ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…