ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….
ಈಗಿನ ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….
ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.