ಜ್ಯೋತಿಷ್ಯ

ಶನಿವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

329

ಇಂದು ಶನಿವಾರ,  17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಧನಾಗಮನ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಆದಷ್ಟೂ ಎರಡೆರಡು ಬಾರಿ ಚಿಂತಿಸಿ ನಿಮ್ಮ ಕೆಲಸಗಳನ್ನು ಮುಂದುವರೆಸಿ.  ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ.ನಿಮ್ಮ ಬುದ್ದಿಶಕ್ತಿ ಮತ್ತು ನೀವು ಸಾಮಾಜಿಕಾರ್ಯಗಳಲ್ಲಿ ತೊಡಗಿಕೊಳ್ಳುವ ರೀತಿ,ಜನರು ನಿಮ್ಮ ಕಡೆಗೆ ಬರುವಂತೆ,ನಿಮ್ಮನ್ನು ಹೊಗಳುವಂತೆ ಮಾಡುತ್ತದೆ.ಈ ದಿನ ನೀವು ಒಂದು ವಿಶೇಷವಾದ ಜವಾಬ್ದಾರಿ ನಿಮ್ಮ ಮೇಲೆ ಬರಲಿದೆ.

ವೃಷಭ:-

ಕೆಲವು ಮೂಲಗಳಿಂದ ನಿಮಗೆ ಹಣದ ಆಗಮನವಾಗಲಿದೆ.ನಿಮ್ಮ ಪಿತ್ರನಿಂದಲೂ ನಿಮಗೆ ಹಣದ ಸಹಾಯವಾಗಲಿದೆ.ನಿಮಗೆ ಧೈರ್ಯವನ್ನು ಹೇಳುವ ಮತ್ತು ನಿಮ್ಮ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುವ ಜನರೊಂದಿಗೆ ಬೆರೆಯಿರಿ.ಹಣಕಾಸು ಬರುವಿಕೆ ಉತ್ತಮವಾಗಲಿದೆ, ಹೊಸ ಕೆಲಸಕ್ಕೆ ಕೈ ಹಾಕುವ ಮುಂಚೆ ಹಲವು ಬಾರಿ ಯೋಚಿಸಿ ನಿಮಗೆ ಅವಶ್ಯವೆನಿಸಿದ ಕಾರ್ಯ ಆಯ್ಕೆಮಾಡಿಕೊಳ್ಳಿ.

ಮಿಥುನ:

ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ, ನಿಮ್ಮ ಹಿರಿಯರ ಸಲಹೆಯನ್ನು ಕೇಳುವುದು ಉತ್ತಮ. ಈ ನಿಮ್ಮ ಮನಸ್ಥಿತಿ ಸಾಕಷ್ಟು ಉಲ್ಲಾಸಿತವಾಗಿರುತ್ತದೆ. ಮೇಲಧಿಕಾರಿಗಳಿಂದ ನಿಮ್ಮೆ ಕೆಲಸಕ್ಕೆ ಹೊಗಳಿಕೆ ಸಿಗಲಿದೆ. ದೇಹದಲ್ಲಿ ಉಷ್ಣಾಂಶ ಏರುಪೇರಾಗಿ ಆರೋಗ್ಯದಲ್ಲಿ ವ್ಯತ್ಯಾಸ.ನಿಮ್ಮ ವ್ಯವಹಾರದಲ್ಲಿ ಪ್ರಾಮಾಣಿಕವಾಗಿರಿ, ಇದರಿಂದ ಎಲ್ಲರೂ ನಿಮಗೆ ಸಹಾಯ ಮಾಡುತ್ತಾರೆ.ಸಕಾರಾತ್ಮಕ ಚಿಂತನೆ ಮಾಡುವುದರಿಂದ ಆರೋಗ್ಯದಲ್ಲಿ ಸುಧಾರಣೆ.

ಕಟಕ :-

ಹಣಕಾಸಿನ ಹರಿವು ತ್ತಮವಾಗಿರುತ್ತದೆ.ನಿಮ್ಮ ನೆರೆಹೊರೆಯ ಜನರೊಂದಿಗೆ ಜಗಳ ಬೇಡ,ನೀವು ಅವರೊಂದಿಗೆ ಬೆರೆಯುವುದರಿಂದ ಹೆಚ್ಚು ಗೌರವ ನಿಮ್ಮದಾಗುತ್ತದೆ.ನಿಮ್ಮ ನೆಂಟರು ನಿಮ್ಮ ಉದಾರ ಮನಸ್ಸಿನ ಲಾಭ ಪಡೆಯುವ ಸಾಧ್ಯತೆ ಇದೆ.ಇದರಲ್ಲಿ ನೀವು ಹೇಮಾರಿದರೆ ಮೋಸ ಹೋಗುವ ಸಾಧ್ಯತೆ ಇದೆ.ಆರೋಗ್ಯದಲ್ಲಿ ಅಲ್ಪ ತೊಂದರೆಉಂಟಾಗಿ ಹಣದ ಖರ್ಚಾಗುವುದು.

