ವಿಚಿತ್ರ ಆದರೂ ಸತ್ಯ

ವೈದ್ಯಕೀಯ ಪವಾಡದಿಂದ ವರ್ಷದಲ್ಲಿ ‘ಎರಡು ಬಾರಿ ಹುಟ್ಟುಹಬ್ಬ’ ಆಚರಿಸುತ್ತಿರುವ ಮಗು..!ತಿಳಿಯಲು ಈ ಲೇಖನ ಓದಿ..

139

ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

ಅಮೆರಿಕದ ಹ್ಯೂಸ್ಟನ್ನಲ್ಲಿರುವ ಮಕ್ಕಳ ಆಸ್ಪತ್ರೆಯ ಸರ್ಜನ್ಗಳಾದ ಡ್ಯಾರೆಲ್ ಕಾಸ್ ಮತ್ತು ಒಲುಯಿಂಕ್ ಒಲ್ಟೊಯಿ ಅವರು ಕಳೆದ ವರ್ಷ ಸೋನೊಗ್ರಾಮ್ ಪರೀಕ್ಷೆಯಲ್ಲಿ ಆಗ ಕೇವಲ 23 ವಾರ ಪ್ರಾಯವಾಗಿದ್ದ ಲಿನ್ಲೀ ಹೋಪ್ಳ ಮಿದುಳು ಬಳ್ಳಿಯ ಬುಡದಲ್ಲಿ ಭಾರೀ ಗಡ್ಡೆಯೊಂದು ಬೆಳೆದಿರುವುದು ಪತ್ತೆಯಾದ ಬಳಿಕ ಆ ಶಿಶುವನ್ನು ತಾಯಿ ಮಾರ್ಗರೆಟ್ ಬೋಮರ್(38)ಳ ಗರ್ಭಕೋಶದಿಂದ ಹೊರಕ್ಕೆ ತೆಗೆದಿದ್ದರು. ಆಗ ಮೊದಲ ಬಾರಿಗೆ ಶಿಶು ಈ ಧರೆಗಿಳಿದಿತ್ತು.

ಅದು(ಗಡ್ಡೆ) ಹೆಚ್ಚುಕಡಿಮೆ ಇನ್ನೊಂದು ತಲೆಯಂತೆ ಕಾಣುತ್ತಿತ್ತು ಎಂದು ಮಾರ್ಗರೆಟ್ ನೆನಪಿಸಿಕೊಂಡಿದ್ದಾಳೆ.ಗರ್ಭಕೋಶದಲ್ಲಿನ ಶಿಶುವಿನ ಮಿದುಳು ಬಳ್ಳಿಯಲ್ಲಿದ್ದ ಗಡ್ಡೆ ಇನ್ನೂ ಬೆಳೆಯುತ್ತಲೇ ಇತ್ತು. ಗಡ್ಡೆಯ ಬೃಹತ್ ಗಾತ್ರದಿಂದಾಗಿ ಈ ಶಿಶು ಬದುಕುಳಿಯುವುದಿಲ್ಲ ಎಂದು ವೈದ್ಯರು ಮಾರ್ಗರೆಟ್ಗೆ ತಿಳಿಸಿದ್ದರು.

 

ಸ್ಯಾಕ್ರೋಕೊಸಿಜೀಲ್ ಟೆರಾಟೋಮಾ ಎಂದು ವೈದ್ಯಕೀಯ ಭಾಷೆಯಲ್ಲಿ ಹಣೆಪಟ್ಟಿ ಅಂಟಿಸಿಕೊಂಡಿದ್ದ ಈ ಟ್ಯೂಮರ್ ಭ್ರೂಣದಿಂದ ರಕ್ತವನ್ನು ಸೆಳೆಯುತ್ತಿತ್ತು ಮತ್ತು ಇದರಿಂದಾಗಿ ಹೃದಯಾಘಾತದ ಅಪಾಯ ಹೆಚ್ಚಾಗಿತ್ತು.

ಅದು ಎಂತಹ ಬಿಕ್ಕಟ್ಟನ್ನು ಸೃಷ್ಟಿಸಿತ್ತೆಂದರೆ ವೈದ್ಯರು ಕಾಯುವಂತಿರಲಿಲ್ಲ, ಶಿಶು ಬದುಕುಳಿಯಬೇಕೆಂದರೆ ಅವರು ತಕ್ಷಣವೇ ಶಸ್ತ್ರಚಿಕಿತ್ಸೆಯನ್ನು ನಡೆಸಲೇಬೇಕಾಗಿತ್ತು.

ವೈದ್ಯರ ತಂಡ ಶಿಶುವನ್ನು ತಾಯಿಯ ಗರ್ಭಕೋಶದಿಂದ ಹೊರಗೆ ತೆಗೆದಿದ್ದರು. ಐದು ಗಂಟೆಗಳ ಸುದೀರ್ಘ ಅವಧಿಯ ಶಸ್ತ್ರಚಿಕಿತೆಯನ್ನು ನಡೆಸುತ್ತಿದ್ದಾಗ ಮಗುವಿನ ಸಾವು-ಬದುಕಿನ ಸಾಧ್ಯತೆ 50:50ರಷ್ಟಿತ್ತು.

