ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಕಾನೂನಿನ ಮೇಲೆ ಭರವಸೆ ಇತ್ತು.ಕ್ರಿಮಿನಲ್ ಗಳಿಗೆ ಶಿಕ್ಷೆಯಾಗುತ್ತದೆ. ಅಮಾಯಕರಿಗೆ ರಕ್ಷಣೆ ದೊರೆಯುತ್ತದೆ. ಹೇಗೋ ನೆಮ್ಮದಿಯಿಂದ ಬದುಕಬಹುದು ಎಂದು.
ಅದೂ ಕೈಗೂಡಲಿಲ್ಲ. ಕಾನೂನು ಬಲಿಷ್ಠರ ಪಾಲಾಯಿತು. ಅಲ್ಲೂ ನಿರಾಸೆಯಾಯಿತು………
ದೇವರು ಕಾನೂನು ವಿಫಲರಾದರೂ, ಮನುಷ್ಯನ ನೈತಿಕತೆ – ನಾಗರಿಕ ಪ್ರಜ್ಞೆಯಾದರೂ ಒಳ್ಳೆಯದು ಕೆಟ್ಟದ್ದನ್ನು ಗುರುತಿಸಿ ನಮಗೆ ನ್ಯಾಯ ನೀಡುತ್ತದೆ. ನಮ್ಮ ನಡುವೆ ಶಿಕ್ಷಕರು ವೈದ್ಯರು ನ್ಯಾಯಾಧೀಶರು ವಿಜ್ಞಾನಿಗಳು ತಂತ್ರಜ್ಞರು ಸ್ವಾಮಿಗಳು ಸಮಾಜ ಸೇವಕರು ಪೋಲೀಸರು ರಾಜಕಾರಣಿಗಳು ಇದ್ದಾರೆ. ಅವರಾದರೂ ಸಮಾಜದಲ್ಲಿ ನಮ್ಮ ನಡುವಿನ ಕ್ರೂರಿಗಳು – ಕರುಣಾಮಯಿಗಳ ವ್ಯತ್ಯಾಸ ಗುರುತಿಸಿ ಅದಕ್ಕೆ ತಕ್ಕಂತೆ ವರ್ತಿಸುತ್ತಾರೆ ಎಂಬ ನಂಬಿಕೆ ಇತ್ತು.
ಕೊನೆಗೆ ಅವರೂ ಕೈಬಿಟ್ಟರು……….
ನನ್ನ ಬಂಧು, ನನ್ನ ಜಾತಿಯವ, ನನ್ನ ಸ್ನೇಹಿತ, ನನ್ನ ಭಾಷೆಯವ, ನನ್ನ ಶಿಷ್ಯ, ನನ್ನ ಗುರು, ನನ್ನ ಸಂಘದವ, ನನ್ನ ಊರಿನವ, ನನ್ನ ಗ್ರಾಹಕ ಇವರೆಲ್ಲರ ಪರವಾಗಿ ನ್ಯಾಯದ ತಕ್ಕಡಿಯನ್ನು ತಮ್ಮ ಸ್ವಾರ್ಥಕ್ಕೆ ಬಗ್ಗಿಸಿಕೊಂಡ ಸಮಾಜ ನಮ್ಮದು…
ಮನಸ್ಸುಗಳೇ ಭ್ರಷ್ಟಗೊಂಡಿರುವಾಗ ನಾವು ನಂಬುವುದಾದರೂ ಯಾರನ್ನು. ಒಳ್ಳೆಯವರನ್ನು ಕೆಟ್ಟವರನ್ನು ಒಂದೇ ತಕ್ಕಡಿಯಲ್ಲಿ ಇಟ್ಟು ತಮ್ಮ ಅನುಕೂಲಕ್ಕೆ ತಕ್ಕಂತೆ ಅಳತೆ ಮಾಡಿದರೆ ವ್ಯವಸ್ಥೆಯ ಮೇಲೆ ನಂಬಿಕೆ ಬರುವುದಾದರೂ ಹೇಗೆ……
ಆತ್ಮವಂಚಕರ ಏಳು ಸುತ್ತಿನ ಕೋಟೆಯೊಳಗೆ ಸಿಲುಕಿರುವ ಮಕ್ಕಳು ಯುವಕರನ್ನು ಕಾಪಾಡುವುದು ಹೇಗೆ……
ಅವನೊಬ್ಬ ದೊಡ್ಡ ಸಾಹಿತಿ,
ಅಕ್ಷರದಲ್ಲಿಯೇ ಆದರ್ಶ ಹೇಳುತ್ತಾನೆ. ಮಾಡುವುದು ಮಾತ್ರ ಹೊಲಸು ಕೆಲಸಗಳು………
ಅವನೊಬ್ಬ ರಾಜಕಾರಣಿ,
ಮಾತಿನಲ್ಲೇ ಅರಮನೆ ಕಟ್ಟುತ್ತಾನೆ, ವಾಸ್ತವವಾಗಿ ಬಾಯಿ ಬಿಟ್ಟರೆ ಬಣ್ಣ ಗೇಡು…..
ಅವನೊಬ್ಬ ಧರ್ಮಾಧಿಕಾರಿ,
ನ್ಯಾಯ ನೀತಿಯ ಬಗ್ಗೆ ಪುಂಖಾನುಪುಂಖವಾಗಿ ಬೋಧಿಸುತ್ತಾನೆ. ಆದರೆ ನಿಜ ಬದುಕಿನಲ್ಲಿ ಮಹಾ ದುಷ್ಟ……
ಪ್ರೀತಿಯನ್ನೇ ಗುರುತಿಸಲಾಗದ,
ದ್ವೇಷವನ್ನೇ ಒಪ್ಪಿಕೊಳ್ಳುವ ಹಂತಕ್ಕೆ ನಮ್ಮ ಅಕ್ಷರಸ್ಥ ಬುದ್ದಿವಂತರು ತಲುಪಿದ್ದಾರೆ.
ಹೀಗೆ ಸಾಗುತ್ತಲೇ ಇದೆ ಬದುಕು……
ಮಾತು ಅಕ್ಷರ ಜ್ಞಾನ ಪ್ರೀತಿ ವಿಶ್ವಾಸ ಕರುಣೆ ಮಾನವೀಯತೆ ನಿಮ್ಮ ವ್ಯಕ್ತಿತ್ವದ ಭಾಗವಾಗುವವರೆಗೂ ಭಾರತೀಯ ಸಮಾಜ ಪ್ರತಿದಿನ ಅಪಾಯದ ಅಂಚಿಗೆ ಸರಿಯುತ್ತಿರುತ್ತದೆ.
ನನ್ನಂತವರ ಬರಹಕ್ಕೆ ವಿಷಯವಾಗುತ್ತಲೇ ಇರುತ್ತದೆ.
ಮುಖವಾಡ ಕಳಚುವವರೆಗೂ……..
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಹೆಚ್.ಕೆ.
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….