ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ.

ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ ಯಶಸ್ಸು ಕಾಣುತ್ತಿದೆ.

ಈ ಸೀರಿಯಲ್ ಆರಂಭ ಆದಾಗಿನಿಂದಲೂ ಪ್ರತಿಹಂತದಲ್ಲೂ ಕುತೂಹಲವನ್ನು ಹುಟ್ಟುಸಿಕೊಂಡು ಬರುತ್ತಿದ್ದು, ಈಗಾಗಲೇ ಕಿರುತೆರೆಯಲ್ಲಿ ಯಶಸ್ವಿಯಾಗಿ 100 ಎಪಿಸೋಡ್ ಮುಗಿಸಿದೆ. ಉತ್ತಮ ನಿರೂಪಣೆ, ಕಥೆ, ಪಾತ್ರಗಳು ಈ ಧಾರಾವಾಹಿಯ ಪ್ಲಸ್ ಪಾಯಿಂಟ್ ಆಗಿದ್ದು ಇತರ ಧಾರಾವಾಹಿಗಳಿಗಿಂತ ‘ಶನಿ’ ಮೊದಲ ಸ್ಥಾನದಲ್ಲಿದೆ.

ಶನಿ ಧಾರಾವಾಹಿಯ ಪ್ರಮುಖ ಹೈಲೆಟ್ ಕರ್ಮ ಫಲಧಾತ, ನ್ಯಾಯದ ಅಧಿದೇವತೆ ಭಗವಾನ್ ಶನಿದೇವನ ಪಾತ್ರ.ಈ ಪಾತ್ರವನ್ನು ಮಾಡಿರುವುದು ಸುನಿಲ್ ಎಂಬ ಒಬ್ಬ ಅನಾಥ ಹುಡುಗ ಎಂದರೆ ನೀವ್ ನಂಬೋದಿಲ್ಲ.

ತನ್ನ ತೀಕ್ಷಣ ಕಣ್ಣಿನ ನೋಟ,ಮುಖದ ಗಾಂಬಿರ್ಯ,ಅಮೋಘ ಡೈಲಾಗ್ ಡೆಲಿವರಿ ಜೊತೆಗೆ ಆ ಶನಿ ಮಾಹಾತ್ಮನೆ ತನ್ನ ಮೈ ಮೇಲೆ ಬಂದಿರುವಂತೆ ಅಮೋಘ ಅಭಿನಯ ನೀಡಿ ಕಿರುತೆರೆ ಲೋಕದ ಜನರ ಮನಸ್ಸನ್ನು ಗೆದ್ದಿದ್ದಾನೆ ಈ ಸುನೀಲ್.

ಸಮಾರ್ಗದಲ್ಲಿ ನಡೆ, ಇಲ್ಲದಿದ್ದರೆ ನಾನೇ ನಿಮ್ಗೆ ಸನ್ಮಾರ್ಗ ತೋರಬೇಕಾದಿತು..ಇದು ಶನಿ ಧಾರಾವಾಹಿಯ ಹೈಲೆಟ್ ಡೈಲಾಗ್.
ತನ್ನ ಅಮೋಘ ನಟನೆಯಿಂದಲೇ ಕರುನಾಡ ಜನರ ಮನಸ್ಸನ್ನು ಗೆದ್ದಿರುವ ಸುನೀಲ್ ಬೆಳೆಯುತ್ತಿರುವುದು ಚಾಮರಾಜನಗರದ ಅನಾಥಾಶ್ರಮದಲ್ಲಿ. ಹೌದು ಸುನೀಲ್ ಚಿಕ್ಕಂದಿನಿಂದಲೂ ಬೆಳೆದಿದ್ದು ದೀನ ಬಂಧು ಮಕ್ಕಳ ಆಶ್ರಮದಲ್ಲಿ.ಈ ಆಶ್ರಮವನ್ನು ಕವಿ ಜಿ.ಎಸ್.ಶಿವರುದ್ರಪ್ಪನವರ ಮಗ ಚಾಮರಾಜನಗರದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ.ತನ್ನ ಹತ್ತನೆ ತರಗತಿವರಗಿನ ವಿಧ್ಯಾಭ್ಯಾಸವನ್ನು ಆಶ್ರಮದಿಂದಲೇ ಮುಗಿಸಿದ್ದಾನೆ.

ತುಂಬಾ ಚಿಕ್ಕಂದಿನಿಂದಲೇ ಅಭಿನಯದಲ್ಲಿ ಆಸಕ್ತಿ ಹೊಂದಿದ್ದ ಸುನೀಲ್ ಯಕ್ಷಗಾನವನ್ನು ಕೂಡ ಕಲಿತಿದ್ದರು.ಶನಿ ಧಾರಾವಾಹಿಯ ಆಡಿಶನ್ ತಂಡದ ಕಣ್ಣಿಗೆ ಬಿದ್ದ ಇವರ ಅಮೋಘ ಅಭಿನಯಕ್ಕೆ ಮನಸೋತ ಶನಿ ಧಾರವಾಹಿ ತಂಡದವರು ಧಾರಾವಾಹಿಯ ಮುಖ್ಯ ಪಾತ್ರ ಭಗವಾನ್ ಶನಿದೇವನ ಪಾತ್ರಕ್ಕೆ ಆಯ್ಕೆ ಮಾಡಿದ್ರು.

ಶನಿ ಪಾತ್ರದಾರಿ ಸುನೀಲ್ ಹೇಳುವ ಪ್ರಖಾರ ಶನಿ ದೇವರ ಅಷ್ಟೇನೂ ಗೊತ್ತಿಲ್ವಂತೆ.ಪಾತ್ರ ಮಾಡುತ್ತಲೇ ಶನಿ ಮಹಾತ್ಮನ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.ತನ್ನ ಶೂಟಿಂಗ್ ನಡುವೆಯೂ ಪಿಯು ಓದುತ್ತಿರುವ ಪ್ರತಿಭಾವಂತ ಹುಡುಗ ಸುನೀಲ್’ಗೆ ಮತ್ತಷ್ಟು ಅವಕಾಶಗಳು ದೊರೆಯಲಿ, ಆ ಭಗವಾನ್ ಶನಿ ಮಹಾತ್ಮನ ಆಶೀರ್ವಾದ ಅವನಿಗೆ ಸಿಗಲಿ ಎಂದು ನಾವು ಕೇಳಿಕೊಳ್ಳೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …
![]()
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…