ಬೆಂಗಳೂರು (ಜು.29): ಶಾಸಕರಸ್ಥಾನಕ್ಕೆರಾಜೀನಾಮೆನೀಡಿರುವ 14 ಶಾಸಕರನ್ನುನಿನ್ನೆಸ್ಪೀಕರ್ರಮೇಶ್ಕುಮಾರ್ಅನರ್ಹಗೊಳಿಸಿದ್ದರು. ಅದರಬೆನ್ನಲ್ಲೇಮುಂಬೈನಲ್ಲಿದ್ದ 6 ಅತೃಪ್ತಶಾಸಕರುನಿನ್ನೆಮಧ್ಯರಾತ್ರಿಬೆಂಗಳೂರುವಿಮಾನನಿಲ್ದಾಣಕ್ಕೆಬಂದಿಳಿದಿದ್ದಾರೆ.
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇದೇ ವೇಳೆ, ಕುಟುಂಬದವರೊಂದಿಗೆ ಟ್ರಿಪ್ ಹೋಗಿದ್ದ ಮಾಲೀಕಯ್ಯ ಗುತ್ತೇದಾರ್ ಮತ್ತು ಆರ್.ವಿ. ದೇಶಪಾಂಡೆ ಕೂಡ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅನರ್ಹ ಶಾಸಕರ ಜೊತೆ ಬಿಜೆಪಿ ನಾಯಕರಾದ ಆರ್. ಅಶೋಕ್ ಮತ್ತು ಅಶ್ವತ್ಥನಾರಾಯಣ ಕೂಡ ಬಂದಿಳಿದಿದ್ದಾರೆ.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಎಂಟಿಬಿ ನಾಗರಾಜ್, ನಾನು ಮುಂಬೈನಿಂದ ಒಬ್ಬನೇ ಬಂದೆ. ನ್ಯಾಯಾಂಗದ ಮೇಲೆ ನನಗೆ ನಂಬಿಕೆಯಿದೆ, ಹೋರಾಡ್ತೀನಿ. ಬಿಜೆಪಿಯ ಯಾವ ಶಾಸಕರೂ ನನ್ನನ್ನು ಸಂಪರ್ಕಿಸಿಲ್ಲ. ಸ್ಪೀಕರ್ ನೀಡಿರುವ ಆದೇಶದ ವಿರುದ್ಧ ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ. ಉಳಿದ ಶಾಸಕರು ಮುಂಬೈನಲ್ಲೇ ಇದ್ದಾರೆ. ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಕಳೆದ ವಾರ ಕಾಂಗ್ರೆಸ್ನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿಯ ಮಹೇಶ್ ಕುಮಟಹಳ್ಳಿ, ರಾಣೇಬೆನ್ನೂರು ಶಾಸಕ ಆರ್. ಶಂಕರ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ನಿನ್ನೆ ಮಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ್, – ಯಶವಂತಪುರದ ಎಸ್.ಟಿ. ಸೋಮಶೇಖರ್, ಕೆ.ಆರ್.ಪುರದ ಭೈರತಿ ಬಸವರಾಜು, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಆರ್.ಆರ್. ನಗರ ಶಾಸಕ ಮುನಿರತ್ನ, ಶಿವಾಜಿನಗರ ಶಾಸಕ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಡಾ. ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಮಹಾಲಕ್ಷ್ಮೀ ಲೇಔಟ್ನ ಕೆ. ಗೋಪಾಲಯ್ಯ, ಕೆ.ಆರ್. ಪೇಟೆಯ ನಾರಾಯಣಗೌಡ, ವಿಜಯನಗರದ ಆನಂದ್ ಸಿಂಗ್, ಹುಣಸೂರಿನ ಹೆಚ್. ವಿಶ್ವನಾಥ್, ಕಾಗೇವಾಡ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಅನರ್ಹಗೊಳಿಸಿದ್ದಾರೆ. ಅಲ್ಲಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮೈತ್ರಿ ಪಕ್ಷದ ಎಲ್ಲ ಶಾಸಕರನ್ನೂ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸುವ ಮೂಲಕ ಶಾಕ್ ನೀಡಿದ್ದಾರೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
‘ಬಿಗ್ ಬಾಸ್ ಕನ್ನಡ-7’ ಕಾರ್ಯಕ್ರಮದಲ್ಲಿ ಮೂರನೇ ವಾರದ ಎಲಿಮಿನೇಶನ್ ಆಗಿದೆ. ‘ಬಿಗ್ ಬಾಸ್’ ಮನೆಯಿಂದ ಗುರುಲಿಂಗ ಸ್ವಾಮೀಜಿ, ಆಂಕರ್ ಚೈತ್ರ ವಾಸುದೇವನ್ ಹೊರ ಬಂದ ಬಳಿಕ ಇದೀಗ ಚಿತ್ರನಟಿ ದುನಿಯಾ ರಶ್ಮಿ ಔಟ್ ಆಗಿದ್ದಾರೆ. ‘ದುನಿಯಾ’ದಂತಹ ಸೂಪರ್ ಹಿಟ್ ಚಿತ್ರವನ್ನು ನೀಡಿದ ಬಳಿಕ ರಶ್ಮಿ ಅಷ್ಟಾಗಿ ಸಿನಿ ಲೋಕದಲ್ಲಿ ಕಾಣಿಸಿಕೊಂಡಿರಲಿಲ್ಲ. ‘ಬಿಗ್ ಬಾಸ್’ ಮೂಲಕ ಅದೃಷ್ಟ ಪರೀಕ್ಷೆಗೆ ದುನಿಯಾ ರಶ್ಮಿಇಳಿದಿದ್ದರು. ‘ಬಿಗ್ ಬಾಸ್’ ಶೋದಿಂದ ಸ್ಯಾಂಡಲ್ ವುಡ್ ನಲ್ಲಿ ಭಾಗ್ಯದ ಬಾಗಿಲು ತೆರೆಯ ಬಹುದು ಎಂದು ದುನಿಯಾ…
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…