ವಿಚಿತ್ರ ಆದರೂ ಸತ್ಯ

ವೈದ್ಯಕೀಯ ಪವಾಡದಿಂದ ವರ್ಷದಲ್ಲಿ ‘ಎರಡು ಬಾರಿ ಹುಟ್ಟುಹಬ್ಬ’ ಆಚರಿಸುತ್ತಿರುವ ಮಗು..!ತಿಳಿಯಲು ಈ ಲೇಖನ ಓದಿ..

143

ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

ಅಮೆರಿಕದ ಹ್ಯೂಸ್ಟನ್ನಲ್ಲಿರುವ ಮಕ್ಕಳ ಆಸ್ಪತ್ರೆಯ ಸರ್ಜನ್ಗಳಾದ ಡ್ಯಾರೆಲ್ ಕಾಸ್ ಮತ್ತು ಒಲುಯಿಂಕ್ ಒಲ್ಟೊಯಿ ಅವರು ಕಳೆದ ವರ್ಷ ಸೋನೊಗ್ರಾಮ್ ಪರೀಕ್ಷೆಯಲ್ಲಿ ಆಗ ಕೇವಲ 23 ವಾರ ಪ್ರಾಯವಾಗಿದ್ದ ಲಿನ್ಲೀ ಹೋಪ್ಳ ಮಿದುಳು ಬಳ್ಳಿಯ ಬುಡದಲ್ಲಿ ಭಾರೀ ಗಡ್ಡೆಯೊಂದು ಬೆಳೆದಿರುವುದು ಪತ್ತೆಯಾದ ಬಳಿಕ ಆ ಶಿಶುವನ್ನು ತಾಯಿ ಮಾರ್ಗರೆಟ್ ಬೋಮರ್(38)ಳ ಗರ್ಭಕೋಶದಿಂದ ಹೊರಕ್ಕೆ ತೆಗೆದಿದ್ದರು. ಆಗ ಮೊದಲ ಬಾರಿಗೆ ಶಿಶು ಈ ಧರೆಗಿಳಿದಿತ್ತು.

ಅದು(ಗಡ್ಡೆ) ಹೆಚ್ಚುಕಡಿಮೆ ಇನ್ನೊಂದು ತಲೆಯಂತೆ ಕಾಣುತ್ತಿತ್ತು ಎಂದು ಮಾರ್ಗರೆಟ್ ನೆನಪಿಸಿಕೊಂಡಿದ್ದಾಳೆ.ಗರ್ಭಕೋಶದಲ್ಲಿನ ಶಿಶುವಿನ ಮಿದುಳು ಬಳ್ಳಿಯಲ್ಲಿದ್ದ ಗಡ್ಡೆ ಇನ್ನೂ ಬೆಳೆಯುತ್ತಲೇ ಇತ್ತು. ಗಡ್ಡೆಯ ಬೃಹತ್ ಗಾತ್ರದಿಂದಾಗಿ ಈ ಶಿಶು ಬದುಕುಳಿಯುವುದಿಲ್ಲ ಎಂದು ವೈದ್ಯರು ಮಾರ್ಗರೆಟ್ಗೆ ತಿಳಿಸಿದ್ದರು.

 

ಸ್ಯಾಕ್ರೋಕೊಸಿಜೀಲ್ ಟೆರಾಟೋಮಾ ಎಂದು ವೈದ್ಯಕೀಯ ಭಾಷೆಯಲ್ಲಿ ಹಣೆಪಟ್ಟಿ ಅಂಟಿಸಿಕೊಂಡಿದ್ದ ಈ ಟ್ಯೂಮರ್ ಭ್ರೂಣದಿಂದ ರಕ್ತವನ್ನು ಸೆಳೆಯುತ್ತಿತ್ತು ಮತ್ತು ಇದರಿಂದಾಗಿ ಹೃದಯಾಘಾತದ ಅಪಾಯ ಹೆಚ್ಚಾಗಿತ್ತು.

ಅದು ಎಂತಹ ಬಿಕ್ಕಟ್ಟನ್ನು ಸೃಷ್ಟಿಸಿತ್ತೆಂದರೆ ವೈದ್ಯರು ಕಾಯುವಂತಿರಲಿಲ್ಲ, ಶಿಶು ಬದುಕುಳಿಯಬೇಕೆಂದರೆ ಅವರು ತಕ್ಷಣವೇ ಶಸ್ತ್ರಚಿಕಿತ್ಸೆಯನ್ನು ನಡೆಸಲೇಬೇಕಾಗಿತ್ತು.

