ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಪಾನ್ ವಾಹನ ತಯಾರಕ ಹೋಂಡಾ ತನ್ನ ಕ್ರೀಡಾ ಆವೃತಿಯ ಇ.ವಿ ಪರಿಕಲ್ಪನೆಯನ್ನು ಟೊಕಿಯೊ ಮೋಟಾರ್ ಪ್ರದರ್ಶನದಲ್ಲಿ ಬಹಿರಂಗಪಡಿಸಿದೆ. ಈ ವಾಹನವು ನಗರ ಇ.ವಿ ಪರಿಕಲ್ಪನೆಯನ್ನು ಆಧರಿಸಿದೆ
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…