ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ. ಆದರೆ ಈ ಭೂಮಿಯಲ್ಲಿ ಹುಟ್ಟಿರುವ ಯಾವುದೇ ವ್ಯಕ್ತಿಗೆ ಹಣವಂತನಾಗುವ ಸಮಾನ ಅವಕಾಶವಿದೆ. ಇದಕ್ಕೆ ಸತತ ಪರಿಶ್ರಮ ಹಾಗೂ ಹಣಗಳಿಕೆಯ ಹಂತವನ್ನು ಮೆಟ್ಟಿಲು ಮೆಟ್ಟಿ ಲಾಗಿ ಏರಲು ಉತ್ತಮ ಉದ್ಯೋಗದ ನೆರವು ಬೇಕು. ಇದು ಸ್ವ ಉದ್ಯೊಗವೂ ಆಗಬಹುದು ಅಥವಾ ಅತಿಹೆಚ್ಚು ಗಳಿಕೆ ನೀಡುವ ಇತರ ಉದ್ಯೋಗವೂ ಆಗಬಹುದು.

ಅಂದ ಮಾತ್ರಕ್ಕೆ ಉದ್ಯೋಗ ಮಾಡುವ ಎಲ್ಲರೂ ಭಾರೀ ಹಣ ಮಾಡುತ್ತಾರೆ ಎಂದು ಹೇಳುವಂತಿಲ್ಲ. ಈ ಉದ್ಯೋಗವನ್ನು ಮಾಡುವವರಿಗೆ ಅತಿಹೆಚ್ಚು ವೇತನ ನೀಡಬೇಕಾದರೆ ಬೇರಯವ ರಲ್ಲಿ ಇರದ ಬಹಳಷ್ಟು ಗುಣಗಳು, ಕೌಶಲ್ಯ ಹಾಗೂ ಅಪಾರವಾದ ಮಾಹಿತಿ ಇವರಲ್ಲಿರಬೇಕಾಗುತ್ತದೆ. ಅಷ್ಟೇ ಅಲ್ಲ, ಇದನ್ನು ಪಡೆದಿರುವುದು ಉತ್ತಮ ವಿಶ್ವವಿದ್ಯಾಲಯದಲ್ಲಿ ಎಂದು ಪ್ರಮಾಣಿ ಸಲೂಬೇಕಾಗುತ್ತದೆ. ಬೆಂಗಳೂರಿನಲ್ಲಿ ಅತಿಹೆಚ್ಚು ಸಂಬಳ ಪಾವತಿಸುವ ಕಂಪನಿಗಳು ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿಯಾಗ ಬಹುದು. (ವೇತನವನ್ನು ವಾರ್ಷಿಕ ರೂ. ಗಳಲ್ಲಿ ನೀಡಲಾಗಿದೆ

ವೃತ್ತಿಪರ ಕಾರ್ಯನಿರ್ವಾಹಕರು :- ವೃತ್ತಿಪರ ಕಾರ್ಯನಿರ್ವಾಹಕರನ್ನು ಸಂಸ್ಥೆ/ ಕಂಪನಿಗಳ ಆತ್ಮ ಎಂದು ಕರೆಯಬಹುದು. ಸಂಸ್ಥೆ ನಿರ್ವಹಿಸಬೇಕಾದ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸುವಂತೆ ನೋಡಿಕೊಳ್ಳುವುದು ಇವರ ಕಾಯಕ. ಇದಕ್ಕೆ ಪ್ರಾರಂಭಿಕ ಹಂತದಿಂದಲೇ ಕಠಿಣ ಪರಿಶ್ರಮ ಅಗತ್ಯ. ಒಂದು ಬಾರಿ ಪ್ರಾರಂಭಿಕ ಹಂತ ದಾಟಿದ ಬಳಿಕ ಮತ್ತೆ ಹಿಂದಿರುಗಿ ನೋಡುವ ಅವಶ್ಯಕತೆಯೇ ಇಲ್ಲ. ಈ ವೃತ್ತಿಯಲ್ಲಿ ಹೆಚ್ಚು ಹೆಚ್ಚು ಪರಿಣಿತಿ ಪಡೆದಂತೆ ಹೆಚ್ಚು ಹೆಚ್ಚು ವೇತನವನ್ನು ನಿರೀಕ್ಷಿಸಬಹುದು. ಪ್ರಾರಂಭಿಕ ಹಂತ – ರೂ. 3,೦೦,೦೦೦, ಮಧ್ಯಮ ಹಂತ – ರೂ. 25,೦೦,೦೦೦, ಅನುಭವಿ ಹಂತ- ರೂ. 8೦,೦೦,೦೦೦

