ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ.

ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ ಯಶಸ್ಸು ಕಾಣುತ್ತಿದೆ.

ಈ ಸೀರಿಯಲ್ ಆರಂಭ ಆದಾಗಿನಿಂದಲೂ ಪ್ರತಿಹಂತದಲ್ಲೂ ಕುತೂಹಲವನ್ನು ಹುಟ್ಟುಸಿಕೊಂಡು ಬರುತ್ತಿದ್ದು, ಈಗಾಗಲೇ ಕಿರುತೆರೆಯಲ್ಲಿ ಯಶಸ್ವಿಯಾಗಿ 100 ಎಪಿಸೋಡ್ ಮುಗಿಸಿದೆ. ಉತ್ತಮ ನಿರೂಪಣೆ, ಕಥೆ, ಪಾತ್ರಗಳು ಈ ಧಾರಾವಾಹಿಯ ಪ್ಲಸ್ ಪಾಯಿಂಟ್ ಆಗಿದ್ದು ಇತರ ಧಾರಾವಾಹಿಗಳಿಗಿಂತ ‘ಶನಿ’ ಮೊದಲ ಸ್ಥಾನದಲ್ಲಿದೆ.

ಶನಿ ಧಾರಾವಾಹಿಯ ಪ್ರಮುಖ ಹೈಲೆಟ್ ಕರ್ಮ ಫಲಧಾತ, ನ್ಯಾಯದ ಅಧಿದೇವತೆ ಭಗವಾನ್ ಶನಿದೇವನ ಪಾತ್ರ.ಈ ಪಾತ್ರವನ್ನು ಮಾಡಿರುವುದು ಸುನಿಲ್ ಎಂಬ ಒಬ್ಬ ಅನಾಥ ಹುಡುಗ ಎಂದರೆ ನೀವ್ ನಂಬೋದಿಲ್ಲ.

ತನ್ನ ತೀಕ್ಷಣ ಕಣ್ಣಿನ ನೋಟ,ಮುಖದ ಗಾಂಬಿರ್ಯ,ಅಮೋಘ ಡೈಲಾಗ್ ಡೆಲಿವರಿ ಜೊತೆಗೆ ಆ ಶನಿ ಮಾಹಾತ್ಮನೆ ತನ್ನ ಮೈ ಮೇಲೆ ಬಂದಿರುವಂತೆ ಅಮೋಘ ಅಭಿನಯ ನೀಡಿ ಕಿರುತೆರೆ ಲೋಕದ ಜನರ ಮನಸ್ಸನ್ನು ಗೆದ್ದಿದ್ದಾನೆ ಈ ಸುನೀಲ್.

ಸಮಾರ್ಗದಲ್ಲಿ ನಡೆ, ಇಲ್ಲದಿದ್ದರೆ ನಾನೇ ನಿಮ್ಗೆ ಸನ್ಮಾರ್ಗ ತೋರಬೇಕಾದಿತು..ಇದು ಶನಿ ಧಾರಾವಾಹಿಯ ಹೈಲೆಟ್ ಡೈಲಾಗ್.
ತನ್ನ ಅಮೋಘ ನಟನೆಯಿಂದಲೇ ಕರುನಾಡ ಜನರ ಮನಸ್ಸನ್ನು ಗೆದ್ದಿರುವ ಸುನೀಲ್ ಬೆಳೆಯುತ್ತಿರುವುದು ಚಾಮರಾಜನಗರದ ಅನಾಥಾಶ್ರಮದಲ್ಲಿ. ಹೌದು ಸುನೀಲ್ ಚಿಕ್ಕಂದಿನಿಂದಲೂ ಬೆಳೆದಿದ್ದು ದೀನ ಬಂಧು ಮಕ್ಕಳ ಆಶ್ರಮದಲ್ಲಿ.ಈ ಆಶ್ರಮವನ್ನು ಕವಿ ಜಿ.ಎಸ್.ಶಿವರುದ್ರಪ್ಪನವರ ಮಗ ಚಾಮರಾಜನಗರದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ.ತನ್ನ ಹತ್ತನೆ ತರಗತಿವರಗಿನ ವಿಧ್ಯಾಭ್ಯಾಸವನ್ನು ಆಶ್ರಮದಿಂದಲೇ ಮುಗಿಸಿದ್ದಾನೆ.

ತುಂಬಾ ಚಿಕ್ಕಂದಿನಿಂದಲೇ ಅಭಿನಯದಲ್ಲಿ ಆಸಕ್ತಿ ಹೊಂದಿದ್ದ ಸುನೀಲ್ ಯಕ್ಷಗಾನವನ್ನು ಕೂಡ ಕಲಿತಿದ್ದರು.ಶನಿ ಧಾರಾವಾಹಿಯ ಆಡಿಶನ್ ತಂಡದ ಕಣ್ಣಿಗೆ ಬಿದ್ದ ಇವರ ಅಮೋಘ ಅಭಿನಯಕ್ಕೆ ಮನಸೋತ ಶನಿ ಧಾರವಾಹಿ ತಂಡದವರು ಧಾರಾವಾಹಿಯ ಮುಖ್ಯ ಪಾತ್ರ ಭಗವಾನ್ ಶನಿದೇವನ ಪಾತ್ರಕ್ಕೆ ಆಯ್ಕೆ ಮಾಡಿದ್ರು.

ಶನಿ ಪಾತ್ರದಾರಿ ಸುನೀಲ್ ಹೇಳುವ ಪ್ರಖಾರ ಶನಿ ದೇವರ ಅಷ್ಟೇನೂ ಗೊತ್ತಿಲ್ವಂತೆ.ಪಾತ್ರ ಮಾಡುತ್ತಲೇ ಶನಿ ಮಹಾತ್ಮನ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.ತನ್ನ ಶೂಟಿಂಗ್ ನಡುವೆಯೂ ಪಿಯು ಓದುತ್ತಿರುವ ಪ್ರತಿಭಾವಂತ ಹುಡುಗ ಸುನೀಲ್’ಗೆ ಮತ್ತಷ್ಟು ಅವಕಾಶಗಳು ದೊರೆಯಲಿ, ಆ ಭಗವಾನ್ ಶನಿ ಮಹಾತ್ಮನ ಆಶೀರ್ವಾದ ಅವನಿಗೆ ಸಿಗಲಿ ಎಂದು ನಾವು ಕೇಳಿಕೊಳ್ಳೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ
ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…
![]()