ಲಿದೆ ನೋಡಿ ಯಶ್ ರಾಧಿಕಾ ಪಂಡಿತ್ ರವರ ಮುದ್ದು ಮಗಳ ಫೋಟೋ…

    ನಟ ರಾಕಿಂಗ್ ಸ್ಟಾರ್ ಯಶ್ ರವರಿಗೆ ಅವರು ಅಂದುಕೊಂಡಂತೆ ಪತ್ನಿ ರಾಧಿಕಾ ಪಂಡಿತ್ ರವರಿಗೆ ಮುದ್ದಾದ ಹೆಣ್ಣು ಮಗು ಜನಿಸಿದೆ.ತಮ್ಮ ಮುದ್ದಿನ ಮಗಳು ಕೈ ಬೆರಳನ್ನು ಬಿಗಿದಪ್ಪಿದ್ದ ವೇಳೆ ಪುಳಗೊಂಡಿರುವ ನಟ ಯಶ್, ತಮ್ಮ ಮನದಾಳದ ಮಾತನ್ನು ಬಿಚ್ಚಿಟ್ಟಿದ್ದಾರೆ. ತಮ್ಮ ಆಸೆಯಂತೆ ಹೆಣ್ಣು ಮಗುವಿಗೆ ತಂದೆಯಾದ ಯಶ್ ಮಗಳ ಬಗ್ಗೆ, “ನನ್ನ ಬೆರಳುಗಳನ್ನು ಬಿಗಿಹಿಡಿದು ತಂದೆತನದೆಡೆಗೆ ದಾರಿ ತೋರಿಸಿದ ನನ್ನ ದೇವತೆಯ ಪುಟ್ಟಹಸ್ತ! ಯಾರನ್ನಾದರೂ ಕನಿಷ್ಠ ನೋಡದೆಯೇ ಪ್ರೀತಿಸುವುದು ಒಂದು ಅದ್ಭುತ ಭಾವ. ಇನ್ನು ಅವಳನ್ನು ಕಣ್ತುಂಬಿಕೊಂಡ…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…