 ಸಿಂಹ:

ಪ್ರಭಾವಿ ಎನಿಸಿರುವ ವ್ಯಕ್ತಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ.ನೀವು ಅನಗತ್ಯ ವಿಚಾರಗಳನ್ನು ಮಾತನಾಡುವುದು ಬೇಡ,ಏಕೆಂದರೆ ನಿಮ್ಮ ಅನಗತ್ಯ ಮಾತುಗಳಿಗೆ,ಕೆಲಸಕ್ಕೆ ಬಾರದ ಮಾತುಗಳನ್ನು ಸೇರಿಸಿ ನಿಮ್ಮ ಮೇಲೆ ಅಪನಂಬಿಕೆ ಬರುವಂತೆ ಮಾಡುತ್ತಾರೆ.ದೊಡ್ಡವರೊಂದಿಗೆ ಮತ್ತು ನಿಮ್ಮ ನೆಂಟರೊಂದಿಗೆ ಬೇಡವಾದ ವಾದ ಮಾಡಿ ಕೆಟ್ಟವರಾಗಬೇಡಿ.ಬೇರೆಯವರ ಮೇಲೆ ನಿಮ್ಮ ಪ್ರಭಾವ ಬೀರಲು ಹಣದ ಪೋಲು ಮಾಡಬೇಡಿ.

ಕನ್ಯಾ :-

ನಿಮ್ಮ ಮಾತಿನ ಮೇಲೆ ಎಚ್ಚರ ಇರಲಿ.ನಿಮ್ಮ ತಮಾಷೆ ಮಾತುಗಳು ಸಹ ಗಂಡ ಹೆಂಡತಿಯಲ್ಲಿ ಜಗಳವಾಗುವಂತೆ ಮಾಡಲಿದೆ.ಹಾಗಾಗಿ ಹಲವು ಬಾರಿ ಯೋಚಿಸಿ ಮಾತನಾಡಿ.ಹಣದ ಹರಿವು ಬರಲಿದೆ.ನಿಮ್ಮ ಹಿರಿಯರ ಆರೋಗ್ಯದ ಬಗ್ಗೆ ಎಚ್ಚರವಿರಲಿ.ಈರಾಶಿಯಲ್ಲಿ ಬರುವ ಮಹಿಳೆಯರಿಗೆ,ಆದಾಯ ಬರಲಿದ್ದು,ಚಿನ್ನವನ್ನು ಕೊಳ್ಳುವ ಯೋಗವಿದೆ.

ತುಲಾ:

ಆಸ್ತಿ ಖರೀದಿಸಲು ಯೋಜನೆಗಳನ್ನು ಮಾಡುತ್ತೀರಿ. ನಿಮ್ಮ ಕಾರ್ಯ ಕ್ಷೇತ್ರದಲ್ಲಿ  ಮುಖ್ಯ ಬೆಳವಣಿಗೆಯಾಗುತ್ತಿದ್ದು, ಇದರಿಂದ ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ. ಸಂಗಾತಿಗೆ ಸ್ಥಿರಾಸ್ತಿ ಒದಗಿ ಬರುವ ಸಾಧ್ಯತೆ. ನಿಮ್ಮ ಹಠಮಾರಿತನ ಬಿಟ್ಟುಬಿಡಿ. ಈ ಸ್ವಭಾವ ಜನರ ಬಳಿ ನಿಷ್ಠುರವಾಗುವ ಸಾಧ್ಯತೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಅವರ ವ್ಯಾಪಾರದಲ್ಲಿ ಸಾಕಷ್ಠು ಪ್ರಗತಿಯಾಗುತ್ತದೆ.

ವೃಶ್ಚಿಕ :-

ನೀವೂ ತಮಾಷೆಯಾಗಿ ಮಾತನಾಡಿದ್ರು,ಕಷ್ಟಕ್ಕೆ ಬೀಳುವ ಸಾಧ್ಯತ ಇದೆ.ನಿಮ್ಮ ಯೋಜನೆಗಳು ಕೊನೆ ಕ್ಷಣದಲ್ಲಿ ಬದಲಾಗಲಿವೆ.ನಿಮ್ಮ ಮಾತಿನಿಂದ ಎಲ್ಲರನ್ನೂ ಗೆದ್ದರೂ ಅದೇ ಸಮಸ್ಯಯನ್ನು ತರಬಹುದು.ನಿಮ್ಮ ಪರಾಕ್ರಮದಿಂದ ಬೇರೆಯವರ ಸಹಾಯಕ್ಕೆ ಹೋಗುತ್ತೀರಿ.ಈ ದಿನ ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.

