ಉದ್ಯೋಗ

ಶ್ರೀಮಂತರಾಗಲು ಭಾರತದಲ್ಲಿವೆ ಅತೀ ಹೆಚ್ಚು ಹಣ ಪಡೆಯುವ ಕೆಲಸಗಳು..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

790

ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ. ಆದರೆ ಈ ಭೂಮಿಯಲ್ಲಿ ಹುಟ್ಟಿರುವ ಯಾವುದೇ ವ್ಯಕ್ತಿಗೆ ಹಣವಂತನಾಗುವ ಸಮಾನ ಅವಕಾಶವಿದೆ. ಇದಕ್ಕೆ ಸತತ ಪರಿಶ್ರಮ ಹಾಗೂ ಹಣಗಳಿಕೆಯ ಹಂತವನ್ನು ಮೆಟ್ಟಿಲು ಮೆಟ್ಟಿ ಲಾಗಿ ಏರಲು ಉತ್ತಮ ಉದ್ಯೋಗದ ನೆರವು ಬೇಕು. ಇದು ಸ್ವ ಉದ್ಯೊಗವೂ ಆಗಬಹುದು ಅಥವಾ ಅತಿಹೆಚ್ಚು ಗಳಿಕೆ ನೀಡುವ ಇತರ ಉದ್ಯೋಗವೂ ಆಗಬಹುದು.

ಅಂದ ಮಾತ್ರಕ್ಕೆ ಉದ್ಯೋಗ ಮಾಡುವ ಎಲ್ಲರೂ ಭಾರೀ ಹಣ ಮಾಡುತ್ತಾರೆ ಎಂದು ಹೇಳುವಂತಿಲ್ಲ. ಈ ಉದ್ಯೋಗವನ್ನು ಮಾಡುವವರಿಗೆ ಅತಿಹೆಚ್ಚು ವೇತನ ನೀಡಬೇಕಾದರೆ ಬೇರಯವ ರಲ್ಲಿ ಇರದ ಬಹಳಷ್ಟು ಗುಣಗಳು, ಕೌಶಲ್ಯ ಹಾಗೂ ಅಪಾರವಾದ ಮಾಹಿತಿ ಇವರಲ್ಲಿರಬೇಕಾಗುತ್ತದೆ. ಅಷ್ಟೇ ಅಲ್ಲ, ಇದನ್ನು ಪಡೆದಿರುವುದು ಉತ್ತಮ ವಿಶ್ವವಿದ್ಯಾಲಯದಲ್ಲಿ ಎಂದು ಪ್ರಮಾಣಿ ಸಲೂಬೇಕಾಗುತ್ತದೆ. ಬೆಂಗಳೂರಿನಲ್ಲಿ ಅತಿಹೆಚ್ಚು ಸಂಬಳ ಪಾವತಿಸುವ ಕಂಪನಿಗಳು ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿಯಾಗ ಬಹುದು. (ವೇತನವನ್ನು ವಾರ್ಷಿಕ ರೂ. ಗಳಲ್ಲಿ ನೀಡಲಾಗಿದೆ

ವೃತ್ತಿಪರ ಕಾರ್ಯನಿರ್ವಾಹಕರು  :-                                                                                                                                                   ವೃತ್ತಿಪರ ಕಾರ್ಯನಿರ್ವಾಹಕರನ್ನು ಸಂಸ್ಥೆ/ ಕಂಪನಿಗಳ ಆತ್ಮ ಎಂದು ಕರೆಯಬಹುದು. ಸಂಸ್ಥೆ ನಿರ್ವಹಿಸಬೇಕಾದ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ನೋಡಿಕೊಳ್ಳುವುದು ಇವರ ಕಾಯಕ. ಇದಕ್ಕೆ ಪ್ರಾರಂಭಿಕ ಹಂತದಿಂದಲೇ ಕಠಿಣ ಪರಿಶ್ರಮ ಅಗತ್ಯ. ಒಂದು ಬಾರಿ ಪ್ರಾರಂಭಿಕ ಹಂತ ದಾಟಿದ ಬಳಿಕ ಮತ್ತೆ ಹಿಂದಿರುಗಿ ನೋಡುವ ಅವಶ್ಯಕತೆಯೇ ಇಲ್ಲ. ಈ ವೃತ್ತಿಯಲ್ಲಿ ಹೆಚ್ಚು ಹೆಚ್ಚು ಪರಿಣಿತಿ ಪಡೆದಂತೆ ಹೆಚ್ಚು ಹೆಚ್ಚು ವೇತನವನ್ನು ನಿರೀಕ್ಷಿಸಬಹುದು. ಪ್ರಾರಂಭಿಕ ಹಂತ – ರೂ. 3,೦೦,೦೦೦, ಮಧ್ಯಮ ಹಂತ – ರೂ. 25,೦೦,೦೦೦, ಅನುಭವಿ ಹಂತ- ರೂ. 8೦,೦೦,೦೦೦

