News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

752

ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ವೃಷಭ:-

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

 

ಮಿಥುನ:

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಕಟಕ :-

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

 

 ಸಿಂಹ:

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ಕನ್ಯಾ :-

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ತುಲಾ:

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ವೃಶ್ಚಿಕ :-

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಧನಸ್ಸು:

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಮಕರ :-

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ಕುಂಭ:-

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಮೀನ:-

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

  • ಸುದ್ದಿ

    ತಿರುವನಂತಪುರಂ ದೇವಾಲಯದ ಏಳನೇ ಬಾಗಿಲಿನ ರಹಸ್ಯ ಇಲ್ಲಿದೆ ನೋಡಿ.

    ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…

  • ಆಧ್ಯಾತ್ಮ

    ಹೆಣ್ಣುಮಕ್ಕಳು ತಮ್ಮ ಪತಿಯ ಒಳಿತಗಾಗಿ ಮಾಡುವ ವ್ರತವಿದು!ಈ ವ್ರತದ ಹಿನ್ನಲೆ ಏನು ಗೊತ್ತಾ???

    ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.

  • ಉಪಯುಕ್ತ ಮಾಹಿತಿ

    ಅಪ್ಪಿ ತಪ್ಪಿಯೂ ಇಂತಹ ಸಮಯದಲ್ಲಿ ಕಲ್ಲಂಗಡಿ ಹಣ್ಣನ್ನು ತಿನ್ನಬೇಡಿ..!

    ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…