ಧನಸ್ಸು:

ಕಚೇರಿಯಲ್ಲಿ ಹೊಸ ಜವಾಬ್ದಾರಿ ಲಭಿಸಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ಮತ್ತು ಅಣ್ಣ ತಮ್ಮಂದಿರ ನಡುವೆ ಸಂಭಂದ ಹೆಚ್ಚಲಿದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ,ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.ನಿಮ್ಮ ಆರೋಗ್ಯದ ಕಡೆ ಗಮನ ಕೊಡಿ. ಪ್ರಯಾಣಮಾಡುವಾಗ ಎಚ್ಚರಿಕೆ ಅಗತ್ಯ.

ಮಕರ :-

ವಿರಸ ಮೂಡಿದ್ದ ದಾಂಪತ್ಯದಲ್ಲಿ ತಣ್ಣನೆ ಗಾಳಿ ಬೀಸಲು ಶುರುವಾಗಲಿದೆ.ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅವರ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಿರಿಯರ ಸಹಾಯದಿಂದ ಅಧಿಕಾರದಲ್ಲಿ ಅಭಿವೃದ್ಧಿ.ಭಗವಂತನ ಕೃಪೆಯಿಂದ ಎಲ್ಲಾ ಒಳ್ಳೆಯದಾಗಲಿದೆ.ನಿಮ್ಮ ಪ್ರಯಾಣದ ವೆಳಾಪಟ್ಟಿ ಕೊನೆಗಳಿಗೆಯಲ್ಲಿ ಬದಲಾವಣೆಯಾಗಲಿದೆ.

ಕುಂಭ:-

ಗುರುಹಿರಿಯರ ಆಶೀರ್ವಾದ ಪಡೆಯಿರಿ. ಇದರಿಂದ ಒಳಿತಾಗುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ. ಸಾಲ ತೆಗೆದುಕೊಂಡಿದ್ದವರಿಗೆ ಎಲ್ಲವನ್ನೂ ತೀರಿಸುವ ಅವಕಾಶ ಒದಗುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ, ಕಾರಣ ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಉಂಟಾಗುವುದು. ವ್ಯಾಪಾರದಲ್ಲಿ ಎಂದಿನಂತೆ ಲಾಭ ಬರುತ್ತವೆ.

ಮೀನ:-

ಮಾನಸಿಕ ನೆಮ್ಮದಿ ದೊರೆಯಲಿದೆ. ಹೊಸ ವ್ಯವಹಾರಗಳು ನಿಮ್ಮ ವ್ಯಕ್ತಿತ್ವವನ್ನು ಎತ್ತರದ ಶ್ರೇಣಿಗೆ ಒಯ್ಯುತ್ತವೆ. ಈ ದಿನ ನೀವು ಮನರಂಜನೆಯಲ್ಲಿ ಕಳೆಯಲಿದ್ದೀರಿ.ಬುದ್ಧಿವಂತಿಕೆಯಿಂದ ವ್ಯವಹಾರ ಮಾಡುವಿರಿ. ಕೆಲಸದ ಸ್ಥಳದಲ್ಲಿ ತಲೆ ತಿನ್ನುವ ಜನರು ಬಂದು ನಿಮ್ಮ ಆತ್ಮವಿಶ್ವಾಸಕ್ಕೆ ಧಕ್ಕೆ ತರುವವರು.ನಿಮ್ಮ ಹೆಂಡತಿಯೊಂದಿಗೆ ಸಂಬಂದ ಉತ್ತಮಗೊಳ್ಳುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

    ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…

  • ಉಪಯುಕ್ತ ಮಾಹಿತಿ

    ಬಯಲುಸೀಮೆ ಕೋಲಾರದ ಈಗಿನ ಬರಗಾಲದ ಪರಿಸ್ಥಿತಿಗೆ ಇದು ಮುಖ್ಯ ಕಾರಣ ಇರಬಹುದಾ? ನೀವೇನಂತೀರಾ?

    ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.

  • ಸುದ್ದಿ

    ಪರ್ಸಿನಲ್ಲಿ ಸತ್ತವರ ಫೋಟೊ ಇಟ್ಟರೆ ಏನಾಗುತ್ತೆ ಗೊತ್ತಾ…?

    ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…

  • ಜ್ಯೋತಿಷ್ಯ

    ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

    ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.