ವೈದ್ಯರ ತಂಡ ಶಿಶುವನ್ನು ತಾಯಿಯ ಗರ್ಭಕೋಶದಿಂದ ಹೊರಗೆ ತೆಗೆದಿದ್ದರು. ಐದು ಗಂಟೆಗಳ ಸುದೀರ್ಘ ಅವಧಿಯ ಶಸ್ತ್ರಚಿಕಿತೆಯನ್ನು ನಡೆಸುತ್ತಿದ್ದಾಗ ಮಗುವಿನ ಸಾವು-ಬದುಕಿನ ಸಾಧ್ಯತೆ 50:50ರಷ್ಟಿತ್ತು.

ಪೂರ್ತಿ 20 ನಿಮಿಷಗಳ ಕಾಲ ಶಿಶು ತಾಯಿಯ ಶರೀರದಿಂದ ಹೊರಗಿತ್ತು ಮತ್ತು ಟ್ಯೂಮರ್ನ್ನು ಬೇರ್ಪಡಿಸಿದಾಗ ಅದರ ತೂಕ ಕೇವಲ ಒಂದು ಪೌಂಡ್ ಮೂರು ಔನ್ಸ್ ಅಂದರೆ 538.64 ಗ್ರಾಮ್ಗಳಷ್ಟಿತ್ತು. ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಭ್ರೂಣವನ್ನು ಅತ್ಯಂತ ಎಚ್ಚರಿಕೆಯಿಂದ ತಾಯಿಯ ಗರ್ಭಾಶಯದಲ್ಲಿ ಮರು ಸ್ಥಾಪಿಸಲಾಗಿತ್ತು.

ಮೂರು ತಿಂಗಳುಗಳ ಬಳಿಕ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಲಿನ್ಲೀ ಎರಡನೇ ಬಾರಿ, ಅಂದರೆ ಈ ಬಾರಿ ಅಧಿಕೃತವಾಗಿ ಜನಿಸಿದಾಗ ಐದು ಪೌಂಡ್ ಐದು ಔನ್ಸ್(2.410 ಕೆ.ಜಿ) ತೂಗುತ್ತಿದ್ದಳು.

ಈಗ ಒಂದು ವರ್ಷ ಪ್ರಾಯವಾಗಿರುವ ಲಿನ್ಲೀ ಯಾವುದೇ ಆರೋಗ್ಯ ಸಮಸ್ಯೆಯಲ್ಲದೆ ಸೊಂಪಾಗಿ ಬೆಳೆಯುತ್ತಿದ್ದಾಳೆ. ತನ್ನ ಮಗು ಎಷ್ಟೊಂದು ಜಾಣೆಯಾಗಿದ್ದಾಳೆ ಎಂದು ತಾಯಿ ಮಾರ್ಗರೆಟ್ಗೆ ಹೆಮ್ಮೆಯೋ ಹೆಮ್ಮೆ.

ಅವಳು ನಡೆಯುವುದನ್ನು ಮತ್ತು ಓಡುವುದನ್ನು ಇಷ್ಟಪಡುತ್ತಾಳೆ. ಇದೊಂದು ದೊಡ್ಡ ಪವಾಡವಾಗಿದೆ. ಅವಳು ನಮ್ಮ ಪಾಲಿಗೆ ಅದ್ಭುತ ಆನಂದವಾಗಿದ್ದಾಳೆ ಎನ್ನುತ್ತಾಳೆ ಆಕೆ.

ವರ್ಷದಲ್ಲಿ ಎರಡು ಬಾರಿ ಹುಟ್ಟುಹಬ್ಬ ಆಚರಿಸುತ್ತಿರುವ ಲಿನ್ಲೀಯ ಭವಿಷ್ಯ ಉಜ್ವಲವಾಗಿದೆ. ಆಕೆ ತನ್ನ ಮನಸ್ಸಿಗೆ ಬಂದಿದ್ದನ್ನು ಮಾಡಲಿ, ಅವಳಿಗೆ ಯಾವುದೇ ಮಿತಿಯಿಲ್ಲ ಎನ್ನುತ್ತಾಳೆ ಮಾರ್ಗರೆಟ್.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…

  • ಆರೋಗ್ಯ

    ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮನಾ..?ತಿಳಿಯಲು ಈ ಲೇಖನ ಓದಿ…

    ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್‌, ಚಿಕ್ಕೋರ್‌ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.