ಪೂರ್ತಿ 20 ನಿಮಿಷಗಳ ಕಾಲ ಶಿಶು ತಾಯಿಯ ಶರೀರದಿಂದ ಹೊರಗಿತ್ತು ಮತ್ತು ಟ್ಯೂಮರ್ನ್ನು ಬೇರ್ಪಡಿಸಿದಾಗ ಅದರ ತೂಕ ಕೇವಲ ಒಂದು ಪೌಂಡ್ ಮೂರು ಔನ್ಸ್ ಅಂದರೆ 538.64 ಗ್ರಾಮ್ಗಳಷ್ಟಿತ್ತು. ಶಸ್ತ್ರಚಿಕಿತ್ಸೆ ಪೂರ್ಣಗೊಂಡ ಬಳಿಕ ಭ್ರೂಣವನ್ನು ಅತ್ಯಂತ ಎಚ್ಚರಿಕೆಯಿಂದ ತಾಯಿಯ ಗರ್ಭಾಶಯದಲ್ಲಿ ಮರು ಸ್ಥಾಪಿಸಲಾಗಿತ್ತು.

ಮೂರು ತಿಂಗಳುಗಳ ಬಳಿಕ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಲಿನ್ಲೀ ಎರಡನೇ ಬಾರಿ, ಅಂದರೆ ಈ ಬಾರಿ ಅಧಿಕೃತವಾಗಿ ಜನಿಸಿದಾಗ ಐದು ಪೌಂಡ್ ಐದು ಔನ್ಸ್(2.410 ಕೆ.ಜಿ) ತೂಗುತ್ತಿದ್ದಳು.

ಈಗ ಒಂದು ವರ್ಷ ಪ್ರಾಯವಾಗಿರುವ ಲಿನ್ಲೀ ಯಾವುದೇ ಆರೋಗ್ಯ ಸಮಸ್ಯೆಯಲ್ಲದೆ ಸೊಂಪಾಗಿ ಬೆಳೆಯುತ್ತಿದ್ದಾಳೆ. ತನ್ನ ಮಗು ಎಷ್ಟೊಂದು ಜಾಣೆಯಾಗಿದ್ದಾಳೆ ಎಂದು ತಾಯಿ ಮಾರ್ಗರೆಟ್ಗೆ ಹೆಮ್ಮೆಯೋ ಹೆಮ್ಮೆ.

ಅವಳು ನಡೆಯುವುದನ್ನು ಮತ್ತು ಓಡುವುದನ್ನು ಇಷ್ಟಪಡುತ್ತಾಳೆ. ಇದೊಂದು ದೊಡ್ಡ ಪವಾಡವಾಗಿದೆ. ಅವಳು ನಮ್ಮ ಪಾಲಿಗೆ ಅದ್ಭುತ ಆನಂದವಾಗಿದ್ದಾಳೆ ಎನ್ನುತ್ತಾಳೆ ಆಕೆ.

ವರ್ಷದಲ್ಲಿ ಎರಡು ಬಾರಿ ಹುಟ್ಟುಹಬ್ಬ ಆಚರಿಸುತ್ತಿರುವ ಲಿನ್ಲೀಯ ಭವಿಷ್ಯ ಉಜ್ವಲವಾಗಿದೆ. ಆಕೆ ತನ್ನ ಮನಸ್ಸಿಗೆ ಬಂದಿದ್ದನ್ನು ಮಾಡಲಿ, ಅವಳಿಗೆ ಯಾವುದೇ ಮಿತಿಯಿಲ್ಲ ಎನ್ನುತ್ತಾಳೆ ಮಾರ್ಗರೆಟ್.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು

    ‘ಉಗ್ರ ಹನುಮಂತ’ಚಿತ್ರದ ಹಿಂದಿರುವ ರೋಚಕ ಸ್ಟೋರಿ ಗೊತ್ತಾ ನಿಮ್ಗೆ!ಈ ಚಿತ್ರ ಹೇಗೆ ಬಂತು ಗೊತ್ತಾ?

    ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.

  • ಸುದ್ದಿ

    ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

    ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…

  • ಉಪಯುಕ್ತ ಮಾಹಿತಿ

    ಬಯಲುಸೀಮೆ ಕೋಲಾರದ ಈಗಿನ ಬರಗಾಲದ ಪರಿಸ್ಥಿತಿಗೆ ಇದು ಮುಖ್ಯ ಕಾರಣ ಇರಬಹುದಾ? ನೀವೇನಂತೀರಾ?

    ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.

  • ಮನಮಿಡಿಯುವ ಕಥೆ

    ಹೆಣ್ಣು ಮಗಳು ಹುಟ್ಟಿದ್ರೆ ಅವಳಿಗೆ ನಾನ್ಯಾಕೆ ಕಲಿಸಬೇಕು.?ಎಂದ ಗಂಡ ನಂತರ ಹೇಳಿದ್ದು ಏನು.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…

  • ವಿಸ್ಮಯ ಜಗತ್ತು

    ಆಕಾಶದಲ್ಲಿ ವಿಮಾನದ ಮೇಲೆ ದಾಳಿ ಮಾಡಿದ ಹದ್ದುಗಳು..!ತಿಳಿಯಲು ಇದನ್ನು ಓದಿ..

    ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.

  • ಆರೋಗ್ಯ

    ಊಟವಾದ ತಕ್ಷಣ ನೀರನ್ನು ಕುಡಿಯಬಾರದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.