ಉಪಯುಕ್ತ ಮಾಹಿತಿ

ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

1396

ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ..

ಬ್ಲಾಗಿಂಗ್

ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ ಕ್ರಿಯೆ. ಬ್ಲಾಗ್ ಬರೆಯುವ ವ್ಯಕ್ತಿಯೇ ಬ್ಲಾಗರ್.  ಬ್ಲಾಗಿಂಗ್ ಕೂಡ ಉತ್ತಮ ಆದಾಯ ತಂದುಕೊಡಬಲ್ಲ ವ್ಯವಹಾರ ಆಗಿದೆ. ಒಂದು ರೂಪಾಯಿಯ ಖರ್ಚು ಇಲ್ಲದೆ ನೀವು ಬ್ಲಾಗ್ ಖಾತೆಯನ್ನು ತೆರೆಯಬಹುದು. ಬ್ಲಾಗಿಂಗ್ ಮೂಲಕ ಹೆಚ್ಚು ಹಣ ಸಂಪಾದಿಸಬೇಕೆಂದರೆ ಹೆಚ್ಚು ತಾಳ್ಮೆ, ಕಠಿಣ ಪರಿಶ್ರಮ ಬೇಕಾಗುತ್ತದೆ.

ಯೂಟ್ಯೂಬ್ ಚಾನಲ್

ಇನ್ನು ಟ್ಯಾಲೆಂಟ್ ಒಂದಿದ್ದರೆ ಶೂನ್ಯ ಬಂಡವಾಳದಲ್ಲಿ ದುಡಿಯಬಹುದಾದ ದಾರಿ ಇಲ್ಲಿದೆ ನೋಡಿ.. ಯೂಟ್ಯೂಬ್ ಚಾನಲ್ ಗಳಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಹಣ ಸಂಪಾದಿಸಬಹುದಾಗಿದೆ.. ಇದಕ್ಕೆ ಯಾವುದೇ ರೀತಿಯಾದ ಹಣವನ್ನು ಕೊಡಬೇಕಾಗಿಲ್ಲ.. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡರೆ ಸಾಕು..

ಟೈಲರಿಂಗ್

ನಿಮ್ಮ 1 ತಿಂಗಳ ಸಮಯವನ್ನು ಟೈಲರಿಂಗ್ ಕಲಿಯುವುದಕ್ಕೆ ವ್ಯಯಿಸಿದರೆ ಸಾಕು.. ಇದರಿಂದ ಯಾವ ಇಂಜಿನಿಯರ್ ಗೂ ಕಡಿಮೆ ಇಲ್ಲದಂತೆ ದುಡಿಯಬಹುದು.. ಹೌದು ಇತ್ತೀಚೆಗಿನ ದಿನಗಳಲ್ಲಿ ಟೈಲರಿಂಗ್ ಒಂದು ಬಹು ಬೇಡಿಕೆಯ ಉದ್ಯೋಗವಾಗಿದೆ.. ಏಕೆಂದರೆ ಜನರು ಹೊಸ ಬಟ್ಟೆ ಗಳನ್ನು ಖರೀದಿಸಲೇ ಬೇಕು.. ಬಟ್ಟೆಯನ್ನು ಹೊಲಿಸಲೇ ಬೇಕು.. ಹೆಣ್ಣು ಮಕ್ಕಳ ಉಡುಗೆಗಳ ಹೊಲಿಗೆಯನ್ನು ಕಲಿತರೆ ಒಳ್ಳೆಯ ಆದಾಯವನ್ನು ಪಡೆಯಬಹುದಾಗಿದೆ.. ಇದಕ್ಕೆ ಒಂದು ಟೈಲರಿಂಗ್ ಮೆಷಿನ್ ಗಾಗಿ ಒಂದು 5 ಸಾವಿರ ಬಂಡವಾಳವಿದ್ದರೆ ಸಾಕು..

ಬ್ಯೂಟಿಷಿಯನ್

ಸೌಂದರ್ಯಪ್ರಜ್ಞೆ ಇರುವ ಇಂದಿನ ದಿನಗಳಲ್ಲಿ ಬ್ಯೂಟಿಷಿಯನ್ ಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಮನೆ ಬಾಗಿಲಿಗೆ ಸೇವೆ ನೀಡಿದರೆ ಇದರಿಂದ ಉತ್ತಮ ಲಾಭವನ್ನೆ ಪಡೆಯಬಹುದಾಗಿದೆ. ಬ್ಯೂಟಿಷಿಯನ್ ಜ್ಞಾನ ಹೊಂದಿರುವವರು ಈ ಉದ್ಯೋಗದಿಂದ ಹೆಚ್ಚೆಚ್ಚು ಆದಾಯವನ್ನು ಗಳಿಸಬಹುದಾಗಿದೆ. ಇಂತವರು ಮನೆ ಬಾಗಿಲಿಗೆ ಹೋಗಿ ಸೆವೆಯನ್ನು ಒದಗಿಸಲು ಸಿದ್ದರಾದಲ್ಲಿ ದೊಡ್ಡ ಪ್ರಮಾಣದಲ್ಲಿ ಲಾಭ ಪಡೆಯಲು ಸಾಧ್ಯ.