ಬ್ಯಾಂಕ್ ಹೂಡಿಕೆದಾರ:
ಈ ವೃತ್ತಿಯಲ್ಲಿರುವವರು ಬ್ಯಾಂಕ್ ಹಾಗೂ ಇತರ ಹಣಕಾಸು ಸಂಸ್ಥೆಗಳಿಗೆ ಹಣ ಪಡೆಯುವಿಕೆ ಹಾಗೂ ಹೂಡಿಕೆಯ ಬಗ್ಗೆ ಸಲಹೆ ನೀಡುತ್ತಾರೆ. ಇವರು ಸತತವಾಗಿ ಮಾರುಕಟ್ಟೆಯ ಏರಿಳಿತ ಗಳನ್ನು ಅಭ್ಯಸಿಸುತ್ತಾ ಗ್ರಾಹಕರ ಮನೋಭಾವವನ್ನೂ ಪರಿಗಣಿಸಿ ಸಂಸ್ಥೆಗೆ ಲಾಭ ತರುವಂತಹ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇದೇ ಕಾರಣಕ್ಕೆ ಇವರಿಗೆ “Money Man” ಎಂಬ ಅನ್ವರ್ಥ ನಾಮವನ್ನೂ ನೀಡಲಾಗಿದೆ. ಪ್ರಾರಂಭಿಕ ಹಂತ- ರೂ. 12,೦೦,೦೦೦, ಮಧ್ಯಮ ಹಂತ – ರೂ. 3೦,೦೦,೦೦೦, ಅನುಭವಿ ಹಂತ- ರೂ.5೦,೦೦,೦೦೦+

ಚಾರ್ಟರ್ಡ್ ಅಕೌಂಟೆಂಟ್:
ಇವರು ಒಂದುಸಂಸ್ಥೆಯ ಲೆಕ್ಕಪತ್ರ ಹಾಗೂ ವ್ಯಾಪಾರದ ಮೇಲೆ ಹಿಡಿತವನ್ನಿರಿಸಿ ಕೊಂಡಿರುತ್ತಾರೆ. ಇವರು ತಮ್ಮ ಕೆಲಸದ ಬಗ್ಗೆ ಜಾಗರೂಕರಾಗಿದ್ದು, ಸಂಸ್ಥೆಯ ಹಣದ ವಿಲೇವಾರಿ ಹಾಗೂ ಆದಾಯದ ಬಗ್ಗೆ ವಿವರಗಳನ್ನು ನೀಡುವಂತಿರಬೇಕು ಹಾಗೂ ಸದಾ ಉತ್ತಮವಾಗಿ ಕಾಣಿಸಿಕೊಳ್ಳುವಂತಿರಬೇಕು. ಈ ವೃತ್ತಿ ಭಾರತದಲ್ಲಿ ಅತಿ ಗೌರವಾತ ಹಾಗೂ ಹೆಚ್ಚಿನ ಆದಾಯ ತರುವಂತದ್ದಾಗಿದೆ. ಪ್ರಾರಂಭಿಕ ಹಂತ – ರೂ. 5,5೦,೦೦೦, ಮಧ್ಯಮ ಹಂತ – ರೂ. 12,8೦,೦೦೦, ಅನುಭವಿ ಹಂತ – ರೂ. 25,7೦,೦೦೦
ತೈಲ ಮತ್ತು ನೈಸರ್ಗಿಕ ಅನಿಲ ವಿಭಾಗದ ವೃತ್ತಿಪರರು:
ಈ ವಿಭಾಗ ಇದುವರೆಗೆ ಎಂದೂ ಬತ್ತದ ಲಾಭದ ವೃತ್ತಿ ಎಂದು ಪರಿಗಣಿಸಲ್ಪಟ್ಟಿದೆ. ಈ ವಿಭಾಗದಲ್ಲಿರುವ ಕೆಲವು ವೃತ್ತಿಗಳು ಹೆಚ್ಚಿನ ವೇತನ ನೀಡುತ್ತವೆ. ಉದಾಹರಣೆಗೆ ಭೂ ಗರ್ಭ ಶಾಸ್ತ್ರಜ್ಞ, ಸಾಗರ ಅಭಿಯಂತರ ಇತ್ಯಾದಿ. ಅನುಭವಿ ಹಂತ – ರೂ. 15-2೦ ಲಕ್ಷ ನಿವ್ವಳ ಹಾಗೂ ಸಂಸ್ಥೆಯಿಂದ ಸಿಗುವ ಎಲ್ಲಾ ಸವಲತ್ತುಗಳು