ಬ್ಯಾಂಕ್ ಹೂಡಿಕೆದಾರ:

ಈ ವೃತ್ತಿಯಲ್ಲಿರುವವರು ಬ್ಯಾಂಕ್ ಹಾಗೂ ಇತರ ಹಣಕಾಸು ಸಂಸ್ಥೆಗಳಿಗೆ ಹಣ ಪಡೆಯುವಿಕೆ ಹಾಗೂ ಹೂಡಿಕೆಯ ಬಗ್ಗೆ ಸಲಹೆ ನೀಡುತ್ತಾರೆ. ಇವರು ಸತತವಾಗಿ ಮಾರುಕಟ್ಟೆಯ ಏರಿಳಿತ ಗಳನ್ನು ಅಭ್ಯಸಿಸುತ್ತಾ ಗ್ರಾಹಕರ ಮನೋಭಾವವನ್ನೂ ಪರಿಗಣಿಸಿ ಸಂಸ್ಥೆಗೆ ಲಾಭ ತರುವಂತಹ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇದೇ ಕಾರಣಕ್ಕೆ ಇವರಿಗೆ “Money Man” ಎಂಬ ಅನ್ವರ್ಥ ನಾಮವನ್ನೂ ನೀಡಲಾಗಿದೆ. ಪ್ರಾರಂಭಿಕ ಹಂತ- ರೂ. 12,೦೦,೦೦೦, ಮಧ್ಯಮ ಹಂತ – ರೂ. 3೦,೦೦,೦೦೦, ಅನುಭವಿ ಹಂತ- ರೂ.5೦,೦೦,೦೦೦+

ಚಾರ್ಟರ್ಡ್ ಅಕೌಂಟೆಂಟ್:

ಇವರು ಒಂದುಸಂಸ್ಥೆಯ ಲೆಕ್ಕಪತ್ರ ಹಾಗೂ ವ್ಯಾಪಾರದ ಮೇಲೆ ಹಿಡಿತವನ್ನಿರಿಸಿ ಕೊಂಡಿರುತ್ತಾರೆ. ಇವರು ತಮ್ಮ ಕೆಲಸದ ಬಗ್ಗೆ ಜಾಗರೂಕರಾಗಿದ್ದು, ಸಂಸ್ಥೆಯ ಹಣದ ವಿಲೇವಾರಿ ಹಾಗೂ ಆದಾಯದ ಬಗ್ಗೆ ವಿವರಗಳನ್ನು ನೀಡುವಂತಿರಬೇಕು ಹಾಗೂ ಸದಾ ಉತ್ತಮವಾಗಿ ಕಾಣಿಸಿಕೊಳ್ಳುವಂತಿರಬೇಕು. ಈ ವೃತ್ತಿ ಭಾರತದಲ್ಲಿ ಅತಿ ಗೌರವಾತ ಹಾಗೂ ಹೆಚ್ಚಿನ ಆದಾಯ ತರುವಂತದ್ದಾಗಿದೆ. ಪ್ರಾರಂಭಿಕ ಹಂತ – ರೂ. 5,5೦,೦೦೦, ಮಧ್ಯಮ ಹಂತ – ರೂ. 12,8೦,೦೦೦, ಅನುಭವಿ ಹಂತ – ರೂ. 25,7೦,೦೦೦

ತೈಲ ಮತ್ತು ನೈಸರ್ಗಿಕ ಅನಿಲ ವಿಭಾಗದ ವೃತ್ತಿಪರರು:

ಈ ವಿಭಾಗ ಇದುವರೆಗೆ ಎಂದೂ ಬತ್ತದ ಲಾಭದ ವೃತ್ತಿ ಎಂದು ಪರಿಗಣಿಸಲ್ಪಟ್ಟಿದೆ. ಈ ವಿಭಾಗದಲ್ಲಿರುವ ಕೆಲವು ವೃತ್ತಿಗಳು ಹೆಚ್ಚಿನ ವೇತನ ನೀಡುತ್ತವೆ. ಉದಾಹರಣೆಗೆ ಭೂ ಗರ್ಭ ಶಾಸ್ತ್ರಜ್ಞ, ಸಾಗರ ಅಭಿಯಂತರ ಇತ್ಯಾದಿ. ಅನುಭವಿ ಹಂತ – ರೂ. 15-2೦ ಲಕ್ಷ ನಿವ್ವಳ ಹಾಗೂ ಸಂಸ್ಥೆಯಿಂದ ಸಿಗುವ ಎಲ್ಲಾ ಸವಲತ್ತುಗಳು

ವಾಣಿಜ್ಯ ವಿಶ್ಲೇಷಕರು (ಬಿಸಿನೆಸ್ ಅನಾಲಿಸ್ಟ್):

ಇಂದು ಭಾರತದಲ್ಲಿಯೂ ವಾಣಿಜ್ಯ ವಹಿವಾಟು ಅತ್ಯಂತ ಪೈಪೋಟಿ ಹೊಂದಿದ್ದು, ಈ ವೃತ್ತಿಯಲ್ಲಿರು ವವರಿಗೆ ಪೈಪೋಟಿಯನ್ನು ಎದುರಿಸುವುದು ಹೇಗೆ ಎಂಬ ಸವಾಲನ್ನು ಎದುರಿಸಬೇಕಾಗುತ್ತದೆ. ಈ ವೃತ್ತಿಗೆಅತಿ ಹೆಚ್ಚು ಬುದ್ದಿ ಚಾಣಾಕ್ಷರು ಹಾಗೂ ತಾರ್ಕಿಕವಾಗಿ ಯೋಚಿಸುವ ವ್ಯಕ್ತಿಗಳ ಅಗತ್ಯವಿದೆ. ಈ ವೃತ್ತಿಯಲ್ಲಿರುವವರು ವಾಣಿಜ್ಯದ ಅಂಕಿ ಅಂಶಗಳನ್ನು ಗಣಿತದ ಸೂತ್ರಗಳ ಮೂಲಕ ವಿವರಿಸಬಲ್ಲವರಾಗಿರಬೇಕು ಹಾಗೂ ನಿತ್ಯವೂ ಬದಲಾಗುವ ತಂತ್ರಜ್ಞಾನವನ್ನು ತಮ್ಮ ವಾಣಿಜ್ಯ ವಹಿವಾಟಿನ ಏಳಿಗೆಗೆ ಹೇಗೆ ಬಳಸಿಕೊಳ್ಳ ಬಹುದು ಎಂಬುದನ್ನು ಎಲ್ಲರಿ ಗಿಂತ ಮೊದಲು ಅರಿತು ಅಳವಡಿಸಿ ಕೊಳ್ಳುವುದು ಇವರ ವೃತ್ತಿಯ ಪ್ರಮುಖಸವಾಲಾಗಿದೆ. ಅಂದಾಜು ವೇತನ: ಪ್ರಾರಂಭಿಕ ಹಂತ: ರೂ. 6,೦೦,೦೦೦

ವೈದ್ಯಕೀಯ ವೃತ್ತಿಪರರು:

ಈ ವೃತ್ತಿಯಲ್ಲಿ ಹಿಂಜರಿತ ಎಂಬುದೇ ಎಲ್ಲ. ಎಲ್ಲಿಯವರೆಗೆ ಮನುಷ್ಯರು ಇರುತ್ತಾರೋ ಅಲ್ಲಿಯವರೆಗೆ ಈ ವೃತ್ತಿಯಲ್ಲಿ ಗಳಿಕೆ ಇದ್ದೇ ಇರುತ್ತದೆ. ವಿಶ್ವದ ಅತ್ಯಂತ ಗೌರವಾನ್ವಿತ ಹಾಗೂ ಆದ್ಯತೆಯ ವೃತ್ತಿಯಾದ ವೈದ್ಯ ವೃತ್ತಿಯಲ್ಲಿ ಜನರು ವೈದ್ಯೋ ನಾರಾಯಣಃ ಹರಿ ಎಂದೇ ಪರಿಗಣಿಸುತ್ತಾರೆ. ಈ ವೃತ್ತಿಯಲ್ಲಿ ಪ್ರಾರಂಭಿಕ ಹಂತದಲ್ಲಿ ವೇತನ ಕಡಿಮೆ ಇದ್ದರೂ ದಿನಗಳೆದಂತೆ ವೇತನವೂ ಏರುತ್ತಾ ಹೋಗುತ್ತದೆ. ಸಾಮಾನ್ಯ ನೈಪುಣ್ಯತೆ – ರೂ. 4,8೦,೦೦೦, ಸಾಮಾನ್ಯ ಶಸ್ತ್ರ ಚಿಕಿತ್ಸಕ- ರೂ. 8,1೦,೦೦೦, ವೃತ್ತಿಪರ ವೈದ್ಯ- ರೂ.17,೦೦,೦೦೦

ವೈಮಾನಿಕ ವೃತ್ತಿ :

ಈ ವೃತ್ತಿಯಲ್ಲಿರುವವರಿಗೆ ಆದಾಯದ ಮಿತಿ ಆಗಸವೇ ಸರಿ. ಈ ವೃತ್ತಿಯಲ್ಲಿ ನೈಪುಣ್ಯತೆ ಪಡೆದವರು ವಾರ್ಷಿಕ ಇಪ್ಪತ್ತು ಲಕ್ಷದಷ್ಟು ವೇತನ ಪಡೆಯುತ್ತಾರೆ. ಸರಾಸರಿ ವೇತನ: ಕಮರ್ಷಿಯಲ್ ಪೈಲಟ್: ರೂ. 2೦,೦೦,೦೦೦, ಹೆಲಿಕಾಪ್ಟರ್ ಪೈಲಟ್- ರೂ. 18,೦೦,೦೦೦, ವಿಮಾನ ದುರಸ್ತಿ ಸಿಬ್ಬಂದಿ- ರೂ. 9,8೦,೦೦೦

ಕಾನೂನು ವೃತ್ತಿಪರರು :

ಖ್ಯಾತ ವಕೀಲರಿಗೆ ಉಚ್ಛಮಟ್ಟದ ನ್ಯಾಯಾಧೀಶರಾಗುವ ಅವಕಾಶ ತಾನೇ ತಾನಾಗಿ ಒದಗಿ ಬಂದಾಗ ಇದನ್ನು ಹಲವರು ನಿರಾಕರಿಸಿದ್ದಾರೆ. ಏಕೆಂದರೆ ವೃತ್ತಿಪರ ವಕೀಲರಾಗಿ ಗಳಿಸುದಷ್ಟು ವೇತನ ಉಚ್ಛನ್ಯಾಯಾಧೀಶರಿಗೆ ದೊರಕುವುದಿಲ್ಲ. ಇದು ವಾಸ್ತವ. ವೃತ್ತಿಪರ ವಕೀಲರಾಗಬೇಕಾದರೆ ಉನ್ನತ ಶಿಕ್ಷಣ, ಅಪಾರ ತಾಳ್ಮೆ, ಹಾಗೂ ಅದ್ಭುತ ವಾಕ್ಚತುರತೆಯ ಅಗತ್ಯವಿದೆ. ಈ ವೃತ್ತಿಯಲ್ಲಿ ಪಳಗುತ್ತಾ ಹೋದಂತೆ ಪ್ರತಿವಾದಕ್ಕೂ ಹೆಚ್ಚು ಹೆಚ್ಚಿನ ವೇತನವನ್ನು ನಿರೀಕ್ಷಿಸಬಹುದು. ಸರಾಸರಿ ವೇತನ: ಕಾರ್ಪೋರೇಟ್ (ಸಂಸ್ಥೆಗೆ ಮೀಸಲಾದ) ವಕೀಲರು- 6,1೦,೦೦೦, ಹಿರಿಯ ಅಟಾರ್ನಿ – 9,5೦,೦೦೦,

ಮಾರ್ಕೆಟಿಂಗ್ (ಮಾರುಕಟ್ಟೆ ಪ್ರವೀಣ):

