ಮನರಂಜನೆ

ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

2473

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ.

ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ ಯಶಸ್ಸು ಕಾಣುತ್ತಿದೆ.

ಯಶಸ್ವಿ 100 ಎಪಿಸೋಡ್…

ಈ ಸೀರಿಯಲ್ ಆರಂಭ ಆದಾಗಿನಿಂದಲೂ ಪ್ರತಿಹಂತದಲ್ಲೂ ಕುತೂಹಲವನ್ನು ಹುಟ್ಟುಸಿಕೊಂಡು ಬರುತ್ತಿದ್ದು, ಈಗಾಗಲೇ ಕಿರುತೆರೆಯಲ್ಲಿ ಯಶಸ್ವಿಯಾಗಿ 100 ಎಪಿಸೋಡ್ ಮುಗಿಸಿದೆ. ಉತ್ತಮ ನಿರೂಪಣೆ, ಕಥೆ, ಪಾತ್ರಗಳು ಈ ಧಾರಾವಾಹಿಯ ಪ್ಲಸ್‌ ಪಾಯಿಂಟ್‌ ಆಗಿದ್ದು ಇತರ ಧಾರಾವಾಹಿಗಳಿಗಿಂತ ‘ಶನಿ’ ಮೊದಲ ಸ್ಥಾನದಲ್ಲಿದೆ.

ಶನಿ ಪಾತ್ರದಾರಿ ಅನಾಥ ಹುಡುಗ…

ಶನಿ ಧಾರಾವಾಹಿಯ ಪ್ರಮುಖ ಹೈಲೆಟ್ ಕರ್ಮ ಫಲಧಾತ, ನ್ಯಾಯದ ಅಧಿದೇವತೆ ಭಗವಾನ್ ಶನಿದೇವನ ಪಾತ್ರ.ಈ ಪಾತ್ರವನ್ನು ಮಾಡಿರುವುದು ಸುನಿಲ್ ಎಂಬ ಒಬ್ಬ ಅನಾಥ ಹುಡುಗ ಎಂದರೆ ನೀವ್ ನಂಬೋದಿಲ್ಲ.

ಅಮೋಘ ಅಭಿನಯ…

ತನ್ನ ತೀಕ್ಷಣ ಕಣ್ಣಿನ ನೋಟ,ಮುಖದ ಗಾಂಬಿರ್ಯ,ಅಮೋಘ ಡೈಲಾಗ್ ಡೆಲಿವರಿ ಜೊತೆಗೆ ಆ ಶನಿ ಮಾಹಾತ್ಮನೆ ತನ್ನ ಮೈ ಮೇಲೆ ಬಂದಿರುವಂತೆ ಅಮೋಘ ಅಭಿನಯ ನೀಡಿ ಕಿರುತೆರೆ ಲೋಕದ ಜನರ ಮನಸ್ಸನ್ನು ಗೆದ್ದಿದ್ದಾನೆ ಈ ಸುನೀಲ್.

ಸಮಾರ್ಗದಲ್ಲಿ ನಡೆ, ಇಲ್ಲದಿದ್ದರೆ ನಾನೇ ನಿಮ್ಗೆ ಸನ್ಮಾರ್ಗ ತೋರಬೇಕಾದಿತು..ಇದು ಶನಿ ಧಾರಾವಾಹಿಯ ಹೈಲೆಟ್ ಡೈಲಾಗ್.

ಸುನೀಲ್ ಬೆಳೆದಿದ್ದು ಈ ಅನಾಥಾಶ್ರಮದಲ್ಲಿ…

ತನ್ನ ಅಮೋಘ ನಟನೆಯಿಂದಲೇ ಕರುನಾಡ ಜನರ ಮನಸ್ಸನ್ನು ಗೆದ್ದಿರುವ ಸುನೀಲ್ ಬೆಳೆಯುತ್ತಿರುವುದು ಚಾಮರಾಜನಗರದ ಅನಾಥಾಶ್ರಮದಲ್ಲಿ. ಹೌದು ಸುನೀಲ್ ಚಿಕ್ಕಂದಿನಿಂದಲೂ ಬೆಳೆದಿದ್ದು ದೀನ ಬಂಧು ಮಕ್ಕಳ ಆಶ್ರಮದಲ್ಲಿ.ಈ ಆಶ್ರಮವನ್ನು ಕವಿ ಜಿ.ಎಸ್.ಶಿವರುದ್ರಪ್ಪನವರ ಮಗ ಚಾಮರಾಜನಗರದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ.ತನ್ನ ಹತ್ತನೆ ತರಗತಿವರಗಿನ ವಿಧ್ಯಾಭ್ಯಾಸವನ್ನು ಆಶ್ರಮದಿಂದಲೇ ಮುಗಿಸಿದ್ದಾನೆ.

ಯಕ್ಷಗಾನ…

ತುಂಬಾ ಚಿಕ್ಕಂದಿನಿಂದಲೇ ಅಭಿನಯದಲ್ಲಿ ಆಸಕ್ತಿ ಹೊಂದಿದ್ದ ಸುನೀಲ್ ಯಕ್ಷಗಾನವನ್ನು ಕೂಡ ಕಲಿತಿದ್ದರು.ಶನಿ ಧಾರಾವಾಹಿಯ ಆಡಿಶನ್ ತಂಡದ ಕಣ್ಣಿಗೆ ಬಿದ್ದ ಇವರ ಅಮೋಘ ಅಭಿನಯಕ್ಕೆ ಮನಸೋತ ಶನಿ ಧಾರವಾಹಿ ತಂಡದವರು ಧಾರಾವಾಹಿಯ ಮುಖ್ಯ ಪಾತ್ರ ಭಗವಾನ್ ಶನಿದೇವನ ಪಾತ್ರಕ್ಕೆ ಆಯ್ಕೆ ಮಾಡಿದ್ರು.

ಶನಿ ಮಹಾತ್ಮನ ಬಗ್ಗೆ ಗೊತ್ತಿಲ್ಲ…

ಶನಿ ಪಾತ್ರದಾರಿ ಸುನೀಲ್ ಹೇಳುವ ಪ್ರಖಾರ ಶನಿ ದೇವರ ಅಷ್ಟೇನೂ ಗೊತ್ತಿಲ್ವಂತೆ.ಪಾತ್ರ ಮಾಡುತ್ತಲೇ ಶನಿ ಮಹಾತ್ಮನ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.ತನ್ನ ಶೂಟಿಂಗ್ ನಡುವೆಯೂ ಪಿಯು ಓದುತ್ತಿರುವ ಪ್ರತಿಭಾವಂತ ಹುಡುಗ ಸುನೀಲ್’ಗೆ ಮತ್ತಷ್ಟು ಅವಕಾಶಗಳು ದೊರೆಯಲಿ, ಆ ಭಗವಾನ್ ಶನಿ ಮಹಾತ್ಮನ ಆಶೀರ್ವಾದ ಅವನಿಗೆ ಸಿಗಲಿ ಎಂದು ನಾವು ಕೇಳಿಕೊಳ್ಳೋಣ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

    ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…

  • ಸುದ್ದಿ

    ಪತಿಯ ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದಂತಹ ಮಹಿಳೆ.. ಕಾರಣ?

    ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಆರೋಗ್ಯ

    ಈ ಉಂಡೆ ಮಾಡ್ಕೊಂಡು ತಿಂದರೆ ಕೆಮ್ಮು ಕಫ ಸಮಸ್ಯೆ ಮಾಯ.

    ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…