ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ.
ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ ಯಶಸ್ಸು ಕಾಣುತ್ತಿದೆ.
ಈ ಸೀರಿಯಲ್ ಆರಂಭ ಆದಾಗಿನಿಂದಲೂ ಪ್ರತಿಹಂತದಲ್ಲೂ ಕುತೂಹಲವನ್ನು ಹುಟ್ಟುಸಿಕೊಂಡು ಬರುತ್ತಿದ್ದು, ಈಗಾಗಲೇ ಕಿರುತೆರೆಯಲ್ಲಿ ಯಶಸ್ವಿಯಾಗಿ 100 ಎಪಿಸೋಡ್ ಮುಗಿಸಿದೆ. ಉತ್ತಮ ನಿರೂಪಣೆ, ಕಥೆ, ಪಾತ್ರಗಳು ಈ ಧಾರಾವಾಹಿಯ ಪ್ಲಸ್ ಪಾಯಿಂಟ್ ಆಗಿದ್ದು ಇತರ ಧಾರಾವಾಹಿಗಳಿಗಿಂತ ‘ಶನಿ’ ಮೊದಲ ಸ್ಥಾನದಲ್ಲಿದೆ.
ಶನಿ ಧಾರಾವಾಹಿಯ ಪ್ರಮುಖ ಹೈಲೆಟ್ ಕರ್ಮ ಫಲಧಾತ, ನ್ಯಾಯದ ಅಧಿದೇವತೆ ಭಗವಾನ್ ಶನಿದೇವನ ಪಾತ್ರ.ಈ ಪಾತ್ರವನ್ನು ಮಾಡಿರುವುದು ಸುನಿಲ್ ಎಂಬ ಒಬ್ಬ ಅನಾಥ ಹುಡುಗ ಎಂದರೆ ನೀವ್ ನಂಬೋದಿಲ್ಲ.
ತನ್ನ ತೀಕ್ಷಣ ಕಣ್ಣಿನ ನೋಟ,ಮುಖದ ಗಾಂಬಿರ್ಯ,ಅಮೋಘ ಡೈಲಾಗ್ ಡೆಲಿವರಿ ಜೊತೆಗೆ ಆ ಶನಿ ಮಾಹಾತ್ಮನೆ ತನ್ನ ಮೈ ಮೇಲೆ ಬಂದಿರುವಂತೆ ಅಮೋಘ ಅಭಿನಯ ನೀಡಿ ಕಿರುತೆರೆ ಲೋಕದ ಜನರ ಮನಸ್ಸನ್ನು ಗೆದ್ದಿದ್ದಾನೆ ಈ ಸುನೀಲ್.
ಸಮಾರ್ಗದಲ್ಲಿ ನಡೆ, ಇಲ್ಲದಿದ್ದರೆ ನಾನೇ ನಿಮ್ಗೆ ಸನ್ಮಾರ್ಗ ತೋರಬೇಕಾದಿತು..ಇದು ಶನಿ ಧಾರಾವಾಹಿಯ ಹೈಲೆಟ್ ಡೈಲಾಗ್.
ತನ್ನ ಅಮೋಘ ನಟನೆಯಿಂದಲೇ ಕರುನಾಡ ಜನರ ಮನಸ್ಸನ್ನು ಗೆದ್ದಿರುವ ಸುನೀಲ್ ಬೆಳೆಯುತ್ತಿರುವುದು ಚಾಮರಾಜನಗರದ ಅನಾಥಾಶ್ರಮದಲ್ಲಿ. ಹೌದು ಸುನೀಲ್ ಚಿಕ್ಕಂದಿನಿಂದಲೂ ಬೆಳೆದಿದ್ದು ದೀನ ಬಂಧು ಮಕ್ಕಳ ಆಶ್ರಮದಲ್ಲಿ.ಈ ಆಶ್ರಮವನ್ನು ಕವಿ ಜಿ.ಎಸ್.ಶಿವರುದ್ರಪ್ಪನವರ ಮಗ ಚಾಮರಾಜನಗರದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ.ತನ್ನ ಹತ್ತನೆ ತರಗತಿವರಗಿನ ವಿಧ್ಯಾಭ್ಯಾಸವನ್ನು ಆಶ್ರಮದಿಂದಲೇ ಮುಗಿಸಿದ್ದಾನೆ.