ಯಾವುದೇ ವಹಿವಾಟಿನಲ್ಲಿ ಉತ್ಪನ್ನ ಅಥವಾ ಸೇವೆ ಮಾರಾಟ ವಾಗಿ ಹೋದಾಗ ಮಾತ್ರವೇ ಲಾಭ ಪಡೆಯಲು ಸಾಧ್ಯ. ಈ ವೃತ್ತಿಯಲ್ಲಿರುವವರು ಗ್ರಾಹಕರ ಅಂತಃಕರಣವನ್ನು ಅರಿತು ಪ್ರಲೋಭನೆಗಳನ್ನು ಒಡ್ಡಿ ಮಾರಾಟವನ್ನು ಹೆಚ್ಚಿಸಬೇಕಾಗುತ್ತದೆ. ಈ ತಂತ್ರಗಳು ಫಲ ಡಿದರೆ ಹೆಚ್ಚಿನ ವೇತನ ಮಾತ್ರವಲ್ಲ, ಸಂಸ್ಥೆಯ ಉನ್ನತ ಹುದ್ದೆಗಳನ್ನೂ ಪಡೆಯಲು ಸಾಧ್ಯ. ಇದಕ್ಕಾಗಿ ಮಾರುಕಟ್ಟೆಯ ಅಂತರಾಳವನ್ನು ಅರಿತು ಗ್ರಾಹಕರು ಈ ಉತ್ಪನ್ನಗಳಿಗೆ ಒಲವು ನೀಡುವಂತೆ ಉತ್ಪನ್ನ ಅಥವಾ ಸೇವೆಗಳನ್ನು ಬದಲಾವಣೆಗೊಳಪಡಿಸುವುದು ಸಹಾ ಇವರಿಗೆ ಕಾರ್ಯಗತ ವಾಗಿರಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 1,5೦,೦೦೦, ಮಧ್ಯಮ ಹಂತ- ರೂ. 5,೦೦,೦೦೦, ಅನುಭವಿ ಹಂತರೂ. 1೦,೦೦,೦೦೦+

 ಮಾಹಿತಿ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್ ಅಭಿಯಂತರರು:

ಇದೊಂದು ನಿತ್ಯಹರಿದ್ವರ್ಣದ ಉದ್ಯೋಗವಾಗಿದ್ದು ಹೆಚ್ಚಿನ ಆದಾಯವನ್ನು ಗಳಿಸಬಹುದು. ಇದಕ್ಕಾಗಿ ಕಂಪ್ಯೂಟರುಗಳ ಬಗ್ಗೆ ಆಳವಾದ ಅಧ್ಯಯನ ಹಾಗೂ ಕಂಪ್ಯೂಟರ್ ಭಾಷೇ ಅರ್ಥಮಾಡಿಕೊಳ್ಳುವ ಹಾಗೂ ಅಗತ್ಯಕ್ಕೆ ತಕ್ಕಂತೆ ಬರೆಯುವ ನೈಪುಣ್ಯತೆಯನ್ನು ಪಡೆಯಬೇಕಾಗುತ್ತದೆ. ಈ ವೃತ್ತಿಯಲ್ಲಿರುವವರು ಹೊಸ ಪ್ರೋಗ್ರಾಂಗಳನ್ನು ವಿನ್ಯಾಸಗೊಳಿಸುವ, ಹೊಸ ವ್ಯವಸ್ಥೆಯನ್ನು ಪ್ರತಿಷ್ಠಾಪಿಸುವ ಹಾಗೂ ನಿರ್ವಹಿಸುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 3,5೦,೦೦೦, ಮಧ್ಯಮ ಹಂತ- ರೂ. 8,3೦,೦೦೦, ಅನುಭವಿ ಹಂತ ರೂ. 15,5೦,೦೦೦

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…

  • ಸುದ್ದಿ

    ಭಾರತದ ಈ ಹಳ್ಳಿಯಲ್ಲಿರುವ ಎಲ್ಲರೂ ಕೋಟ್ಯಾಧಿಪತಿಗಳೇ..!ಇದು ಏಷ್ಯಾದ ಕೋಟ್ಯಾಧಿಪತಿಗಳ ಹಳ್ಳಿ…!

    ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…