ವಾಣಿಜ್ಯ ವಿಶ್ಲೇಷಕರು (ಬಿಸಿನೆಸ್ ಅನಾಲಿಸ್ಟ್):
ಇಂದು ಭಾರತದಲ್ಲಿಯೂ ವಾಣಿಜ್ಯ ವಹಿವಾಟು ಅತ್ಯಂತ ಪೈಪೋಟಿ ಹೊಂದಿದ್ದು, ಈ ವೃತ್ತಿಯಲ್ಲಿರು ವವರಿಗೆ ಪೈಪೋಟಿಯನ್ನು ಎದುರಿಸುವುದು ಹೇಗೆ ಎಂಬ ಸವಾಲನ್ನು ಎದುರಿಸಬೇಕಾಗುತ್ತದೆ. ಈ ವೃತ್ತಿಗೆಅತಿ ಹೆಚ್ಚು ಬುದ್ದಿ ಚಾಣಾಕ್ಷರು ಹಾಗೂ ತಾರ್ಕಿಕವಾಗಿ ಯೋಚಿಸುವ ವ್ಯಕ್ತಿಗಳ ಅಗತ್ಯವಿದೆ. ಈ ವೃತ್ತಿಯಲ್ಲಿರುವವರು ವಾಣಿಜ್ಯದ ಅಂಕಿ ಅಂಶಗಳನ್ನು ಗಣಿತದ ಸೂತ್ರಗಳ ಮೂಲಕ ವಿವರಿಸಬಲ್ಲವರಾಗಿರಬೇಕು ಹಾಗೂ ನಿತ್ಯವೂ ಬದಲಾಗುವ ತಂತ್ರಜ್ಞಾನವನ್ನು ತಮ್ಮ ವಾಣಿಜ್ಯ ವಹಿವಾಟಿನ ಏಳಿಗೆಗೆ ಹೇಗೆ ಬಳಸಿಕೊಳ್ಳ ಬಹುದು ಎಂಬುದನ್ನು ಎಲ್ಲರಿ ಗಿಂತ ಮೊದಲು ಅರಿತು ಅಳವಡಿಸಿ ಕೊಳ್ಳುವುದು ಇವರ ವೃತ್ತಿಯ ಪ್ರಮುಖಸವಾಲಾಗಿದೆ. ಅಂದಾಜು ವೇತನ: ಪ್ರಾರಂಭಿಕ ಹಂತ: ರೂ. 6,೦೦,೦೦೦