ತುಂಬಾ ಚಿಕ್ಕಂದಿನಿಂದಲೇ ಅಭಿನಯದಲ್ಲಿ ಆಸಕ್ತಿ ಹೊಂದಿದ್ದ ಸುನೀಲ್ ಯಕ್ಷಗಾನವನ್ನು ಕೂಡ ಕಲಿತಿದ್ದರು.ಶನಿ ಧಾರಾವಾಹಿಯ ಆಡಿಶನ್ ತಂಡದ ಕಣ್ಣಿಗೆ ಬಿದ್ದ ಇವರ ಅಮೋಘ ಅಭಿನಯಕ್ಕೆ ಮನಸೋತ ಶನಿ ಧಾರವಾಹಿ ತಂಡದವರು ಧಾರಾವಾಹಿಯ ಮುಖ್ಯ ಪಾತ್ರ ಭಗವಾನ್ ಶನಿದೇವನ ಪಾತ್ರಕ್ಕೆ ಆಯ್ಕೆ ಮಾಡಿದ್ರು.
ಶನಿ ಪಾತ್ರದಾರಿ ಸುನೀಲ್ ಹೇಳುವ ಪ್ರಖಾರ ಶನಿ ದೇವರ ಅಷ್ಟೇನೂ ಗೊತ್ತಿಲ್ವಂತೆ.ಪಾತ್ರ ಮಾಡುತ್ತಲೇ ಶನಿ ಮಹಾತ್ಮನ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.ತನ್ನ ಶೂಟಿಂಗ್ ನಡುವೆಯೂ ಪಿಯು ಓದುತ್ತಿರುವ ಪ್ರತಿಭಾವಂತ ಹುಡುಗ ಸುನೀಲ್’ಗೆ ಮತ್ತಷ್ಟು ಅವಕಾಶಗಳು ದೊರೆಯಲಿ, ಆ ಭಗವಾನ್ ಶನಿ ಮಹಾತ್ಮನ ಆಶೀರ್ವಾದ ಅವನಿಗೆ ಸಿಗಲಿ ಎಂದು ನಾವು ಕೇಳಿಕೊಳ್ಳೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಅಗ್ಗದ ದರ ಮತ್ತು ಉತ್ತಮ ಫೀಚರ್ಸ್ ಮೂಲಕ ಜನಪ್ರಿಯತೆ ಗಳಿಸಿರುವ ಶಿಯೋಮಿ ಕಂಪೆನಿ ಸೆಪ್ಟೆಂಬರ್ನಲ್ಲಿ ಮತ್ತೊಂದು ಹೊಸ ಸ್ಮಾರ್ಟ್ಫೋನ್ನ್ನು ಬಿಡುಗಡೆ ಮಾಡಲಿದೆ. ಶಿಯೋಮಿ ಮಿಕ್ಸ್ ಸಿರೀಸ್ನ ಈ ನೂತನ ಸ್ಮಾರ್ಟ್ಫೋನ್ಗೆ ಮಿ ಮಿಕ್ಸ್ 4 ಎಂದು ಹೆಸರಿಡಲಾಗಿದೆ. ಇವೆಲ್ಲಕ್ಕಿಂತ ಈ ಹೊಸ ಫೋನ್ ಎಲ್ಲರ ಗಮನ ಸೆಳೆಯುತ್ತಿರುವುದು ನೂತನ ಮೊಬೈಲ್ಗೆ ನೀಡಲಾಗಿರುವ ಕ್ಯಾಮೆರಾ. ಹೌದು, ಮಿ ಮಿಕ್ಸ್ 4ನಲ್ಲಿ 108 ಮೆಗಾಪಿಕ್ಸೆಲ್ನ ಕ್ಯಾಮೆರಾ ನೀಡಲಾಗಿದೆಯಂತೆ. ಚೀನಾದ ವೆಬ್ಸೈಟ್ ವೀಬೊದಲ್ಲಿ ನೀಡಿರುವ ಮಾಹಿತಿಯ ಪ್ರಕಾರ,…
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.