ಜ್ಯೂಸ್ ಸೆಂಟರ್

ಹೊರಗೆ ದುಡಿಯುವ ಜನರು ಹಸಿವು ಬಾಯಾರಿಕೆಗೆ ಮೊದಲು ಮೊರೆ ಹೋಗುವುದೇ ಜ್ಯೂಸ್ ಗಳಿಗೆ.. ಅದರಲ್ಲೂ ಆರೋಗ್ಯದ ಮೇಲೆ ಅತಿ ಹೆಚ್ಚು ಗಮನ ನೀಡುವ ಕಾಲವಿದು.. ಹಣ್ಣಿನ ಜ್ಯೂಸ್ ಸೆಂಟರ್ ಅನ್ನು ಇಟ್ಟು ಕ್ವಾಲಿಟಿ ಮತ್ತು ರುಚಿಯನ್ನು ಕಾಪಾಡಿಕೊಂಡರೆ ಒಳ್ಳೆಯ ಆದಾಯ ಗಳಿಸಬಹುದಾಗಿದೆ..

ಜೆರಾಕ್ಸ್ ಅಂಗಡಿ

ಇದು ಕೂಡ ಸ್ವಂತ ಉದ್ಯೋಗ ಮಾಡಲು ಒಂದು ಅತ್ಯುತ್ತಮ ವಿಧಾನ ವಾಗಿದೆ.. ನಿಮ್ಮ ಊರಿನ ಯಾವುದಾದರು ಶಾಲಾ ಕಾಲೇಜು ಇರುವ ಸ್ಥಳದಲ್ಲಿ ಕ್ಸೆರಾಕ್ಸ್ ಹಾಗೂ ಸ್ಟೇಷನರಿ ಅಂಗಡಿ ಇಟ್ಟರೆ ಒಳ್ಳೆಯ ಲಾಭ ಗಳಿಸಬಹುದು.. ಕಾಲೇಜುಗಳಲ್ಲಿ ಯಾವ ಮಟ್ಟಕ್ಕೆ ಜೆರಾಕ್ಸ್ ಮಾಡಿಸಲು ಕೊಡುತ್ತಾರೆ ಎಂಬುದು ಎಲ್ಲರಿಗೂ ತಿಳಿದೇ ಇದೆ..

ಟ್ಯೂಷನ್ ಸೆಂಟರ್

ಉದ್ಯೋಗ ಮಾಡಬಯಸುವವರು ವಿದ್ಯಾವಂತರಾಗಿದ್ದರೆ ಸಾಕು..‌ ಈ ಕೆಲಸವನ್ನು ನಿರಾಯಾಸವಾಗಿ ಮಾಡಬಹುದು.. ಇದಕ್ಕೆ ಒಂದು ಪುಟ್ಟ ಹಾಲ್ ಅಥವಾ ರೂಮ್ ಇದ್ದರೇ ಸಾಕು.. ಬಂಡವಾಳವೇ ಬೇಕಾಗಿಲ್ಲ.. ಇದಕ್ಕೆ ನೀವು ಬುದ್ದಿವಂತರಾಗಿದ್ದರೆ ಸಾಕು.. ಜೊತೆಗೆ ನಿಮ್ಮ ಕೆಲಸವನ್ನು ಜಾಹಿರಾತು ಮಾಡಿ ಅತಿ ಹೆಚ್ಚು ಆದಾಯ ಪಡೆಯಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…

  • ವಿಚಿತ್ರ ಆದರೂ ಸತ್ಯ

    ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು

  • ಸುದ್ದಿ

    ಈ ಕಿರಾತಕನೆ ನಮ್ಮ ಸೈನಿಕರನ್ನು ಕೊಂದವನು…ಇವನು ವಿಡಿಯೋದಲ್ಲಿ ಹೇಳಿದ್ದೇನು ಗೊತ್ತಾ?

    ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್​ಪಿಎಫ್​ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್​-ಇ-ಮೊಹಮ್ಮದ್​ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್​ ಅಲಿಯಾಸ್​ ವಕಾಸ್​ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…

  • ಸುದ್ದಿ

    ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಹಣ ಹಂಚಿದ್ರಾ ಜೆಡಿಎಸ್ ಮುಖಂಡ..!?

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‍ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…