News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ಮನರಂಜನೆ

ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

2247

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ.

ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ ಯಶಸ್ಸು ಕಾಣುತ್ತಿದೆ.

ಯಶಸ್ವಿ 100 ಎಪಿಸೋಡ್…

ಈ ಸೀರಿಯಲ್ ಆರಂಭ ಆದಾಗಿನಿಂದಲೂ ಪ್ರತಿಹಂತದಲ್ಲೂ ಕುತೂಹಲವನ್ನು ಹುಟ್ಟುಸಿಕೊಂಡು ಬರುತ್ತಿದ್ದು, ಈಗಾಗಲೇ ಕಿರುತೆರೆಯಲ್ಲಿ ಯಶಸ್ವಿಯಾಗಿ 100 ಎಪಿಸೋಡ್ ಮುಗಿಸಿದೆ. ಉತ್ತಮ ನಿರೂಪಣೆ, ಕಥೆ, ಪಾತ್ರಗಳು ಈ ಧಾರಾವಾಹಿಯ ಪ್ಲಸ್‌ ಪಾಯಿಂಟ್‌ ಆಗಿದ್ದು ಇತರ ಧಾರಾವಾಹಿಗಳಿಗಿಂತ ‘ಶನಿ’ ಮೊದಲ ಸ್ಥಾನದಲ್ಲಿದೆ.

ಶನಿ ಪಾತ್ರದಾರಿ ಅನಾಥ ಹುಡುಗ…

ಶನಿ ಧಾರಾವಾಹಿಯ ಪ್ರಮುಖ ಹೈಲೆಟ್ ಕರ್ಮ ಫಲಧಾತ, ನ್ಯಾಯದ ಅಧಿದೇವತೆ ಭಗವಾನ್ ಶನಿದೇವನ ಪಾತ್ರ.ಈ ಪಾತ್ರವನ್ನು ಮಾಡಿರುವುದು ಸುನಿಲ್ ಎಂಬ ಒಬ್ಬ ಅನಾಥ ಹುಡುಗ ಎಂದರೆ ನೀವ್ ನಂಬೋದಿಲ್ಲ.

ಅಮೋಘ ಅಭಿನಯ…

ತನ್ನ ತೀಕ್ಷಣ ಕಣ್ಣಿನ ನೋಟ,ಮುಖದ ಗಾಂಬಿರ್ಯ,ಅಮೋಘ ಡೈಲಾಗ್ ಡೆಲಿವರಿ ಜೊತೆಗೆ ಆ ಶನಿ ಮಾಹಾತ್ಮನೆ ತನ್ನ ಮೈ ಮೇಲೆ ಬಂದಿರುವಂತೆ ಅಮೋಘ ಅಭಿನಯ ನೀಡಿ ಕಿರುತೆರೆ ಲೋಕದ ಜನರ ಮನಸ್ಸನ್ನು ಗೆದ್ದಿದ್ದಾನೆ ಈ ಸುನೀಲ್.

ಸಮಾರ್ಗದಲ್ಲಿ ನಡೆ, ಇಲ್ಲದಿದ್ದರೆ ನಾನೇ ನಿಮ್ಗೆ ಸನ್ಮಾರ್ಗ ತೋರಬೇಕಾದಿತು..ಇದು ಶನಿ ಧಾರಾವಾಹಿಯ ಹೈಲೆಟ್ ಡೈಲಾಗ್.

ಸುನೀಲ್ ಬೆಳೆದಿದ್ದು ಈ ಅನಾಥಾಶ್ರಮದಲ್ಲಿ…

ತನ್ನ ಅಮೋಘ ನಟನೆಯಿಂದಲೇ ಕರುನಾಡ ಜನರ ಮನಸ್ಸನ್ನು ಗೆದ್ದಿರುವ ಸುನೀಲ್ ಬೆಳೆಯುತ್ತಿರುವುದು ಚಾಮರಾಜನಗರದ ಅನಾಥಾಶ್ರಮದಲ್ಲಿ. ಹೌದು ಸುನೀಲ್ ಚಿಕ್ಕಂದಿನಿಂದಲೂ ಬೆಳೆದಿದ್ದು ದೀನ ಬಂಧು ಮಕ್ಕಳ ಆಶ್ರಮದಲ್ಲಿ.ಈ ಆಶ್ರಮವನ್ನು ಕವಿ ಜಿ.ಎಸ್.ಶಿವರುದ್ರಪ್ಪನವರ ಮಗ ಚಾಮರಾಜನಗರದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ.ತನ್ನ ಹತ್ತನೆ ತರಗತಿವರಗಿನ ವಿಧ್ಯಾಭ್ಯಾಸವನ್ನು ಆಶ್ರಮದಿಂದಲೇ ಮುಗಿಸಿದ್ದಾನೆ.

ಯಕ್ಷಗಾನ…

ತುಂಬಾ ಚಿಕ್ಕಂದಿನಿಂದಲೇ ಅಭಿನಯದಲ್ಲಿ ಆಸಕ್ತಿ ಹೊಂದಿದ್ದ ಸುನೀಲ್ ಯಕ್ಷಗಾನವನ್ನು ಕೂಡ ಕಲಿತಿದ್ದರು.ಶನಿ ಧಾರಾವಾಹಿಯ ಆಡಿಶನ್ ತಂಡದ ಕಣ್ಣಿಗೆ ಬಿದ್ದ ಇವರ ಅಮೋಘ ಅಭಿನಯಕ್ಕೆ ಮನಸೋತ ಶನಿ ಧಾರವಾಹಿ ತಂಡದವರು ಧಾರಾವಾಹಿಯ ಮುಖ್ಯ ಪಾತ್ರ ಭಗವಾನ್ ಶನಿದೇವನ ಪಾತ್ರಕ್ಕೆ ಆಯ್ಕೆ ಮಾಡಿದ್ರು.

ಶನಿ ಮಹಾತ್ಮನ ಬಗ್ಗೆ ಗೊತ್ತಿಲ್ಲ…

ಶನಿ ಪಾತ್ರದಾರಿ ಸುನೀಲ್ ಹೇಳುವ ಪ್ರಖಾರ ಶನಿ ದೇವರ ಅಷ್ಟೇನೂ ಗೊತ್ತಿಲ್ವಂತೆ.ಪಾತ್ರ ಮಾಡುತ್ತಲೇ ಶನಿ ಮಹಾತ್ಮನ ಬಗ್ಗೆ ತಿಳಿದುಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.ತನ್ನ ಶೂಟಿಂಗ್ ನಡುವೆಯೂ ಪಿಯು ಓದುತ್ತಿರುವ ಪ್ರತಿಭಾವಂತ ಹುಡುಗ ಸುನೀಲ್’ಗೆ ಮತ್ತಷ್ಟು ಅವಕಾಶಗಳು ದೊರೆಯಲಿ, ಆ ಭಗವಾನ್ ಶನಿ ಮಹಾತ್ಮನ ಆಶೀರ್ವಾದ ಅವನಿಗೆ ಸಿಗಲಿ ಎಂದು ನಾವು ಕೇಳಿಕೊಳ್ಳೋಣ…

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