inspirational, ಆಧ್ಯಾತ್ಮ, ದೇವರು, ದೇವರು-ಧರ್ಮ

ಶಿವ, ನೆನಪಾಗುವೆ ನೀನು ಪ್ರತಿಕ್ಷಣವೂ

220

ಶಿವ, ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ..

ರೈತನೊಬ್ಬ ಉರುಳಿಗೆ ತಲೆಕೊಟ್ಟಾಗ…….‌,
ಗೃಹಿಣಿಯೊಬ್ಬಳು ಬೆಂಕಿಗೆ ಆಹುತಿಯಾದಾಗ………,
ಹಸುಳೆಯೊಂದು ಅತ್ಯಾಚಾರಕ್ಕೆ ಒಳಗಾದಾಗ………,
ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಾಗ……….,
ಶಾಲಾ ಮಕ್ಕಳು ಅಪಘಾತಕ್ಕೆ ಒಳಗಾದಾಗ…………‌‌,
ವೃದ್ಧರನ್ನು ಅನಾಥಾಶ್ರಮದಲ್ಲಿ ಕಂಡಾಗ………………,
ವಂಚಕರು ವಿಧಾನಸೌಧ – ಪಾರ್ಲಿಮೆಂಟಿನಲ್ಲಿ ಕುಳಿತಿರುವಾಗ…………,

ಸುಳ್ಳುಗಾರರು ಟಿವಿಯಲ್ಲಿ ಮಾತನಾಡುವಾಗ……‌..,
ಭ್ರಷ್ಟ ರು ಅಧಿಕಾರ ನಡೆಸುವಾಗ……….,
ಕಾಮಿಗಳು ಕಾವಿ ತೊಟ್ಟಿರುವಾಗ……….,
ಅನ್ನ ತಿನ್ನುವವರು ದೇಶದ್ರೋಹಿಗಳಾದಾಗ…….‌…‌,
ಮನುಷ್ಯನನ್ನು ಮುಟ್ಟಿಸಿಕೊಳ್ಳಲೇ ಅಸಹ್ಯ ಪಡುವವರಿರುವಾಗ………,
ಕುಡಿಯುವ ನೀರಿಗೆ ಹೊಡೆದಾಡುತ್ತಿರುವಾಗ…………,
ತಿನ್ನುವ ಆಹಾರಕ್ಕೆ ಕಲಬೆರಕೆ ಮಾಡುತ್ತಿರುವಾಗ……..,
ಸೈನಿಕರ ಪತ್ನಿಯರು ವಿಧವೆಯರಾಗುತ್ತಿರುವಾಗ…………,
ಮೋಸಗಾರರು ಜ್ಯೋತಿರ್ಲಿಂಗಗಳನ್ನು ಸುತ್ತುತ್ತಿರುವಾಗ……..,
ಕಪಟಿಗಳು ನಿನ್ನ ಹೆಸರಲ್ಲಿ ಉಪವಾಸ – ಜಾಗರಣೆ ಮಾಡುತ್ತಿರುವಾಗ…..‌,

ನೆನಪಾಗುವೆ ನೀನು ಶಿವ…….ಆದರೆ,………….
ಶತಶತಮಾನಗಳಿಂದ ಬರುವೆಯೆಂದು ನಂಬಿಸಿ ಎಂದಿಗೂ ಬಾರದ ಮೋಸಗಾರ ನೀನೋ…..
ಅಥವಾ,ನೀನು ಬರುವೆಯೆಂದು ಶತಶತಮಾನಗಳಿಂದ ಕಾಯುತ್ತಿರುವ ಮೂರ್ಖ ನಾನೋ……….

ಒಂದಂತು ನಿಜ…ನೀನು ಪ್ರತ್ಯಕ್ಷವಾಗುವವರೆಗೂ, ನಿನ್ನನ್ನು ನಂಬುವುದಿಲ್ಲ.
ನೀನು ಎಷ್ಟೇ ದೊಡ್ಡವನಾಗಿರು, ನೀನು ಎಷ್ಟೇ ಎತ್ತರದಲ್ಲಿರು, ನೀನು ಎಷ್ಟೇ ಶಕ್ತಿವಂತನಾಗಿರು,
ನೀನು ಎಷ್ಟೇ ಬುದ್ದಿವಂತನಾಗಿರು, ನನ್ನಂತ ಸಾಮಾನ್ಯನ ಕಷ್ಟ ಸುಖ ನೋವು ನಲಿವುಗಳಿಗೆ ಸ್ಪಂದಿಸಿ ಸರಳವಾಗಿ ಸಹಜವಾಗಿ ಮಾರ್ಗದರ್ಶನ ಮಾಡುವವರೆಗೂ ,

ನೀನೊಂದು ಭ್ರಮೆ, ನೀನೊಂದು ಕಲ್ಪನೆ, ನೀನೊಂದು ಶಿಲೆ, ನೀನೊಂದು ಗೊಂಬೆ, ನೀನೊಂದು ಭಾವ,
ನೀನೊಂದು ತರ್ಕ, ನೀನೊಂದು ಸಂಕೇತ, ನೀನೆಂದಿಗೂ ವಾಸ್ತವವಾಗಲಾರೆ.
ಎಚ್ಚರಿಕೆ…

( ಇದು ಕೇವಲ ಶಿವನಿಗೆ ಮಾತ್ರವಲ್ಲ. ಎಲ್ಲಾ ಧರ್ಮಗಳ ಎಲ್ಲಾ ದೇವರೆಂಬ ಭಾವಗಳಿಗೂ ಅನ್ವಯ.)
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ. ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ. ವಿವೇಕಾನಂದ. ಹೆಚ್.ಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

  • ಉಪಯುಕ್ತ ಮಾಹಿತಿ

    ಮಕರ ಸಂಕ್ರಾಂತಿ ಹಬ್ಬಕ್ಕೆ ಸರಿಯಾದ ಕ್ರಮದಲ್ಲಿ ಎಳ್ಳು ಬೆಲ್ಲ ಮಾಡುವ ವಿಧಾನ.

    ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…

  • ಜ್ಯೋತಿಷ್ಯ

    ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಒಡೆದ ತೆಂಗಿನಕಾಯಿ ಕೆಟ್ಟಿದ್ರೆ ಏನರ್ಥ ಗೊತ್ತಾ..?

    ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಆಟೋಮೊಬೈಲ್ಸ್

    ಕೇವಲ 1 ರೂ. ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ..!ತಿಳಿಯಲು ಈ ಲೇಖನ ಓದಿ ..

    ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…