ಕರ್ನಾಟಕ

ವೈದ್ಯರ ಮುಷ್ಕರದ ಪರಿಣಾಮ ರೋಗಿಗಳ ಸಾವು..!ತಿಳಿಯಲು ಈ ಲೇಖನ ಓದಿ..

137

ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಖಾಸಗಿ ಆಸ್ಪತ್ರೆಗಳು ಮುಚ್ಚಿದ್ದರಿಂದ ರೋಗಿಗಳ ಪರಿಸ್ಥಿತಿ ಬಿಗಡಾಯಿಸಿತ್ತು. ರೋಗಿಗಳು ತುರ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಮುಗಿ ಬೀಳುವ ಸ್ಥಿತಿ ನಿರ್ಮಾಣವಾಯಿತು. ಸರ್ಕಾರಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ನಿಭಾಯಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.ಬೆಂಗಳೂರು, ಮೈಸೂರು ಮತ್ತು ಮಂಗಳೂರು ನಗರಗಳ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಿದವು.

ಮಧುಮೇಹದಿಂದ ಬಾಲಕಿ ಸಾವು:-

ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕು ಇಂಗಳಗಾಂವ ಗ್ರಾಮದ ಬಾಲಕಿ ಕಲ್ಲವ್ವ ಶ್ರೀಶೈಲ ಅಂಬಿ (12) ತುರ್ತು ಚಿಕಿತ್ಸೆ ಲಭಿಸದೆ ಮಂಗಳವಾರ ಮೃತಪಟ್ಟಿದ್ದಾಳೆ. ಹುಟ್ಟಿನಿಂದಲೇ ಬರುವ ಮಧುಮೇಹದಿಂದ ಬಳಲುತ್ತಿದ್ದ ಆಕೆ, ಸೋಮವಾರ ರಾತ್ರಿ ತೀವ್ರ ರಕ್ತದೊತ್ತಡದಿಂದಾಗಿ ಅರೆಪ್ರಜ್ಞಾವಸ್ಥೆ ತಲುಪಿದ್ದಳು. ಸಕಾಲಕ್ಕೆ ಯಾವ ವೈದ್ಯರೂ ಸಿಗಲಿಲ್ಲ. ತಡರಾತ್ರಿ ಅಥಣಿಯ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬಾಲಕಿ ಮೃತಪಟ್ಟಳು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಸಂಜುಕುಮಾರ ಗುಂಜಿಗಾಂವಿ ತಿಳಿಸಿದರು.

ಡೆಂಗಿ ಜ್ವರದಿಂದ ಬಳಲುತ್ತಿದ್ದಳು ಎನ್ನಲಾದ ಧಾರವಾಡದ ವೈಷ್ಣವಿ ಜಾಧವ (9) ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾಳೆ. ಬಾಲಕಿಯನ್ನು ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿ ನಿರಾಕರಿಸಿದ್ದರಿಂದ ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ರಾತ್ರಿಯೇ ಮೃತಪಟ್ಟಿದ್ದಾಳೆ.

ಪಿಡಿಒ ಸಾವು:-

ಹೃದಯಾಘಾತಕ್ಕೆ ಒಳಗಾಗಿದ್ದ ಗಂಗಾವತಿ ತಾಲ್ಲೂಕಿನ ಮುಕ್ಕುಂಪಿ ಗ್ರಾಮದ ಪಿಡಿಒ ಗ್ಯಾನಪ್ಪ ಬುಡ್ನಾಳ್ (56) ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಮಂಗಳವಾರ ಮೃತಪಟ್ಟಿದ್ದಾರೆ.

 

ಹಾಸನದಲ್ಲಿ 3 ತಿಂಗಳ ಮಗುವಿನ ಸಾವು:-

ಹಾಸನ ನಗರದಲ್ಲಿ ಮೂರು ತಿಂಗಳ ಮಗು ಅನಾರೋಗ್ಯದಿಂದ ಮಂಗಳವಾರ ಮೃತಪಟ್ಟಿದೆ. ಇಲ್ಲಿನ ಸಿದ್ದಯ್ಯನಗರದ ನದೀಂ-ಫರ್ಹಾನಾ ದಂಪತಿ ಪುತ್ರ ಇಬ್ರಾಹಿಂ, ನಾಲ್ಕು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಹೆರಿಗೆಗೆಂದು ತವರೂರು ತುಮಕೂರು ಜಿಲ್ಲೆಯ ತಿಪಟೂರಿಗೆ ತೆರಳಿದ್ದ ಫರ್ಹಾನಾ, ಅಲ್ಲಿಯೇ ಚಿಕಿತ್ಸೆ ಕೊಡಿಸಿದ್ದರು.

ಆದರೆ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದಿಂದ ಸರಿಯಾದ ಚಿಕಿತ್ಸೆ ದೊರಕಲಿಲ್ಲಮಗುವಿನ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ, ತಿಪಟೂರಿನಿಂದ ಸಾರಿಗೆ ಬಸ್ ನಲ್ಲಿ ಬೆಳಿಗ್ಗೆ ಹಾಸನಕ್ಕೆ ಮರಳಿ ಕರೆತರುವಾಗ ಮಾರ್ಗಮಧ್ಯೆ ಸಾವನ್ನಪ್ಪಿದೆ.

ತುಮಕೂರಿನಲ್ಲಿ ವಿದ್ಯಾರ್ಥಿನಿ ಸಾವು:-

ತುಮಕೂರು ನಗರದ ವರದರಾಜ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಜ್ಯೋತಿ (23) ಹೃದಯ ಸಂಬಂಧಿ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ರೋಗಿಗಳ ಸಂಖ್ಯೆ ದುಪ್ಪಟ್ಟು:-
ಹಾವೇರಿ ಜಿಲ್ಲೆಯಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಂಗಳವಾರ ರೋಗಿಗಳ ದಟ್ಟಣೆ ಹೆಚ್ಚಾಗಿತ್ತು. ‘ಹಾವೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬರುತ್ತಿರುವ ರೋಗಿಗಳ ಸಂಖ್ಯೆ ದುಪ್ಪಟ್ಟಾಗಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

    ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​…

  • ಸಿನಿಮಾ

    ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

    ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

  • ಸುದ್ದಿ

    ಪತ್ರಕರ್ತನ ಮೇಲೆ ಹಲ್ಲೆಗೈದು, ಬಟ್ಟೆಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿದ್ರು

    ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…

  • ಸಿನಿಮಾ, ಸುದ್ದಿ

    ಸಾಹಸಸಿಂಹ ವಿಷ್ಣುವರ್ಧನ್ ಜೊತೆ ನಟಿಸಿದ ಖ್ಯಾತ ನಟಿ ರಾಧಾ ಹಾಗೂ ಪುತ್ರಿ. ಆಕೆ ಯಾರು ಗೊತ್ತಾ..?

    ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…