ವೈದ್ಯಕೀಯ ವೃತ್ತಿಪರರು:
ಈ ವೃತ್ತಿಯಲ್ಲಿ ಹಿಂಜರಿತ ಎಂಬುದೇ ಎಲ್ಲ. ಎಲ್ಲಿಯವರೆಗೆ ಮನುಷ್ಯರು ಇರುತ್ತಾರೋ ಅಲ್ಲಿಯವರೆಗೆ ಈ ವೃತ್ತಿಯಲ್ಲಿ ಗಳಿಕೆ ಇದ್ದೇ ಇರುತ್ತದೆ. ವಿಶ್ವದ ಅತ್ಯಂತ ಗೌರವಾನ್ವಿತ ಹಾಗೂ ಆದ್ಯತೆಯ ವೃತ್ತಿಯಾದ ವೈದ್ಯ ವೃತ್ತಿಯಲ್ಲಿ ಜನರು ವೈದ್ಯೋ ನಾರಾಯಣಃ ಹರಿ ಎಂದೇ ಪರಿಗಣಿಸುತ್ತಾರೆ. ಈ ವೃತ್ತಿಯಲ್ಲಿ ಪ್ರಾರಂಭಿಕ ಹಂತದಲ್ಲಿ ವೇತನ ಕಡಿಮೆ ಇದ್ದರೂ ದಿನಗಳೆದಂತೆ ವೇತನವೂ ಏರುತ್ತಾ ಹೋಗುತ್ತದೆ. ಸಾಮಾನ್ಯ ನೈಪುಣ್ಯತೆ – ರೂ. 4,8೦,೦೦೦, ಸಾಮಾನ್ಯ ಶಸ್ತ್ರ ಚಿಕಿತ್ಸಕ- ರೂ. 8,1೦,೦೦೦, ವೃತ್ತಿಪರ ವೈದ್ಯ- ರೂ.17,೦೦,೦೦೦

ವೈಮಾನಿಕ ವೃತ್ತಿ :
ಈ ವೃತ್ತಿಯಲ್ಲಿರುವವರಿಗೆ ಆದಾಯದ ಮಿತಿ ಆಗಸವೇ ಸರಿ. ಈ ವೃತ್ತಿಯಲ್ಲಿ ನೈಪುಣ್ಯತೆ ಪಡೆದವರು ವಾರ್ಷಿಕ ಇಪ್ಪತ್ತು ಲಕ್ಷದಷ್ಟು ವೇತನ ಪಡೆಯುತ್ತಾರೆ. ಸರಾಸರಿ ವೇತನ: ಕಮರ್ಷಿಯಲ್ ಪೈಲಟ್: ರೂ. 2೦,೦೦,೦೦೦, ಹೆಲಿಕಾಪ್ಟರ್ ಪೈಲಟ್- ರೂ. 18,೦೦,೦೦೦, ವಿಮಾನ ದುರಸ್ತಿ ಸಿಬ್ಬಂದಿ- ರೂ. 9,8೦,೦೦೦
ಕಾನೂನು ವೃತ್ತಿಪರರು :
ಖ್ಯಾತ ವಕೀಲರಿಗೆ ಉಚ್ಛಮಟ್ಟದ ನ್ಯಾಯಾಧೀಶರಾಗುವ ಅವಕಾಶ ತಾನೇ ತಾನಾಗಿ ಒದಗಿ ಬಂದಾಗ ಇದನ್ನು ಹಲವರು ನಿರಾಕರಿಸಿದ್ದಾರೆ. ಏಕೆಂದರೆ ವೃತ್ತಿಪರ ವಕೀಲರಾಗಿ ಗಳಿಸುದಷ್ಟು ವೇತನ ಉಚ್ಛನ್ಯಾಯಾಧೀಶರಿಗೆ ದೊರಕುವುದಿಲ್ಲ. ಇದು ವಾಸ್ತವ. ವೃತ್ತಿಪರ ವಕೀಲರಾಗಬೇಕಾದರೆ ಉನ್ನತ ಶಿಕ್ಷಣ, ಅಪಾರ ತಾಳ್ಮೆ, ಹಾಗೂ ಅದ್ಭುತ ವಾಕ್ಚತುರತೆಯ ಅಗತ್ಯವಿದೆ. ಈ ವೃತ್ತಿಯಲ್ಲಿ ಪಳಗುತ್ತಾ ಹೋದಂತೆ ಪ್ರತಿವಾದಕ್ಕೂ ಹೆಚ್ಚು ಹೆಚ್ಚಿನ ವೇತನವನ್ನು ನಿರೀಕ್ಷಿಸಬಹುದು. ಸರಾಸರಿ ವೇತನ: ಕಾರ್ಪೋರೇಟ್ (ಸಂಸ್ಥೆಗೆ ಮೀಸಲಾದ) ವಕೀಲರು- 6,1೦,೦೦೦, ಹಿರಿಯ ಅಟಾರ್ನಿ – 9,5೦,೦೦೦,

ಮಾರ್ಕೆಟಿಂಗ್ (ಮಾರುಕಟ್ಟೆ ಪ್ರವೀಣ):
ಯಾವುದೇ ವಹಿವಾಟಿನಲ್ಲಿ ಉತ್ಪನ್ನ ಅಥವಾ ಸೇವೆ ಮಾರಾಟ ವಾಗಿ ಹೋದಾಗ ಮಾತ್ರವೇ ಲಾಭ ಪಡೆಯಲು ಸಾಧ್ಯ. ಈ ವೃತ್ತಿಯಲ್ಲಿರುವವರು ಗ್ರಾಹಕರ ಅಂತಃಕರಣವನ್ನು ಅರಿತು ಪ್ರಲೋಭನೆಗಳನ್ನು ಒಡ್ಡಿ ಮಾರಾಟವನ್ನು ಹೆಚ್ಚಿಸಬೇಕಾಗುತ್ತದೆ. ಈ ತಂತ್ರಗಳು ಫಲ ಡಿದರೆ ಹೆಚ್ಚಿನ ವೇತನ ಮಾತ್ರವಲ್ಲ, ಸಂಸ್ಥೆಯ ಉನ್ನತ ಹುದ್ದೆಗಳನ್ನೂ ಪಡೆಯಲು ಸಾಧ್ಯ. ಇದಕ್ಕಾಗಿ ಮಾರುಕಟ್ಟೆಯ ಅಂತರಾಳವನ್ನು ಅರಿತು ಗ್ರಾಹಕರು ಈ ಉತ್ಪನ್ನಗಳಿಗೆ ಒಲವು ನೀಡುವಂತೆ ಉತ್ಪನ್ನ ಅಥವಾ ಸೇವೆಗಳನ್ನು ಬದಲಾವಣೆಗೊಳಪಡಿಸುವುದು ಸಹಾ ಇವರಿಗೆ ಕಾರ್ಯಗತ ವಾಗಿರಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 1,5೦,೦೦೦, ಮಧ್ಯಮ ಹಂತ- ರೂ. 5,೦೦,೦೦೦, ಅನುಭವಿ ಹಂತರೂ. 1೦,೦೦,೦೦೦+

ಮಾಹಿತಿ ತಂತ್ರಜ್ಞಾನ ಹಾಗೂ ಸಾಫ್ಟ್ವೇರ್ ಅಭಿಯಂತರರು:
ಇದೊಂದು ನಿತ್ಯಹರಿದ್ವರ್ಣದ ಉದ್ಯೋಗವಾಗಿದ್ದು ಹೆಚ್ಚಿನ ಆದಾಯವನ್ನು ಗಳಿಸಬಹುದು. ಇದಕ್ಕಾಗಿ ಕಂಪ್ಯೂಟರುಗಳ ಬಗ್ಗೆ ಆಳವಾದ ಅಧ್ಯಯನ ಹಾಗೂ ಕಂಪ್ಯೂಟರ್ ಭಾಷೇ ಅರ್ಥಮಾಡಿಕೊಳ್ಳುವ ಹಾಗೂ ಅಗತ್ಯಕ್ಕೆ ತಕ್ಕಂತೆ ಬರೆಯುವ ನೈಪುಣ್ಯತೆಯನ್ನು ಪಡೆಯಬೇಕಾಗುತ್ತದೆ. ಈ ವೃತ್ತಿಯಲ್ಲಿರುವವರು ಹೊಸ ಪ್ರೋಗ್ರಾಂಗಳನ್ನು ವಿನ್ಯಾಸಗೊಳಿಸುವ, ಹೊಸ ವ್ಯವಸ್ಥೆಯನ್ನು ಪ್ರತಿಷ್ಠಾಪಿಸುವ ಹಾಗೂ ನಿರ್ವಹಿಸುವ ಕಾರ್ಯಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಸರಾಸರಿ ವೇತನ: ಪ್ರಾರಂಭಿಕ ಹಂತ- ರೂ. 3,5೦,೦೦೦, ಮಧ್ಯಮ ಹಂತ- ರೂ. 8,3೦,೦೦೦, ಅನುಭವಿ ಹಂತ ರೂ. 15,5೦,೦೦೦
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…